<p><strong>ನವದೆಹಲಿ (ಪಿಟಿಐ): </strong>ತೆರಿಗೆ ಹಣ ವಂಚನೆ ಸುಳಿವಿನ ಹಿನ್ನೆಲೆಯಲ್ಲಿ ತಪಾಸಣೆಗೆಂದು ಬಂದ ಅಧಿಕಾರಿಗಳ ಮೇಲೆ ನಾಯಿ ಛೂ ಬಿಟ್ಟು, ಅವರನ್ನು ಸ್ಥಳದಿಂದ ಓಡಿಸಲು ಯತ್ನಿಸಿದ ಘಟನೆ ನಡೆದಿದೆ.<br /> <br /> ಕೇಂದ್ರೀಯ ಅಬಕಾರಿ ವಿಚಕ್ಷಣಾ ಮಹಾ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶದ ಮುಜಾಫರ್ನಗರದ ತ್ರಿಕೂಟ್ ಐರನ್ ಅಂಡ್ ಸ್ಟೀಲ್ ಕಾಸ್ಟಿಂಗ್ ಲಿಮಿಟೆಡ್ ನಿರ್ದೇಶಕರ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದರು. ಈ ಪೈಕಿ ತಮ್ಮ ನಿವಾಸದಲ್ಲಿ ತಪಾಸಣೆ ನಡೆಸಲು ಮುಂದಾದ ಅಧಿಕಾರಿಗಳ ಮೇಲೆ ನಿರ್ದೇಶಕರೊಬ್ಬರು ನಾಯಿ ಛೂ ಬಿಟ್ಟ ಪ್ರಕರಣ ನಡೆಯಿತು.<br /> <br /> ಅಧಿಕಾರಿಗಳು ನಾಯಿಗಳನ್ನು ಹಿಮ್ಮೆಟ್ಟಿಸುತ್ತಿರುವಾಗಲೇ, ಆ ನಿರ್ದೇಶಕ ತಮ್ಮಲ್ಲಿದ್ದ ಕಂಪ್ಯೂಟರ್ನಿಂದ ಹಾರ್ಡ್ಡಿಸ್ಕ್ ಹೊರತೆಗೆಯಲು ಪ್ರಯತ್ನಿಸಿದ ಘಟನೆಯೂ ನಡೆಯಿತು. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ, ತಪಾಸಣೆ ಮುಂದುವರಿಸಿದ ಅಧಿಕಾರಿಗಳು ಆ ಹಾರ್ಡ್ಡಿಸ್ಕ್ ವಶಪಡಿಸಿಕೊಂಡರು. ಹಲವು ಬಗೆಯ ವಂಚನೆ ವಿಧಾನ ಅನುಸರಿಸಿ, ಮಾರಾಟದ ಪ್ರಮಾಣ ಕಡಿಮೆ ಎಂಬುದಾಗಿ ಲೆಕ್ಕದಲ್ಲಿ ತೋರಿಸಲಾಗುತ್ತಿತ್ತು. ಇದರಿಂದ ಸುಮಾರು 20 ಕೋಟಿ ರೂಪಾಯಿ ವಂಚನೆ ಎಸಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ನಿರ್ದೇಶಕರ ನಿವಾಸದೊಳಗಿನ ಅಡುಗೆ ಹಾಗೂ ಇತರ ಕೊಠಡಿಗಳಲ್ಲಿ ರಹಸ್ಯವಾಗಿ ಕಾರ್ಯಾಲಯ ನಿರ್ಮಿಸಲಾಗಿದ್ದು, ಅಲ್ಲಿ ಕಂಪ್ಯೂಟರ್ಗಳನ್ನು ಕೂಡ ಅಳವಡಿಸಲಾಗಿತ್ತು. ಆಯ್ದ ನೌಕರರು ಮಾತ್ರ ಇಲ್ಲಿಗೆ ಬಂದು, ಕೆಲಸ ನಿರ್ವಹಿಸುತ್ತಿದ್ದರು. ಈ ಕಂಪ್ಯೂಟರ್ಗಳ ಹಾರ್ಡ್ಡಿಸ್ಕ್ನಲ್ಲಿದ್ದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.<br /> <br /> ನಾಯಿಗಳು ನಡೆಸಿದ ದಾಳಿಗೆ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅವರ ಮೇಲೆ ನಾಯಿಗಳು ದಾಳಿ ನಡೆಸಲು ಪ್ರಚೋದಿಸಿದ ಆರೋಪದ ಮೇಲೆ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ತೆರಿಗೆ ಹಣ ವಂಚನೆ ಸುಳಿವಿನ ಹಿನ್ನೆಲೆಯಲ್ಲಿ ತಪಾಸಣೆಗೆಂದು ಬಂದ ಅಧಿಕಾರಿಗಳ ಮೇಲೆ ನಾಯಿ ಛೂ ಬಿಟ್ಟು, ಅವರನ್ನು ಸ್ಥಳದಿಂದ ಓಡಿಸಲು ಯತ್ನಿಸಿದ ಘಟನೆ ನಡೆದಿದೆ.