ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ
ಬೀದರ್: ಹದಗೆಟ್ಟಿರುವ ಬೀದರ್-ಘೋಡಂಪಳ್ಳಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ನಗರದ ಗುಂಪಾ ಬಳಿ ಇರುವ ಚಿಟ್ಟಾ ರಸ್ತೆಯಲ್ಲಿ ರಸ್ತೆತಡೆ ಮಾಡಿದರು.
ಪ್ರತಿಭಟನಾಕಾರರು ಸುಮಾರು ಅರ್ಧ ತಾಸು ರಸ್ತೆತಡೆ ನಡೆಸಿದರು. ಯಾವೊಂದು ವಾಹನವನ್ನೂ ಬಿಡದೇ ಇದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
ಬೀದರ್-ಘೋಡಂಪಳ್ಳಿ ರಸ್ತೆ ಬಹಳ ಹಾಳಾಗಿದೆ. ಹೀಗಾಗಿ ಗ್ರಾಮದ ಜನ ಹಾಗೂ ವಿದ್ಯಾರ್ಥಿಗಳು ಜಿಲ್ಲಾ ಕೇಂದ್ರವಾಗಿರುವ ಬೀದರ್ಗೆ ಬರಲು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.
ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಮಲ್ಲಿಕಾರ್ಜುನ ವೈ.ಎಸ್., ರಸ್ತೆ ನಿರ್ಮಿಸಲು ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ಭರವಸೆ ನೀಡಿದರು. ನಂತರ ರಸ್ತೆತಡೆಯನ್ನು ಹಿಂದಕ್ಕೆ ಪಡೆಯಲಾಯಿತು.
ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಚಂದ್ರಶೇಖರ ಪಸಾರಗೆ, ಅಧ್ಯಕ್ಷ ಸಾವನ್ ವಾಗ್ಲೆ, ಉಪಾಧ್ಯಕ್ಷರಾದ ಮೋಹನ್ ಹಳ್ಳದಕೇರಿ, ಸತೀಶ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ ಹೊಕ್ರಾಣೆ, ತಾಲ್ಲೂಕು ಅಧ್ಯಕ್ಷ ಪದ್ಮಕುಮಾರ್ ಪಾಟೀಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ರಾಜು ಖಾಜಾಪುರೆ, ನಗರ ಅಧ್ಯಕ್ಷ ವೀರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.