<p>ಹೊಸದುರ್ಗ: ದಾಳಿಂಬೆ ಬೆಳೆಗೆ ತಗುಲುವ ರೋಗಗಳನ್ನು ನಿಯಂತ್ರಣಕ್ಕೆ ತಾರದೆ ಹೋದಲ್ಲಿ ರೈತರು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ ಎಂದು ಹಿರಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಮಾಡದಕರೆ ಹೋಬಳಿ ಅತ್ತಿಮಗೆ ಗ್ರಾಮದಲ್ಲಿ ದಾಳಿಂಬೆ ಬೆಳೆಗಾರರು, ತೋಟಗಾರಿಕೆ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ದಾಳಿಂಬೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ದಾಳಿಂಬೆ ಬೆಳೆಗೆ ಮಾರಕ ದುಂಡಾಣು ಅಂಗಮಾರಿ ರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ತೋಟಗಾರಿಕೆ ತಜ್ಞರು ಹಾಗೂ ವಿಜ್ಞಾನಿಗಳು ನೀಡಿರುವ ಸಲಹೆಗಳನ್ನು ಪಾಲಿಸುವುದರ ಜತೆಗೆ ಅಗತ್ಯ ಔಷಧಿ ಸಿಂಪಡಿಸುವ ಮೂಲಕ ರೋಗ ವ್ಯಾಪಿಸದಂತೆ ತಡೆಯಬೇಕು ಎಂದು ಹೇಳಿದರು.<br /> <br /> ದಾಳಿಂಬೆ ಬೆಳೆಯುವ ಮುನ್ನ ಬೆಳೆಗಾರರು ಉದ್ದೇಶಿತ ಜಮೀನಿನ ಮಣ್ಣು ಮತ್ತು ನೀರನ್ನು ಪರೀಕ್ಷೆ ಮಾಡಿಸಬೇಕು. ಅನುಭವಿ ತಜ್ಞರ ಸಲಹೆ ಪಡೆದು ಉತ್ತಮ ಗುಣಮಟ್ಟದ ಸಸಿಗಳನ್ನು ನಾಟಿ ಮಾಡಿ ಕ್ರಮಬದ್ಧವಾಗಿ ಗಿಡಗಳ ಆರೈಕೆ ಮಾಡಬೇಕು ಎಂದು ತಿಳಿಸಿದರು.<br /> <br /> ದಾಳಿಂಬೆ ಬೆಳೆಗೆ ಪ್ರೋತ್ಸಾಹ ನೀಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಲ್ಲಿ ಸಬ್ಸಿಡಿ ನೀಡುತ್ತಿದೆ. ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಲಾಭದಾಯಕವಾಗಿ ಬೆಳೆ ಬೆಳೆಯಬೇಕು ಎಂದು ಹೇಳಿದರು.<br /> <br /> ದಾಳಿಂಬೆ ತಜ್ಞ ಶ್ರೀನಿವಾಸ್ರಾಜು ಮಾತನಾಡಿ, ತಾಲ್ಲೂಕಿನಲ್ಲಿ ದಾಳಿಂಬೆ ಬೆಳೆಗೆ ಸೂಕ್ತವಾದ ವಾತಾವರಣ ಇದೆ. ಜತೆಗೆ ಭೂಮಿಯೂ ಫಲವತ್ತಾಗಿದೆ. ರೈತರು ಗಿಡಗಳನ್ನು ಉತ್ತಮವಾಗಿ ಆರೈಕೆ ಮಾಡಿ ಅಧಿಕ ಫಸಲು ಪಡೆದು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಗಳಿಸಬೇಕು ಎಂದು ಸಲಹೆ ಮಾಡಿದರು.<br /> <br /> ನಿವೃತ್ತ ಶಿಕ್ಷಕ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯ ಅರ್. ಹನುಮಂತಪ್ಪ. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗಮೂರ್ತಿ, ಹಿರಿಯ ದಾಳಿಂಬೆ ಬೆಳೆಗಾರ ಎಚ್.