<p>ಬೆಂಗಳೂರು: `ಬಿಬಿಎಂಪಿಯಲ್ಲಿ ಯಾವುದೇ ಕೆಲಸಕ್ಕೂ ದುಪ್ಪಟ್ಟು ಹಣ ವೆಚ್ಚ ಮಾಡಲಾಗುತ್ತಿದೆ. ಒಂದು ರೂಪಾಯಿ ಖರ್ಚಾಗುವ ಕೆಲಸಕ್ಕೂ 2 ರೂಪಾಯಿ ವ್ಯಯವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ~.<br /> ಈ ರೀತಿ ಪಾಲಿಕೆಯ ಆಡಳಿತ ವೈಖರಿಯ ಬಗ್ಗೆ ಬೆಳಕು ಚೆಲ್ಲಿದ್ದು ಬೇರಾರೂ ಅಲ್ಲ, ಸ್ವತಃ ಪಾಲಿಕೆ ಆಯುಕ್ತ ಸಿದ್ದಯ್ಯ.<br /> <br /> ಪಾಲಿಕೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, `ವೈಯಕ್ತಿಕವಾಗಿ ಹೇಳುವುದಾದರೆ ಪಾಲಿಕೆಯಲ್ಲಿ ಒಂದು ರೂಪಾಯಿ ಖರ್ಚಾಗುವ ಕೆಲಸಕ್ಕೆ 2 ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಹಿಂದಿನಿಂದಲೂ ಈ ಕೆಟ್ಟ ಅಭ್ಯಾಸ ನಡೆದುಬಂದಿದೆ. ಇದಕ್ಕೆ ಕಡಿವಾಣ ಹಾಕಿದ್ದೇ ಆದರೆ ಪಾಲಿಕೆಯ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಈಗಲೂ ಪರಿಸ್ಥಿತಿ ಕೈಮೀರಿಲ್ಲ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲು ಎಲ್ಲರೂ ಸಹಕರಿಸಬೇಕು~ ಎಂದು ಮನವಿ ಮಾಡಿದರು.<br /> <br /> `2008-09ನೇ ಸಾಲಿನಲ್ಲಿ ಕೈಗೊಂಡಿದ್ದ 1,937 ಕಾಮಗಾರಿಗಳು ಆರಂಭವೇ ಆಗಿರಲಿಲ್ಲ. ಹಾಗಾಗಿ ಆ ಕಾಮಗಾರಿಗಳನ್ನು ರದ್ದುಪಡಿಸಲಾಯಿತು. ಸುಮಾರು 2,600 ಕೋಟಿ ರೂಪಾಯಿ ವೆಚ್ಚದ 3,931 ಚಾಲ್ತಿ ಕಾಮಗಾರಿಗಳನ್ನು ಮರು ಮೌಲ್ಯಮಾಪನ ಮಾಡುವಂತೆ ಆದೇಶಿಸಲಾಯಿತು. ಆಗ ಸಲ್ಲಿಕೆಯಾಗಿದ್ದು, ಕೇವಲ 1,600 ಕಾಮಗಾರಿಗಳಿಗೆ ಸಂಬಂಧಪಟ್ಟ ಕಡತಗಳು ಮಾತ್ರ~ ಎಂದರು.<br /> <br /> `ಸುಮಾರು 10 ವಿಶೇಷ ತಂಡಗಳನ್ನು ರಚಿಸಿ ಈ ಕಾಮಗಾರಿಗಳನ್ನು ತಪಾಸಣೆ ನಡೆಸಿದಾಗ ವಾಸ್ತವದಲ್ಲಿ ಚಾಲ್ತಿಯಲ್ಲಿದ್ದುದು 500 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಮಾತ್ರ. ಪಾಲಿಕೆಗೆ ಹೊರೆಯಾಗಲಿದ್ದ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಬಿಡುವ ಮೂಲಕ ಪಾಲಿಕೆಗೆ ಉಳಿತಾಯ ಮಾಡಲಾಯಿತು~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಬಿಬಿಎಂಪಿಯಲ್ಲಿ ಯಾವುದೇ ಕೆಲಸಕ್ಕೂ ದುಪ್ಪಟ್ಟು ಹಣ ವೆಚ್ಚ ಮಾಡಲಾಗುತ್ತಿದೆ. ಒಂದು ರೂಪಾಯಿ ಖರ್ಚಾಗುವ ಕೆಲಸಕ್ಕೂ 2 ರೂಪಾಯಿ ವ್ಯಯವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ~.