<br /> <br /> ಕೇಂದ್ರೀಯ ಅಬಕಾರಿ ವಿಚಕ್ಷಣಾ ಮಹಾ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶದ ಮುಜಾಫರ್ನಗರದ ತ್ರಿಕೂಟ್ ಐರನ್ ಅಂಡ್ ಸ್ಟೀಲ್ ಕಾಸ್ಟಿಂಗ್ ಲಿಮಿಟೆಡ್ ನಿರ್ದೇಶಕರ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದರು. ಈ ಪೈಕಿ ತಮ್ಮ ನಿವಾಸದಲ್ಲಿ ತಪಾಸಣೆ ನಡೆಸಲು ಮುಂದಾದ ಅಧಿಕಾರಿಗಳ ಮೇಲೆ ನಿರ್ದೇಶಕರೊಬ್ಬರು ನಾಯಿ ಛೂ ಬಿಟ್ಟ ಪ್ರಕರಣ ನಡೆಯಿತು.<br /> <br /> ಅಧಿಕಾರಿಗಳು ನಾಯಿಗಳನ್ನು ಹಿಮ್ಮೆಟ್ಟಿಸುತ್ತಿರುವಾಗಲೇ, ಆ ನಿರ್ದೇಶಕ ತಮ್ಮಲ್ಲಿದ್ದ ಕಂಪ್ಯೂಟರ್ನಿಂದ ಹಾರ್ಡ್ಡಿಸ್ಕ್ ಹೊರತೆಗೆಯಲು ಪ್ರಯತ್ನಿಸಿದ ಘಟನೆಯೂ ನಡೆಯಿತು. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ, ತಪಾಸಣೆ ಮುಂದುವರಿಸಿದ ಅಧಿಕಾರಿಗಳು ಆ ಹಾರ್ಡ್ಡಿಸ್ಕ್ ವಶಪಡಿಸಿಕೊಂಡರು. ಹಲವು ಬಗೆಯ ವಂಚನೆ ವಿಧಾನ ಅನುಸರಿಸಿ, ಮಾರಾಟದ ಪ್ರಮಾಣ ಕಡಿಮೆ ಎಂಬುದಾಗಿ ಲೆಕ್ಕದಲ್ಲಿ ತೋರಿಸಲಾಗುತ್ತಿತ್ತು. ಇದರಿಂದ ಸುಮಾರು 20 ಕೋಟಿ ರೂಪಾಯಿ ವಂಚನೆ ಎಸಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ನಿರ್ದೇಶಕರ ನಿವಾಸದೊಳಗಿನ ಅಡುಗೆ ಹಾಗೂ ಇತರ ಕೊಠಡಿಗಳಲ್ಲಿ ರಹಸ್ಯವಾಗಿ ಕಾರ್ಯಾಲಯ ನಿರ್ಮಿಸಲಾಗಿದ್ದು, ಅಲ್ಲಿ ಕಂಪ್ಯೂಟರ್ಗಳನ್ನು ಕೂಡ ಅಳವಡಿಸಲಾಗಿತ್ತು. ಆಯ್ದ ನೌಕರರು ಮಾತ್ರ ಇಲ್ಲಿಗೆ ಬಂದು, ಕೆಲಸ ನಿರ್ವಹಿಸುತ್ತಿದ್ದರು. ಈ ಕಂಪ್ಯೂಟರ್ಗಳ ಹಾರ್ಡ್ಡಿಸ್ಕ್ನಲ್ಲಿದ್ದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.<br /> <br /> ನಾಯಿಗಳು ನಡೆಸಿದ ದಾಳಿಗೆ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅವರ ಮೇಲೆ ನಾಯಿಗಳು ದಾಳಿ ನಡೆಸಲು ಪ್ರಚೋದಿಸಿದ ಆರೋಪದ ಮೇಲೆ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>