ಆರ್. ಕಲ್ಲೇಶ್, ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಹೆಬ್ಬಳ್ಳಿ ನಾಗರಾಜ್, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ದಾಳಿಂಬೆ ಬೆಳೆಗೆ ತಗುಲುವ ರೋಗಗಳನ್ನು ನಿಯಂತ್ರಣಕ್ಕೆ ತಾರದೆ ಹೋದಲ್ಲಿ ರೈತರು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ ಎಂದು ಹಿರಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಮಾಡದಕರೆ ಹೋಬಳಿ ಅತ್ತಿಮಗೆ ಗ್ರಾಮದಲ್ಲಿ ದಾಳಿಂಬೆ ಬೆಳೆಗಾರರು, ತೋಟಗಾರಿಕೆ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ದಾಳಿಂಬೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ದಾಳಿಂಬೆ ಬೆಳೆಗೆ ಮಾರಕ ದುಂಡಾಣು ಅಂಗಮಾರಿ ರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ತೋಟಗಾರಿಕೆ ತಜ್ಞರು ಹಾಗೂ ವಿಜ್ಞಾನಿಗಳು ನೀಡಿರುವ ಸಲಹೆಗಳನ್ನು ಪಾಲಿಸುವುದರ ಜತೆಗೆ ಅಗತ್ಯ ಔಷಧಿ ಸಿಂಪಡಿಸುವ ಮೂಲಕ ರೋಗ ವ್ಯಾಪಿಸದಂತೆ ತಡೆಯಬೇಕು ಎಂದು ಹೇಳಿದರು.<br /> <br /> ದಾಳಿಂಬೆ ಬೆಳೆಯುವ ಮುನ್ನ ಬೆಳೆಗಾರರು ಉದ್ದೇಶಿತ ಜಮೀನಿನ ಮಣ್ಣು ಮತ್ತು ನೀರನ್ನು ಪರೀಕ್ಷೆ ಮಾಡಿಸಬೇಕು. ಅನುಭವಿ ತಜ್ಞರ ಸಲಹೆ ಪಡೆದು ಉತ್ತಮ ಗುಣಮಟ್ಟದ ಸಸಿಗಳನ್ನು ನಾಟಿ ಮಾಡಿ ಕ್ರಮಬದ್ಧವಾಗಿ ಗಿಡಗಳ ಆರೈಕೆ ಮಾಡಬೇಕು ಎಂದು ತಿಳಿಸಿದರು.<br /> <br /> ದಾಳಿಂಬೆ ಬೆಳೆಗೆ ಪ್ರೋತ್ಸಾಹ ನೀಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಲ್ಲಿ ಸಬ್ಸಿಡಿ ನೀಡುತ್ತಿದೆ. ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಲಾಭದಾಯಕವಾಗಿ ಬೆಳೆ ಬೆಳೆಯಬೇಕು ಎಂದು ಹೇಳಿದರು.<br /> <br /> ದಾಳಿಂಬೆ ತಜ್ಞ ಶ್ರೀನಿವಾಸ್ರಾಜು ಮಾತನಾಡಿ, ತಾಲ್ಲೂಕಿನಲ್ಲಿ ದಾಳಿಂಬೆ ಬೆಳೆಗೆ ಸೂಕ್ತವಾದ ವಾತಾವರಣ ಇದೆ. ಜತೆಗೆ ಭೂಮಿಯೂ ಫಲವತ್ತಾಗಿದೆ. ರೈತರು ಗಿಡಗಳನ್ನು ಉತ್ತಮವಾಗಿ ಆರೈಕೆ ಮಾಡಿ ಅಧಿಕ ಫಸಲು ಪಡೆದು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಗಳಿಸಬೇಕು ಎಂದು ಸಲಹೆ ಮಾಡಿದರು.<br /> <br /> ನಿವೃತ್ತ ಶಿಕ್ಷಕ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯ ಅರ್. ಹನುಮಂತಪ್ಪ. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗಮೂರ್ತಿ, ಹಿರಿಯ ದಾಳಿಂಬೆ ಬೆಳೆಗಾರ ಎಚ್.ಆರ್. ಕಲ್ಲೇಶ್, ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಹೆಬ್ಬಳ್ಳಿ ನಾಗರಾಜ್, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>