<p><strong>ಬೆಂಗಳೂರು:</strong> ಮಹದೇವಪುರ ಕ್ಷೇತ್ರದ ವರ್ತೂರು ವಾರ್ಡ್ ವ್ಯಾಪ್ತಿಯ ಸೊರಹುಣಸೆ ಗ್ರಾಮದ ಮುಖ್ಯರಸ್ತೆ ಹದಗೆಟ್ಟು ಏಳು ವರ್ಷಗಳು ಕಳೆದರೂ ರಸ್ತೆಯನ್ನು ದುರಸ್ತಿಗೊಳಿಸಿಲ್ಲ.<br /> <br /> ಸೊರಹುಣಸೆಯಿಂದ ವಾಲೆಪುರ ಗ್ರಾಮದವರೆಗಿನ 2 ಕಿ.ಮೀ. ದೂರದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯಲ್ಲಿ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಮಳೆ ನೀರು ಹೊಂಡಗಳಲ್ಲಿ ನಿಂತಿದ್ದು, ಕೆಸರು ಗದ್ದೆಯಂತ್ತಾಗಿದೆ. ದಿನೇದಿನೇ ಹೊಂಡಗಳ ಗಾತ್ರ ಹಿರಿದಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ.<br /> <br /> ‘ವೈಟ್ಫೀಲ್ಡ್, ಹಗದೂರು, ಇಮ್ಮಡಿಹಳ್ಳಿ, ನಾಗೊಂಡನಹಳ್ಳಿ, ಅಜಗೊಂಡನಹಳ್ಳಿ, ಚೆನ್ನಸಂದ್ರ ಹಾಗೂ ಕಾಡುಗೋಡಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಈ ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ವರ್ತೂರು ಕೋಡಿ ಮಾರ್ಗದಲ್ಲಿ ಸಂಚರಿಸುವಂತಾಗಿದೆ. ಇದರಿಂದ 6–7 ಕಿ.ಮೀ. ಹೆಚ್ಚುವರಿ ದೂರವನ್ನು ಕ್ರಮಿಸಬೇಕಿದೆ’ ಎಂದು ಸೊರಹುಣಸೆ ನಿವಾಸಿ ಎಸ್.ಒ.ಶ್ರೀನಿವಾಸ ರೆಡ್ಡಿ ಹೇಳಿದರು.<br /> <br /> ‘ಈ ರಸ್ತೆಯನ್ನು ದುರಸ್ತಿ ಗೊಳಿಸುವಂತೆ ಹಲವು ಬಾರಿ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ರಸ್ತೆ ಮಾತ್ರ ಸುಧಾರಣೆ ಕಂಡಿಲ್ಲ. ₹ 1.65 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರು ಹಾಕುತ್ತೇವೆ ಎಂದು ಅವರು 2014ರಲ್ಲೇ ಹೇಳಿಕೆ ನೀಡಿದ್ದರು. ಆದರೆ, ಎರಡು ವರ್ಷ ಕಳೆದರೂ ರಸ್ತೆಗೆ ಡಾಂಬರು ಹಾಕಿಲ್ಲ’ ಎಂದು ದೂರಿದರು.<br /> <br /> ‘ಹತ್ತು ವರ್ಷಗಳ ಹಿಂದೆ ಈ ರಸ್ತೆ ಸೊರಹುಣಸೆ ಗ್ರಾಮ ಪಂಚಾಯ್ತಿಗೆ ಸೇರಿತ್ತು. ಆಗ ಖುದ್ದು ಪಂಚಾಯ್ತಿಯ ಅನುದಾನದಿಂದ ರಸ್ತೆಗೆ ಡಾಂಬರು ಹಾಕಲಾಗಿತ್ತು. ಬಿಬಿಎಂಪಿ ವ್ಯಾಪ್ತಿಗೆ ಸೇರಿ ಆರು ವರ್ಷಗಳು ಕಳೆದರೂ ರಸ್ತೆಯನ್ನು ದುರಸ್ತಿ ಮಾಡಿಲ್ಲ’ ಎಂದು ಸ್ಥಳೀಯ ನಿವಾಸಿ ಎಂ.ಸಿ.ಸಿ. ರವಿ ಆರೋಪಿಸಿದರು.<br /> <br /> ‘ರಸ್ತೆಯಲ್ಲಿ 1–2 ಅಡಿ ಆಳದ ಹೊಂಡಗಳು ಬಿದ್ದಿವೆ. ವಾಹನ ಸವಾರರು ಜೀವವನ್ನು ಕೈಯ್ಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಬೈಕ್ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವ ದೃಶ್ಯ ಸಾಮಾನ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹದೇವಪುರ ಕ್ಷೇತ್ರದ ವರ್ತೂರು ವಾರ್ಡ್ ವ್ಯಾಪ್ತಿಯ ಸೊರಹುಣಸೆ ಗ್ರಾಮದ ಮುಖ್ಯರಸ್ತೆ ಹದಗೆಟ್ಟು ಏಳು ವರ್ಷಗಳು ಕಳೆದರೂ ರಸ್ತೆಯನ್ನು ದುರಸ್ತಿಗೊಳಿಸಿಲ್ಲ.