<p><strong>ಬಳ್ಳಾರಿ:</strong> ನಗರದ ಜನನಿಬಿಡ ಪ್ರದೇಶವಾಗಿರುವ ಕನಕ ದುರ್ಗಮ್ಮ ದೇವಸ್ಥಾನದ ಬಳಿಯ ವೃತ್ತದಲ್ಲಿ ಸಂಚಾರ ಠಾಣೆಯಿಂದ ಹೊಸದಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ.<br /> <br /> ಹಳೆಯ ಬಸ್ ನಿಲ್ದಾಣ, ಮೋಕಾ ರಸ್ತೆ, ಕಪಗಲ್ ರಸ್ತೆ, ಮಹರ್ಷಿ ವಾಲ್ಮೀಕಿ ವೃತ್ತ, ಕೇಂದ್ರ ಕಾರಾಗೃಹ ರಸ್ತೆ ಸೇರಿದಂತೆ ಐದು ಪ್ರಮುಖ ರಸ್ತೆಗಳು ಸೇರುವ ಈ ವೃತ್ತದಲ್ಲಿ ಮಂಗಳವಾರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಸಿಗ್ನಲ್ಗಳು ಕಾರ್ಯಾರಂಭ ಮಾಡಲಿವೆ.<br /> <br /> ಅತ್ಯಂತ ಜನನಿಬಿಡವಾದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿ ಕಂಡುಬರುವುದರಿಂದ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನಗತ್ಯವಾಗುವಂತೆ ಸಿಗ್ನಲ್ ಇರಿಸಲಾಗುತ್ತದೆ. ಸಾರ್ವಜನಿಕರು ರಸ್ತೆ ದಾಟುವಾಗ ಸಂಚಾರ ನಿಯಮ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.<br /> <br /> ಗ್ರಾಮೀಣ ಭಾಗದ ಅನೇಕರು ನಿತ್ಯವೂ ವಾಹನಗಳ ಮೂಲಕ ನಗರಕ್ಕೆ ಆಗಮಿಸುವುದರಿಂದ ಸಂಚಾರ ದಟ್ಟಣೆ ಕಂಡುಬರುತ್ತದೆ. ಅಲ್ಲದೆ, ಅನೇಕರು ಸಂಚಾರ ನಿಯಮ ಪಾಲಿಸುವಲ್ಲಿ ಜಾಗೃತಿ ವಹಿಸದ್ದರಿಂದ ಅನೇಕ ಅವಗಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಠಾಣೆಯಿಂದ ಜಾಗೃತಿ ಕಾರ್ಯಕ್ರಮವನ್ನೂ ನಿಯಮಿತವಾಗಿ ಏರ್ಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.<br /> <br /> ನಗರದ ಮಹರ್ಷಿ ವಾಲ್ಮೀಕಿ ವೃತ್ತ (ಎಸ್.ಪಿ. ವೃತ್ತ)ದಲ್ಲೂ ಕೆಲವೇ ದಿನಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ನಗರದ ಜನನಿಬಿಡ ಪ್ರದೇಶವಾಗಿರುವ ಕನಕ ದುರ್ಗಮ್ಮ ದೇವಸ್ಥಾನದ ಬಳಿಯ ವೃತ್ತದಲ್ಲಿ ಸಂಚಾರ ಠಾಣೆಯಿಂದ ಹೊಸದಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ.<br /> <br /> ಹಳೆಯ ಬಸ್ ನಿಲ್ದಾಣ, ಮೋಕಾ ರಸ್ತೆ, ಕಪಗಲ್ ರಸ್ತೆ, ಮಹರ್ಷಿ ವಾಲ್ಮೀಕಿ ವೃತ್ತ, ಕೇಂದ್ರ ಕಾರಾಗೃಹ ರಸ್ತೆ ಸೇರಿದಂತೆ ಐದು ಪ್ರಮುಖ ರಸ್ತೆಗಳು ಸೇರುವ ಈ ವೃತ್ತದಲ್ಲಿ ಮಂಗಳವಾರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಸಿಗ್ನಲ್ಗಳು ಕಾರ್ಯಾರಂಭ ಮಾಡಲಿವೆ.<br /> <br /> ಅತ್ಯಂತ ಜನನಿಬಿಡವಾದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿ ಕಂಡುಬರುವುದರಿಂದ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನಗತ್ಯವಾಗುವಂತೆ ಸಿಗ್ನಲ್ ಇರಿಸಲಾಗುತ್ತದೆ. ಸಾರ್ವಜನಿಕರು ರಸ್ತೆ ದಾಟುವಾಗ ಸಂಚಾರ ನಿಯಮ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.<br /> <br /> ಗ್ರಾಮೀಣ ಭಾಗದ ಅನೇಕರು ನಿತ್ಯವೂ ವಾಹನಗಳ ಮೂಲಕ ನಗರಕ್ಕೆ ಆಗಮಿಸುವುದರಿಂದ ಸಂಚಾರ ದಟ್ಟಣೆ ಕಂಡುಬರುತ್ತದೆ. ಅಲ್ಲದೆ, ಅನೇಕರು ಸಂಚಾರ ನಿಯಮ ಪಾಲಿಸುವಲ್ಲಿ ಜಾಗೃತಿ ವಹಿಸದ್ದರಿಂದ ಅನೇಕ ಅವಗಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಠಾಣೆಯಿಂದ ಜಾಗೃತಿ ಕಾರ್ಯಕ್ರಮವನ್ನೂ ನಿಯಮಿತವಾಗಿ ಏರ್ಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.<br /> <br /> ನಗರದ ಮಹರ್ಷಿ ವಾಲ್ಮೀಕಿ ವೃತ್ತ (ಎಸ್.ಪಿ. ವೃತ್ತ)ದಲ್ಲೂ ಕೆಲವೇ ದಿನಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>