<p>ಬೆಂಗಳೂರು: ನಗರದ ದಾಸಪ್ಪ ಆಸ್ಪತ್ರೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ಮೇಯರ್ ಡಿ. ವೆಂಕಟೇಶಮೂರ್ತಿ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಕೇಂದ್ರ ಕಚೇರಿಯ ಹಿಂಭಾಗದಲ್ಲಿರುವ ಸಂಕೀರ್ಣದಲ್ಲಿ ಪಾಲಿಕೆ ಸದಸ್ಯರಿಗಾಗಿ ಹೆಲ್ತ್ ಕ್ಲಬ್ ಸ್ಥಾಪಿಸಲಾಗುವುದು ಎಂದು ಹೇಳಿದರು.<br /> <br /> ನಗರದಲ್ಲಿ ಡೆಂಗೆ, ಚಿಕುನ್ಗುನ್ಯಾ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಪಾಲಿಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.<br /> <br /> ಸೊಳ್ಳೆ ಕಾಟ ಹೆಚ್ಚಿರುವಂತಹ ಪ್ರದೇಶಗಳಲ್ಲಿ ವಾರ್ಡ್ಗೆ ಮೂವರು ಸಿಬ್ಬಂದಿಗಳನ್ನು ನಿಯೋಜಿಸಿ ಔಷಧಿ ಸಿಂಪಡಿಸುವಂತೆ ಸೂಚಿಸಲಾಗಿದೆ. ಪಾಲಿಕೆಯ ಎಲ್ಲ ಆಸ್ಪತ್ರೆಗಳಲ್ಲಿ ಡೆಂಗೆ, ಚಿಕುನ್ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ರೋಗಿಗಳಿಗೆ ಚಿಕಿತ್ಸೆ ನೀಡಲು ಔಷಧಿ ದಾಸ್ತಾನಿಡುವಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.<br /> <br /> `ನಗರದಲ್ಲಿ ಇದುವರೆಗೆ 45 ಮಂದಿಗೆ ಡೆಂಗೆ ಹಾಗೂ ಮೂವರಿಗೆ ಚಿಕುನ್ಗುನ್ಯಾ ರೋಗ ತಗುಲಿದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> `ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಅವರೊಂದಿಗೂ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ. ಪಾಲಿಕೆಗೆ ಆಗಮಿಸಿ ಆರೋಗ್ಯಾಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ~ ಮೇಯರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ದಾಸಪ್ಪ ಆಸ್ಪತ್ರೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ಮೇಯರ್ ಡಿ. ವೆಂಕಟೇಶಮೂರ್ತಿ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಕೇಂದ್ರ ಕಚೇರಿಯ ಹಿಂಭಾಗದಲ್ಲಿರುವ ಸಂಕೀರ್ಣದಲ್ಲಿ ಪಾಲಿಕೆ ಸದಸ್ಯರಿಗಾಗಿ ಹೆಲ್ತ್ ಕ್ಲಬ್ ಸ್ಥಾಪಿಸಲಾಗುವುದು ಎಂದು ಹೇಳಿದರು.<br /> <br /> ನಗರದಲ್ಲಿ ಡೆಂಗೆ, ಚಿಕುನ್ಗುನ್ಯಾ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಪಾಲಿಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.<br /> <br /> ಸೊಳ್ಳೆ ಕಾಟ ಹೆಚ್ಚಿರುವಂತಹ ಪ್ರದೇಶಗಳಲ್ಲಿ ವಾರ್ಡ್ಗೆ ಮೂವರು ಸಿಬ್ಬಂದಿಗಳನ್ನು ನಿಯೋಜಿಸಿ ಔಷಧಿ ಸಿಂಪಡಿಸುವಂತೆ ಸೂಚಿಸಲಾಗಿದೆ. ಪಾಲಿಕೆಯ ಎಲ್ಲ ಆಸ್ಪತ್ರೆಗಳಲ್ಲಿ ಡೆಂಗೆ, ಚಿಕುನ್ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ರೋಗಿಗಳಿಗೆ ಚಿಕಿತ್ಸೆ ನೀಡಲು ಔಷಧಿ ದಾಸ್ತಾನಿಡುವಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.<br /> <br /> `ನಗರದಲ್ಲಿ ಇದುವರೆಗೆ 45 ಮಂದಿಗೆ ಡೆಂಗೆ ಹಾಗೂ ಮೂವರಿಗೆ ಚಿಕುನ್ಗುನ್ಯಾ ರೋಗ ತಗುಲಿದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> `ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಅವರೊಂದಿಗೂ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ. ಪಾಲಿಕೆಗೆ ಆಗಮಿಸಿ ಆರೋಗ್ಯಾಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ~ ಮೇಯರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>