<p><strong>ಪಣಜಿ, ಗೋವಾ (ಪಿಟಿಐ): </strong>ಮೂಢನಂಬಿಕೆ ವಿರೋಧಿ ಹೋರಾಟಗಾರ ನರೇಂದ್ರ ದಾಬೋಲ್ಕರ್ ಅವರ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಗೋವಾದಲ್ಲಿ ವಶಕ್ಕೆ ಪಡೆದಿದ್ದಾರೆ.</p>.<p>ಇಬ್ಬರು ವ್ಯಕ್ತಿಗಳನ್ನು ಹಳೆಯ ಗೋವಾದಲ್ಲಿ ಡಿಸೆಂಬರ್ 3 ರಂದು ವಶಕ್ಕೆ ಪಡೆಯಲಾಗಿದೆ ಎಂದು ಗೋವಾ ಉಪ ಪೊಲೀಸ್ ಮಹಾನಿರ್ದೇಶಕ ಒ.ಪಿ.ಮಿಶ್ರಾ ಶನಿವಾರ ತಿಳಿಸಿದ್ದಾರೆ.</p>.<p>ಪುಣೆ ಮತ್ತು ಗೋವಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ಗಳು ಎನ್ನಲಾದ ಮುಂಬೈ ಮೂಲದ ಶಂಕಿತರನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿಸಿರುವ ಮಿಶ್ರಾ, ಶಂಕಿತರ ಹೆಸರುಗಳನ್ನು ಬಹಿರಂಗ ಪಡಿಸಲು ಅವರು ನಿರಾಕರಿಸಿದ್ದಾರೆ.</p>.<p>ಉಭಯ ಆರೋಪಿಗಳನ್ನು ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಅವರ ವಾರ್ಷಿಕೋತ್ಸವ ನಡೆಯುತ್ತಿದ್ದ ಸ್ಥಳದಲ್ಲಿ ವಶಕ್ಕೆ ಪಡೆಯಲಾಗಿತ್ತು. ಅವರನ್ನು ತಕ್ಷಣವೇ ಪುಣೆಗೆ ಕರೆದೊಯ್ಯಲಾಗಿದೆ ಎಂದೂ ಮಿಶ್ರಾ ನುಡಿದಿದ್ದಾರೆ.</p>.<p>ಮೌಢ್ಯ ವಿರೋಧಿ ಹೋರಾಟಗಾರಾಗಿದ್ದ ದಾಬೋಲ್ಕರ್ ಅವರನ್ನು ಪುಣೆಯಲ್ಲಿ ಆಗಸ್ಟ್ 20 ರಂದು ಅಪರಿಚಿತ ದುಷ್ಕರ್ಮಿಗಳು ಗುಂಡಿಗೆ ಕೊಲೆ ಮಾಡಿದ್ದರು.</p>.<p>ಪುಣೆ ಪೊಲೀಸರು ಈವರೆಗೂ ಪ್ರಕರಣದ ಅಪರಾಧಿಗಳನ್ನು ಪತ್ತೆ ಮಾಡುವಲ್ಲಿ ವಿಫಲರಾಗಿದ್ದು, ದಾಬೋಲ್ಕರ್ ಅವರ ಕುಟುಂಬ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದೆ.<br /> <br /> ಈ ಮೊದಲು ದಾಬೋಲ್ಕರ್ ಕೊಲೆ ಪ್ರಕರಣ ಹಿಂದೆ ಬಲಪಂಥೀಯ ಉಗ್ರವಾದಿಗಳ ಕೈವಾಡವಿರಬಹುದು ಎಂದು ಶಂಕಿಸಲಾಗಿತ್ತು.</p>.<p>ಆದರೆ, ಪ್ರಕರಣ ಹಿಂದೆ ಬಲ ಪಂಥೀಯ ಕೈವಾಡದ ಬಗ್ಗೆ ಸುಳಿವು ನೀಡುವಂತಹ ಸಾಕ್ಷ್ಯಗಳಿಲ್ಲ ಎಂದು ಬಾಂಬೆ ಹೈಕೋರ್ಟ್ಗೆ ಪುಣೆ ಪೊಲೀಸರು ತಿಳಿಸಿದ್ದರು. ಬಾಂಬೆ ಹೈಕೋರ್ಟ್, ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ (ಎನ್ಐಎ) ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ, ಗೋವಾ (ಪಿಟಿಐ): </strong>ಮೂಢನಂಬಿಕೆ ವಿರೋಧಿ ಹೋರಾಟಗಾರ ನರೇಂದ್ರ ದಾಬೋಲ್ಕರ್ ಅವರ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಗೋವಾದಲ್ಲಿ ವಶಕ್ಕೆ ಪಡೆದಿದ್ದಾರೆ.