<p>ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ದಾಳಿಂಬೆ, ದ್ರಾಕ್ಷಿಗೆ ರೋಗ ಕಾಣಿಸಿಕೊಂಡು ನಷ್ಟ ಅನುಭವಿಸಿರುವ ರೈತರು ಪಡೆದ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು.<br /> <br /> ಸಾಧು ಸದ್ಧರ್ಮ ವೀರಶೈವ ಸಂಘ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ರೈತರಿಗೆ ಪರಿಹಾರವಾಗಿ ಸಾಲ ಮನ್ನಾ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ, ಸಾಲದ ಮೇಲಿನ ಬಡ್ಡಿ ₨ 500ರಿಂದ 600 ಕೋಟಿ ಮನ್ನಾ ಆಗಲಿದೆ ಎಂದು ಹೇಳಿದರು.<br /> <br /> ‘ಅಡಿಕೆ ಬೆಳೆ ನಿಷೇಧಿಸಲಾಗುತ್ತಿದೆ ಎನ್ನುವುದು ಸುಳ್ಳು. ಮುಖ್ಯಮಂತ್ರಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<br /> <br /> ಲೋಕಸಭೆ ಚುನಾವಣೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಹುಟ್ಟು ಹಾಕಿರುವ ಹುಸಿ ಇದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ದಾಳಿಂಬೆ, ದ್ರಾಕ್ಷಿಗೆ ರೋಗ ಕಾಣಿಸಿಕೊಂಡು ನಷ್ಟ ಅನುಭವಿಸಿರುವ ರೈತರು ಪಡೆದ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು.<br /> <br /> ಸಾಧು ಸದ್ಧರ್ಮ ವೀರಶೈವ ಸಂಘ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ರೈತರಿಗೆ ಪರಿಹಾರವಾಗಿ ಸಾಲ ಮನ್ನಾ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ, ಸಾಲದ ಮೇಲಿನ ಬಡ್ಡಿ ₨ 500ರಿಂದ 600 ಕೋಟಿ ಮನ್ನಾ ಆಗಲಿದೆ ಎಂದು ಹೇಳಿದರು.<br /> <br /> ‘ಅಡಿಕೆ ಬೆಳೆ ನಿಷೇಧಿಸಲಾಗುತ್ತಿದೆ ಎನ್ನುವುದು ಸುಳ್ಳು. ಮುಖ್ಯಮಂತ್ರಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<br /> <br /> ಲೋಕಸಭೆ ಚುನಾವಣೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಹುಟ್ಟು ಹಾಕಿರುವ ಹುಸಿ ಇದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>