<br /> <br /> ಸೊರಹುಣಸೆಯಿಂದ ವಾಲೆಪುರ ಗ್ರಾಮದವರೆಗಿನ 2 ಕಿ.ಮೀ. ದೂರದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯಲ್ಲಿ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಮಳೆ ನೀರು ಹೊಂಡಗಳಲ್ಲಿ ನಿಂತಿದ್ದು, ಕೆಸರು ಗದ್ದೆಯಂತ್ತಾಗಿದೆ. ದಿನೇದಿನೇ ಹೊಂಡಗಳ ಗಾತ್ರ ಹಿರಿದಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ.<br /> <br /> ‘ವೈಟ್ಫೀಲ್ಡ್, ಹಗದೂರು, ಇಮ್ಮಡಿಹಳ್ಳಿ, ನಾಗೊಂಡನಹಳ್ಳಿ, ಅಜಗೊಂಡನಹಳ್ಳಿ, ಚೆನ್ನಸಂದ್ರ ಹಾಗೂ ಕಾಡುಗೋಡಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಈ ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ವರ್ತೂರು ಕೋಡಿ ಮಾರ್ಗದಲ್ಲಿ ಸಂಚರಿಸುವಂತಾಗಿದೆ. ಇದರಿಂದ 6–7 ಕಿ.ಮೀ. ಹೆಚ್ಚುವರಿ ದೂರವನ್ನು ಕ್ರಮಿಸಬೇಕಿದೆ’ ಎಂದು ಸೊರಹುಣಸೆ ನಿವಾಸಿ ಎಸ್.ಒ.ಶ್ರೀನಿವಾಸ ರೆಡ್ಡಿ ಹೇಳಿದರು.<br /> <br /> ‘ಈ ರಸ್ತೆಯನ್ನು ದುರಸ್ತಿ ಗೊಳಿಸುವಂತೆ ಹಲವು ಬಾರಿ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ರಸ್ತೆ ಮಾತ್ರ ಸುಧಾರಣೆ ಕಂಡಿಲ್ಲ. ₹ 1.65 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರು ಹಾಕುತ್ತೇವೆ ಎಂದು ಅವರು 2014ರಲ್ಲೇ ಹೇಳಿಕೆ ನೀಡಿದ್ದರು. ಆದರೆ, ಎರಡು ವರ್ಷ ಕಳೆದರೂ ರಸ್ತೆಗೆ ಡಾಂಬರು ಹಾಕಿಲ್ಲ’ ಎಂದು ದೂರಿದರು.<br /> <br /> ‘ಹತ್ತು ವರ್ಷಗಳ ಹಿಂದೆ ಈ ರಸ್ತೆ ಸೊರಹುಣಸೆ ಗ್ರಾಮ ಪಂಚಾಯ್ತಿಗೆ ಸೇರಿತ್ತು. ಆಗ ಖುದ್ದು ಪಂಚಾಯ್ತಿಯ ಅನುದಾನದಿಂದ ರಸ್ತೆಗೆ ಡಾಂಬರು ಹಾಕಲಾಗಿತ್ತು. ಬಿಬಿಎಂಪಿ ವ್ಯಾಪ್ತಿಗೆ ಸೇರಿ ಆರು ವರ್ಷಗಳು ಕಳೆದರೂ ರಸ್ತೆಯನ್ನು ದುರಸ್ತಿ ಮಾಡಿಲ್ಲ’ ಎಂದು ಸ್ಥಳೀಯ ನಿವಾಸಿ ಎಂ.ಸಿ.ಸಿ. ರವಿ ಆರೋಪಿಸಿದರು.<br /> <br /> ‘ರಸ್ತೆಯಲ್ಲಿ 1–2 ಅಡಿ ಆಳದ ಹೊಂಡಗಳು ಬಿದ್ದಿವೆ. ವಾಹನ ಸವಾರರು ಜೀವವನ್ನು ಕೈಯ್ಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಬೈಕ್ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವ ದೃಶ್ಯ ಸಾಮಾನ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>