<p>ದಾವಣಗೆರೆ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ಮಧ್ಯೆ ಘರ್ಷಣೆ ನಡೆದು ಕಲ್ಲುತೂರಾಟ, ವಾಹನಗಳಿಗೆ ಬೆಂಕಿ, ಲಾಠಿ ಪ್ರಹಾರ ಜರುಗಿ 14ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶುಕ್ರವಾರ ವಿನೋಬನಗರದಲ್ಲಿ ನಡೆದಿದೆ.<br /> <br /> ಮಧ್ಯಾಹ್ನ 2ಕ್ಕೆ ಆರಂಭವಾದ ಘರ್ಷಣೆ ರಾತ್ರಿವರೆಗೂ ಮುಂದುವರಿದಿದೆ. ಅನೇಕ ಮನೆಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಕಿಟಕಿ ಗಾಜುಗಳು ಪುಡಿಯಾಗಿವೆ. <br /> <br /> ನಿಷೇಧಾಜ್ಞೆ ಜಾರಿ: ಹೆಚ್ಚುವರಿ ಎಸ್ಪಿ ಅನುಪಮ್ ಅಗರ್ವಾಲ್ ಅವರ ಜೀಪಿನ ಮೇಲೂ ಕಲ್ಲು ತೂರಾಟ ನಡೆದಿದೆ. ವಿನೋಬನಗರ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಯಾಗಿದೆ.<br /> <br /> <strong>ಘಟನೆ ವಿವರ: </strong>ವಿನೋಬನಗರ ಎರಡನೇ ಮುಖ್ಯರಸ್ತೆಯ ಮಸೀದಿಯಿಂದ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ಯುವಕರು ಇನ್ನೊಂದು ಕೋಮಿನ ಯುವಕರ ಮೇಲೆ ಹಲ್ಲೆ ನಡೆಸಿದರು ಎಂಬ ಸುದ್ದಿ ಹರಡಿತು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಇನ್ನೊಂದು ಕೋಮಿನ ಸಂಘಟನೆಯ ಯುವಕರು ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದರು. <br /> <br /> ಎರಡೂ ಕಡೆಯ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಹಲ್ಲೆಗೆ ಮುಂದಾದರು. ಭಾರೀ ಸಂಖ್ಯೆಯ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಬೇಕಾಯಿತು. ಸಿದ್ಧಿವಿನಾಯಕ ದೇವಸ್ಥಾನದ ಬಳಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಬಳಸಲು ಸಿದ್ಧರಾದರು. ಈ ವೇಳೆಗೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿತು. <br /> <br /> ಘಟನೆಯಲ್ಲಿ ಅದೇ ಗುಂಪಿನಲ್ಲಿದ್ದ ಯುವಕನಿಗೆ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ. ಸ್ಕೂಟರ್,ಆಟೋಗಳಿಗೆ ಬೆಂಕಿ ಹಚ್ಚಲಾಗಿದೆ.<br /> ವಿನೋಬನಗರದ ಮನೆಗಳ ಕಿಟಕಿ ಗಾಜುಗಳು ಒಡೆದಿವೆ. ಈ ಪ್ರದೇಶದ ಅಂಗಡಿ-ಮುಂಗಟ್ಟು ಮುಚ್ಚಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ಮಧ್ಯೆ ಘರ್ಷಣೆ ನಡೆದು ಕಲ್ಲುತೂರಾಟ, ವಾಹನಗಳಿಗೆ ಬೆಂಕಿ, ಲಾಠಿ ಪ್ರಹಾರ ಜರುಗಿ 14ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶುಕ್ರವಾರ ವಿನೋಬನಗರದಲ್ಲಿ ನಡೆದಿದೆ.<br /> <br /> ಮಧ್ಯಾಹ್ನ 2ಕ್ಕೆ ಆರಂಭವಾದ ಘರ್ಷಣೆ ರಾತ್ರಿವರೆಗೂ ಮುಂದುವರಿದಿದೆ. ಅನೇಕ ಮನೆಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಕಿಟಕಿ ಗಾಜುಗಳು ಪುಡಿಯಾಗಿವೆ. <br /> <br /> ನಿಷೇಧಾಜ್ಞೆ ಜಾರಿ: ಹೆಚ್ಚುವರಿ ಎಸ್ಪಿ ಅನುಪಮ್ ಅಗರ್ವಾಲ್ ಅವರ ಜೀಪಿನ ಮೇಲೂ ಕಲ್ಲು ತೂರಾಟ ನಡೆದಿದೆ. ವಿನೋಬನಗರ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಯಾಗಿದೆ.<br /> <br /> <strong>ಘಟನೆ ವಿವರ: </strong>ವಿನೋಬನಗರ ಎರಡನೇ ಮುಖ್ಯರಸ್ತೆಯ ಮಸೀದಿಯಿಂದ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ಯುವಕರು ಇನ್ನೊಂದು ಕೋಮಿನ ಯುವಕರ ಮೇಲೆ ಹಲ್ಲೆ ನಡೆಸಿದರು ಎಂಬ ಸುದ್ದಿ ಹರಡಿತು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಇನ್ನೊಂದು ಕೋಮಿನ ಸಂಘಟನೆಯ ಯುವಕರು ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದರು. <br /> <br /> ಎರಡೂ ಕಡೆಯ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಹಲ್ಲೆಗೆ ಮುಂದಾದರು. ಭಾರೀ ಸಂಖ್ಯೆಯ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಬೇಕಾಯಿತು. ಸಿದ್ಧಿವಿನಾಯಕ ದೇವಸ್ಥಾನದ ಬಳಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಬಳಸಲು ಸಿದ್ಧರಾದರು. ಈ ವೇಳೆಗೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿತು. <br /> <br /> ಘಟನೆಯಲ್ಲಿ ಅದೇ ಗುಂಪಿನಲ್ಲಿದ್ದ ಯುವಕನಿಗೆ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ. ಸ್ಕೂಟರ್,ಆಟೋಗಳಿಗೆ ಬೆಂಕಿ ಹಚ್ಚಲಾಗಿದೆ.<br /> ವಿನೋಬನಗರದ ಮನೆಗಳ ಕಿಟಕಿ ಗಾಜುಗಳು ಒಡೆದಿವೆ. ಈ ಪ್ರದೇಶದ ಅಂಗಡಿ-ಮುಂಗಟ್ಟು ಮುಚ್ಚಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>