</p>.<p>ಇಬ್ಬರು ವ್ಯಕ್ತಿಗಳನ್ನು ಹಳೆಯ ಗೋವಾದಲ್ಲಿ ಡಿಸೆಂಬರ್ 3 ರಂದು ವಶಕ್ಕೆ ಪಡೆಯಲಾಗಿದೆ ಎಂದು ಗೋವಾ ಉಪ ಪೊಲೀಸ್ ಮಹಾನಿರ್ದೇಶಕ ಒ.ಪಿ.ಮಿಶ್ರಾ ಶನಿವಾರ ತಿಳಿಸಿದ್ದಾರೆ.</p>.<p>ಪುಣೆ ಮತ್ತು ಗೋವಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ಗಳು ಎನ್ನಲಾದ ಮುಂಬೈ ಮೂಲದ ಶಂಕಿತರನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿಸಿರುವ ಮಿಶ್ರಾ, ಶಂಕಿತರ ಹೆಸರುಗಳನ್ನು ಬಹಿರಂಗ ಪಡಿಸಲು ಅವರು ನಿರಾಕರಿಸಿದ್ದಾರೆ.</p>.<p>ಉಭಯ ಆರೋಪಿಗಳನ್ನು ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಅವರ ವಾರ್ಷಿಕೋತ್ಸವ ನಡೆಯುತ್ತಿದ್ದ ಸ್ಥಳದಲ್ಲಿ ವಶಕ್ಕೆ ಪಡೆಯಲಾಗಿತ್ತು. ಅವರನ್ನು ತಕ್ಷಣವೇ ಪುಣೆಗೆ ಕರೆದೊಯ್ಯಲಾಗಿದೆ ಎಂದೂ ಮಿಶ್ರಾ ನುಡಿದಿದ್ದಾರೆ.</p>.<p>ಮೌಢ್ಯ ವಿರೋಧಿ ಹೋರಾಟಗಾರಾಗಿದ್ದ ದಾಬೋಲ್ಕರ್ ಅವರನ್ನು ಪುಣೆಯಲ್ಲಿ ಆಗಸ್ಟ್ 20 ರಂದು ಅಪರಿಚಿತ ದುಷ್ಕರ್ಮಿಗಳು ಗುಂಡಿಗೆ ಕೊಲೆ ಮಾಡಿದ್ದರು.</p>.<p>ಪುಣೆ ಪೊಲೀಸರು ಈವರೆಗೂ ಪ್ರಕರಣದ ಅಪರಾಧಿಗಳನ್ನು ಪತ್ತೆ ಮಾಡುವಲ್ಲಿ ವಿಫಲರಾಗಿದ್ದು, ದಾಬೋಲ್ಕರ್ ಅವರ ಕುಟುಂಬ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದೆ.<br /> <br /> ಈ ಮೊದಲು ದಾಬೋಲ್ಕರ್ ಕೊಲೆ ಪ್ರಕರಣ ಹಿಂದೆ ಬಲಪಂಥೀಯ ಉಗ್ರವಾದಿಗಳ ಕೈವಾಡವಿರಬಹುದು ಎಂದು ಶಂಕಿಸಲಾಗಿತ್ತು.</p>.<p>ಆದರೆ, ಪ್ರಕರಣ ಹಿಂದೆ ಬಲ ಪಂಥೀಯ ಕೈವಾಡದ ಬಗ್ಗೆ ಸುಳಿವು ನೀಡುವಂತಹ ಸಾಕ್ಷ್ಯಗಳಿಲ್ಲ ಎಂದು ಬಾಂಬೆ ಹೈಕೋರ್ಟ್ಗೆ ಪುಣೆ ಪೊಲೀಸರು ತಿಳಿಸಿದ್ದರು. ಬಾಂಬೆ ಹೈಕೋರ್ಟ್, ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ (ಎನ್ಐಎ) ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>