<p>ಬೆಂಗಳೂರು: ಪ್ರಕೃತಿ ವಿಕೋಪ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ 10 ನಿಯಂತ್ರಣ ಕೊಠಡಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ.<br /> <br /> ನಿಯಂತ್ರಣ ಕೊಠಡಿಗಳು ವಾರದ ಏಳು ದಿನಗಳಲ್ಲಿಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ವೈರ್ಲೆಸ್ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪಾಲಿಕೆ ನಿಯಂತ್ರಣ ಕೊಠಡಿಗಳಲ್ಲಿ 13 ಪ್ರಹರಿ ವಾಹನಗಳ ಜತೆಗೆ, 200 ಮಂದಿ ಗ್ಯಾಂಗ್ಮೆನ್ಗಳು ಎಂತಹುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆ. ಇನ್ನು ಅರಣ್ಯ ಘಟಕದಲ್ಲಿ 20 ಮರ ಕಡಿಯುವ ತಂಡಗಳನ್ನು ಸಜ್ಜಾಗಿಡಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಎಂಟು ಜನರಂತೆ 160 ಮಂದಿ ಗ್ಯಾಂಗ್ಮೆನ್ಗಳು ಕಾರ್ಯನಿರ್ವಹಿಸಲಿದ್ದಾರೆ. <br /> <br /> ಈ ತಂಡಗಳು ಮರ ಉರುಳುವ ಸ್ಥಳಕ್ಕೆ ತಕ್ಷಣ ಧಾವಿಸಿ ಒಂದು ಗಂಟೆಯೊಳಗಾಗಿ ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿವೆ. ಸಣ್ಣ ಪುಟ್ಟ ಕೊಂಬೆ-ರೆಂಬೆಗಳನ್ನು ಸಾಗಿಸಲು ಸಿಬ್ಬಂದಿಗೆ ವಾಹನ ಸೌಲಭ್ಯ ಕಲ್ಪಿಸಲಾಗಿದ್ದು, ಪವರ್ ಸಾ, ಹಗ್ಗ, ಮಚ್ಚು ಮತ್ತಿತರ ಸಲಕರಣೆಗಳನ್ನೂ ಒದಗಿಸಲಾಗಿದೆ.<br /> ಮಳೆಗಾಲದಲ್ಲಿ ಬೃಹತ್ ಮಳೆ ನೀರಿನ ಕಾಲುವೆಗಳು ಉಕ್ಕಿ ಹರಿದು ಜಲಾವೃತಗೊಳ್ಳಬಹುದಾದಂತಹ 70 ತಗ್ಗು ಪ್ರದೇಶಗಳನ್ನು ಗುರುತಿಸಲಾಗಿದೆ. <br /> <br /> ಈ ತಗ್ಗು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕಾಮಗಾರಿಗಳನ್ನು ತಡೆಯಲು 116 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪ್ರಕೃತಿ ವಿಕೋಪ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ 10 ನಿಯಂತ್ರಣ ಕೊಠಡಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ.<br /> <br /> ನಿಯಂತ್ರಣ ಕೊಠಡಿಗಳು ವಾರದ ಏಳು ದಿನಗಳಲ್ಲಿಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ವೈರ್ಲೆಸ್ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪಾಲಿಕೆ ನಿಯಂತ್ರಣ ಕೊಠಡಿಗಳಲ್ಲಿ 13 ಪ್ರಹರಿ ವಾಹನಗಳ ಜತೆಗೆ, 200 ಮಂದಿ ಗ್ಯಾಂಗ್ಮೆನ್ಗಳು ಎಂತಹುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆ. ಇನ್ನು ಅರಣ್ಯ ಘಟಕದಲ್ಲಿ 20 ಮರ ಕಡಿಯುವ ತಂಡಗಳನ್ನು ಸಜ್ಜಾಗಿಡಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಎಂಟು ಜನರಂತೆ 160 ಮಂದಿ ಗ್ಯಾಂಗ್ಮೆನ್ಗಳು ಕಾರ್ಯನಿರ್ವಹಿಸಲಿದ್ದಾರೆ. <br /> <br /> ಈ ತಂಡಗಳು ಮರ ಉರುಳುವ ಸ್ಥಳಕ್ಕೆ ತಕ್ಷಣ ಧಾವಿಸಿ ಒಂದು ಗಂಟೆಯೊಳಗಾಗಿ ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿವೆ. ಸಣ್ಣ ಪುಟ್ಟ ಕೊಂಬೆ-ರೆಂಬೆಗಳನ್ನು ಸಾಗಿಸಲು ಸಿಬ್ಬಂದಿಗೆ ವಾಹನ ಸೌಲಭ್ಯ ಕಲ್ಪಿಸಲಾಗಿದ್ದು, ಪವರ್ ಸಾ, ಹಗ್ಗ, ಮಚ್ಚು ಮತ್ತಿತರ ಸಲಕರಣೆಗಳನ್ನೂ ಒದಗಿಸಲಾಗಿದೆ.<br /> ಮಳೆಗಾಲದಲ್ಲಿ ಬೃಹತ್ ಮಳೆ ನೀರಿನ ಕಾಲುವೆಗಳು ಉಕ್ಕಿ ಹರಿದು ಜಲಾವೃತಗೊಳ್ಳಬಹುದಾದಂತಹ 70 ತಗ್ಗು ಪ್ರದೇಶಗಳನ್ನು ಗುರುತಿಸಲಾಗಿದೆ. <br /> <br /> ಈ ತಗ್ಗು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕಾಮಗಾರಿಗಳನ್ನು ತಡೆಯಲು 116 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>