<p><span style="font-size: 26px;"><strong>ಬೆಂಗಳೂರು: </strong>ಎಲ್ಲ ಮಾದರಿ ಹಾಲಿನ ಮಾರಾಟ ದರವನ್ನು ಫೆಬ್ರುವರಿ 1ರಿಂದ ಪ್ರತಿ ಲೀಟರ್ಗೆ </span><span style="font-size: 26px;">ರೂ </span><span style="font-size: 26px;">4 ಹೆಚ್ಚಿಸಲು ಅನುಮತಿ ಕೊಡುವಂತೆ ಸೋಮವಾರ ನಡೆದ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಆಡಳಿತ ಮಂಡಳಿಯ ಸಭೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದೆ</span><br /> <br /> ಕೆಎಂಎಫ್, ಸದ್ಯ ರೂ30 ಕೋಟಿ ನಷ್ಟದಲ್ಲಿದೆ. ಹೀಗಾಗಿ ಹಾಲಿನ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ `ಪ್ರಜಾವಾಣಿ'ಗೆ ತಿಳಿಸಿದರು.<br /> ಈ ಮಧ್ಯೆ, ಹಾಲಿನ ದರ ಏರಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಧಾನಸೌಧದಲ್ಲಿ ಹೇಳಿದರು.<br /> <br /> <strong>ಮರುಪರೀಕ್ಷೆಗೆ ತೀರ್ಮಾನ:</strong> ಕೆಎಂಎಫ್ನಲ್ಲಿ ಖಾಲಿ ಇದ್ದ ವಿವಿಧ ದರ್ಜೆಯ 53 ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆ, ನಿಯಮಗಳಿಗೆ ವಿರುದ್ಧವಾಗಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹುದ್ದೆಗಳಿಗೆ ಸಂದರ್ಶನ ನಡೆಸಲು ಸಿದ್ಧತೆ ನಡೆದಿತ್ತು. ಆದರೆ, ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಹರ್ಷ ಗುಪ್ತ ಅವರು ಅದಕ್ಕೆ ಅವಕಾಶ ನೀಡದೆ, ನಿಯಮಗಳ ಅನುಸಾರ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು ಎಂದು ಆಗ್ರಹಪಡಿಸಿದರು. ಆಡಳಿತ ಮಂಡಳಿ ಇದಕ್ಕೆ ಒಲ್ಲದ ಮನಸ್ಸಿನಲ್ಲೇ ಒಪ್ಪಿಗೆ ಸೂಚಿಸಿತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಬೆಂಗಳೂರು: </strong>ಎಲ್ಲ ಮಾದರಿ ಹಾಲಿನ ಮಾರಾಟ ದರವನ್ನು ಫೆಬ್ರುವರಿ 1ರಿಂದ ಪ್ರತಿ ಲೀಟರ್ಗೆ </span><span style="font-size: 26px;">ರೂ </span><span style="font-size: 26px;">4 ಹೆಚ್ಚಿಸಲು ಅನುಮತಿ ಕೊಡುವಂತೆ ಸೋಮವಾರ ನಡೆದ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಆಡಳಿತ ಮಂಡಳಿಯ ಸಭೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದೆ</span><br /> <br /> ಕೆಎಂಎಫ್, ಸದ್ಯ ರೂ30 ಕೋಟಿ ನಷ್ಟದಲ್ಲಿದೆ. ಹೀಗಾಗಿ ಹಾಲಿನ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ `ಪ್ರಜಾವಾಣಿ'ಗೆ ತಿಳಿಸಿದರು.<br /> ಈ ಮಧ್ಯೆ, ಹಾಲಿನ ದರ ಏರಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಧಾನಸೌಧದಲ್ಲಿ ಹೇಳಿದರು.<br /> <br /> <strong>ಮರುಪರೀಕ್ಷೆಗೆ ತೀರ್ಮಾನ:</strong> ಕೆಎಂಎಫ್ನಲ್ಲಿ ಖಾಲಿ ಇದ್ದ ವಿವಿಧ ದರ್ಜೆಯ 53 ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆ, ನಿಯಮಗಳಿಗೆ ವಿರುದ್ಧವಾಗಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹುದ್ದೆಗಳಿಗೆ ಸಂದರ್ಶನ ನಡೆಸಲು ಸಿದ್ಧತೆ ನಡೆದಿತ್ತು. ಆದರೆ, ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಹರ್ಷ ಗುಪ್ತ ಅವರು ಅದಕ್ಕೆ ಅವಕಾಶ ನೀಡದೆ, ನಿಯಮಗಳ ಅನುಸಾರ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು ಎಂದು ಆಗ್ರಹಪಡಿಸಿದರು. ಆಡಳಿತ ಮಂಡಳಿ ಇದಕ್ಕೆ ಒಲ್ಲದ ಮನಸ್ಸಿನಲ್ಲೇ ಒಪ್ಪಿಗೆ ಸೂಚಿಸಿತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>