<br /> ಈ ರೀತಿ ಪಾಲಿಕೆಯ ಆಡಳಿತ ವೈಖರಿಯ ಬಗ್ಗೆ ಬೆಳಕು ಚೆಲ್ಲಿದ್ದು ಬೇರಾರೂ ಅಲ್ಲ, ಸ್ವತಃ ಪಾಲಿಕೆ ಆಯುಕ್ತ ಸಿದ್ದಯ್ಯ.<br /> <br /> ಪಾಲಿಕೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, `ವೈಯಕ್ತಿಕವಾಗಿ ಹೇಳುವುದಾದರೆ ಪಾಲಿಕೆಯಲ್ಲಿ ಒಂದು ರೂಪಾಯಿ ಖರ್ಚಾಗುವ ಕೆಲಸಕ್ಕೆ 2 ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಹಿಂದಿನಿಂದಲೂ ಈ ಕೆಟ್ಟ ಅಭ್ಯಾಸ ನಡೆದುಬಂದಿದೆ. ಇದಕ್ಕೆ ಕಡಿವಾಣ ಹಾಕಿದ್ದೇ ಆದರೆ ಪಾಲಿಕೆಯ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಈಗಲೂ ಪರಿಸ್ಥಿತಿ ಕೈಮೀರಿಲ್ಲ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲು ಎಲ್ಲರೂ ಸಹಕರಿಸಬೇಕು~ ಎಂದು ಮನವಿ ಮಾಡಿದರು.<br /> <br /> `2008-09ನೇ ಸಾಲಿನಲ್ಲಿ ಕೈಗೊಂಡಿದ್ದ 1,937 ಕಾಮಗಾರಿಗಳು ಆರಂಭವೇ ಆಗಿರಲಿಲ್ಲ. ಹಾಗಾಗಿ ಆ ಕಾಮಗಾರಿಗಳನ್ನು ರದ್ದುಪಡಿಸಲಾಯಿತು. ಸುಮಾರು 2,600 ಕೋಟಿ ರೂಪಾಯಿ ವೆಚ್ಚದ 3,931 ಚಾಲ್ತಿ ಕಾಮಗಾರಿಗಳನ್ನು ಮರು ಮೌಲ್ಯಮಾಪನ ಮಾಡುವಂತೆ ಆದೇಶಿಸಲಾಯಿತು. ಆಗ ಸಲ್ಲಿಕೆಯಾಗಿದ್ದು, ಕೇವಲ 1,600 ಕಾಮಗಾರಿಗಳಿಗೆ ಸಂಬಂಧಪಟ್ಟ ಕಡತಗಳು ಮಾತ್ರ~ ಎಂದರು.<br /> <br /> `ಸುಮಾರು 10 ವಿಶೇಷ ತಂಡಗಳನ್ನು ರಚಿಸಿ ಈ ಕಾಮಗಾರಿಗಳನ್ನು ತಪಾಸಣೆ ನಡೆಸಿದಾಗ ವಾಸ್ತವದಲ್ಲಿ ಚಾಲ್ತಿಯಲ್ಲಿದ್ದುದು 500 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಮಾತ್ರ. ಪಾಲಿಕೆಗೆ ಹೊರೆಯಾಗಲಿದ್ದ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಬಿಡುವ ಮೂಲಕ ಪಾಲಿಕೆಗೆ ಉಳಿತಾಯ ಮಾಡಲಾಯಿತು~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>