<p><strong>ಶಿರಾ</strong>: ಕೆರೆ ಏರಿ ಮೇಲಿನ ರಸ್ತೆ ಹಾಗೂ ಸೇತುವೆಗಳಿಗೆ ತಡೆಗೋಡೆಗಳಿಲ್ಲದೆ ವಾಹನಗಳು ಅಪಘಾತಕ್ಕೀಡಾಗಿ ಜನ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದೆ. ದುರಂತದ ಸಂದರ್ಭದಲ್ಲಿ ಅಧಿಕಾರಿಗಳು ಜನರ ಕಣ್ಣೋರೆಸುವ ತಂತ್ರ ಎಂಬಂತೆ ತಡೆಗೋಡೆ ನಿರ್ಮಿಸುವ ಭರವಸೆ ನೀಡಿ ನಂತರ ಮರೆತು ಬಿಡುತ್ತಾರೆ. <br /> <br /> ಶಿರಾ- ಅಮರಾಪುರ ರಸ್ತೆ ಮುಷ್ಠಿಗರಹಳ್ಳಿ ಸಮೀಪದ ಸೇತುವೆಯ ಮುರಿದ ತಡೆಗೋಡೆ ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಇಲ್ಲಿ ಬಸ್ ಅಪಘಾತ ಸಂಭವಿಸಿದ ಪರಿಣಾಮ ತಡೆಗೋಡೆ ಮುರಿದು ಬಿದ್ದು ವರ್ಷಗಳೇ ಉರುಳಿವೆ. ಆದರೆ ಈವರೆಗೂ ಸೇತುವೆ ಮೇಲಿನ ತಡೆಗೋಡೆ ಪುನರ್ ನಿರ್ಮಾಣ ಕಾರ್ಯ ನಡೆದಿಲ್ಲ.<br /> ಅಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇತುವೆಯ ತಡೆಗೋಡೆ ಕಳಪೆ ಕಾಮಗಾರಿಯಿಂದ ಕೂಡಿದ್ದೇ ಮುರಿದು ಬೀಳಲು ಕಾರಣ. ಶೀಘ್ರ ತಡೆಗೋಡೆಯನ್ನು ಪುನರ್ ನಿರ್ಮಿಸುವುದಾಗಿ ಭರವಸೆ ನೀಡಿ ಹೋಗಿದ್ದರು.<br /> <br /> ಆದರೆ ಈವರೆಗೂ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿಲ್ಲ. ಕರ್ನಾಟಕ- ಆಂಧ್ರಪ್ರದೇಶಕ್ಕೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಮುಂದೆ ಮತ್ತೊಂದು ದೊಡ್ಡ ದುರಂತ ಸಂಭವಿಸುವವರೆಗೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ಕೆರೆ ಏರಿ ಮೇಲಿನ ರಸ್ತೆ ಹಾಗೂ ಸೇತುವೆಗಳಿಗೆ ತಡೆಗೋಡೆಗಳಿಲ್ಲದೆ ವಾಹನಗಳು ಅಪಘಾತಕ್ಕೀಡಾಗಿ ಜನ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದೆ. ದುರಂತದ ಸಂದರ್ಭದಲ್ಲಿ ಅಧಿಕಾರಿಗಳು ಜನರ ಕಣ್ಣೋರೆಸುವ ತಂತ್ರ ಎಂಬಂತೆ ತಡೆಗೋಡೆ ನಿರ್ಮಿಸುವ ಭರವಸೆ ನೀಡಿ ನಂತರ ಮರೆತು ಬಿಡುತ್ತಾರೆ. <br /> <br /> ಶಿರಾ- ಅಮರಾಪುರ ರಸ್ತೆ ಮುಷ್ಠಿಗರಹಳ್ಳಿ ಸಮೀಪದ ಸೇತುವೆಯ ಮುರಿದ ತಡೆಗೋಡೆ ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಇಲ್ಲಿ ಬಸ್ ಅಪಘಾತ ಸಂಭವಿಸಿದ ಪರಿಣಾಮ ತಡೆಗೋಡೆ ಮುರಿದು ಬಿದ್ದು ವರ್ಷಗಳೇ ಉರುಳಿವೆ. ಆದರೆ ಈವರೆಗೂ ಸೇತುವೆ ಮೇಲಿನ ತಡೆಗೋಡೆ ಪುನರ್ ನಿರ್ಮಾಣ ಕಾರ್ಯ ನಡೆದಿಲ್ಲ.<br /> ಅಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇತುವೆಯ ತಡೆಗೋಡೆ ಕಳಪೆ ಕಾಮಗಾರಿಯಿಂದ ಕೂಡಿದ್ದೇ ಮುರಿದು ಬೀಳಲು ಕಾರಣ. ಶೀಘ್ರ ತಡೆಗೋಡೆಯನ್ನು ಪುನರ್ ನಿರ್ಮಿಸುವುದಾಗಿ ಭರವಸೆ ನೀಡಿ ಹೋಗಿದ್ದರು.<br /> <br /> ಆದರೆ ಈವರೆಗೂ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿಲ್ಲ. ಕರ್ನಾಟಕ- ಆಂಧ್ರಪ್ರದೇಶಕ್ಕೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಮುಂದೆ ಮತ್ತೊಂದು ದೊಡ್ಡ ದುರಂತ ಸಂಭವಿಸುವವರೆಗೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>