<p><strong>ಚಿತ್ರದುರ್ಗ: </strong>ದೀನರು, ದುರ್ಬಲರು, ಅಂಗವಿಕಲರುಗಳಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಬೆಳಸಿಕೊಳ್ಳಬೇಕು ಎಂದು ಖ್ಯಾತ ಪ್ರವಚನಕಾರರೂ, ಹಾಸ್ಯ ಕಲಾವಿದರಾದ ಇಂದುಮತಿ ಸಾಲಿಮಠ ನೀಡಿದರು.<br /> <br /> ಬಸವಕೇಂದ್ರ, ಮುರುಘಾಮಠದ ವತಿಯಿಂದ ಶರಣಸಂಸ್ಕತಿ ಉತ್ಸವ 2011ರ ಅಂಗವಾಗಿ ಮುರುಘಾಮಠದಲ್ಲಿ ಆಯೋಜಿಸಿದ್ದ ವಿಶೇಷ ಪ್ರವಚನ ಮಾಲೆಯಲ್ಲಿ ಅವರು ಮಾತನಾಡಿದರು.<br /> ದೇವರು ದಯಾಮಯ. ಅವನು ಕಣ್ಣಿಗೆ ಕಾಣದವ. ದೀನ ದಲಿತರ ಏಳ್ಗೆಗೆ ಸೇವೆ ಸಲ್ಲಿಸಿದರೆ ಅದುವೇ ದೇವಪೂಜೆ. ಆ ನಿಟ್ಟಿನಲ್ಲಿ ನಾವಿಂದು ಸಾಗಬೇಕಿದೆ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಎಲ್ಲ ರೋಗಗಳಿಗೆ ಮೂಲ ಮದ್ದು ಶಿವಯೋಗದಲ್ಲಿದೆ. ಅದು ಹೀಗೆ ಪ್ರವಚನಕ್ಕೆ ಬರುವ ಕೇಳುವ ರೂಢಿ ಯಿಂದ ತಾನಾಗಿಯೇ ಮನುಷ್ಯನಲ್ಲಿರುವ ದುರಾಸೆ ದುರ್ಗುಣಗಳನ್ನು ಕಡಿಮೆ ಮಾಡುತ್ತದೆ. ಆ ನಿಟ್ಟಿನಲ್ಲಿ ಶರಣಸಂಸ್ಕತಿ ಉತ್ಸವಕ್ಕೆ ಪೂರ್ವಭಾವಿಯಾಗಿ ಆಯೋಜಿಸಿರುವ ಈ ವಿಶೇಷ ಪ್ರವಚನಮಾಲೆಗೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.<br /> <br /> ಜಮುರಾ ಕಲಾಲೋಕದ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ಗಾರೇಹಟ್ಟಿ ಬೃಹನ್ಮಠ ಪ್ರೌಢಶಾಲೆ ಶಿಕ್ಷಕ ಅಶೋಕ್ ಸ್ವಾಗತಿಸಿದರು. ಸಿ.ಎಂ. ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ವೇದಮೂರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ದೀನರು, ದುರ್ಬಲರು, ಅಂಗವಿಕಲರುಗಳಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಬೆಳಸಿಕೊಳ್ಳಬೇಕು ಎಂದು ಖ್ಯಾತ ಪ್ರವಚನಕಾರರೂ, ಹಾಸ್ಯ ಕಲಾವಿದರಾದ ಇಂದುಮತಿ ಸಾಲಿಮಠ ನೀಡಿದರು.<br /> <br /> ಬಸವಕೇಂದ್ರ, ಮುರುಘಾಮಠದ ವತಿಯಿಂದ ಶರಣಸಂಸ್ಕತಿ ಉತ್ಸವ 2011ರ ಅಂಗವಾಗಿ ಮುರುಘಾಮಠದಲ್ಲಿ ಆಯೋಜಿಸಿದ್ದ ವಿಶೇಷ ಪ್ರವಚನ ಮಾಲೆಯಲ್ಲಿ ಅವರು ಮಾತನಾಡಿದರು.<br /> ದೇವರು ದಯಾಮಯ. ಅವನು ಕಣ್ಣಿಗೆ ಕಾಣದವ. ದೀನ ದಲಿತರ ಏಳ್ಗೆಗೆ ಸೇವೆ ಸಲ್ಲಿಸಿದರೆ ಅದುವೇ ದೇವಪೂಜೆ. ಆ ನಿಟ್ಟಿನಲ್ಲಿ ನಾವಿಂದು ಸಾಗಬೇಕಿದೆ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಎಲ್ಲ ರೋಗಗಳಿಗೆ ಮೂಲ ಮದ್ದು ಶಿವಯೋಗದಲ್ಲಿದೆ. ಅದು ಹೀಗೆ ಪ್ರವಚನಕ್ಕೆ ಬರುವ ಕೇಳುವ ರೂಢಿ ಯಿಂದ ತಾನಾಗಿಯೇ ಮನುಷ್ಯನಲ್ಲಿರುವ ದುರಾಸೆ ದುರ್ಗುಣಗಳನ್ನು ಕಡಿಮೆ ಮಾಡುತ್ತದೆ. ಆ ನಿಟ್ಟಿನಲ್ಲಿ ಶರಣಸಂಸ್ಕತಿ ಉತ್ಸವಕ್ಕೆ ಪೂರ್ವಭಾವಿಯಾಗಿ ಆಯೋಜಿಸಿರುವ ಈ ವಿಶೇಷ ಪ್ರವಚನಮಾಲೆಗೆ ಜನ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ.<br /> <br /> ಜಮುರಾ ಕಲಾಲೋಕದ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ಗಾರೇಹಟ್ಟಿ ಬೃಹನ್ಮಠ ಪ್ರೌಢಶಾಲೆ ಶಿಕ್ಷಕ ಅಶೋಕ್ ಸ್ವಾಗತಿಸಿದರು. ಸಿ.ಎಂ. ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ವೇದಮೂರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>