<p><strong>ದಾವಣಗೆರೆ:</strong> ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಿಂದೂಪರ ಸಂಘಟನೆಗಳು ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.<br /> ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲ್ಲೆಕೋರರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಯಿತು.<br /> <br /> <strong>ಜಿಲ್ಲಾ ಕಾಂಗ್ರೆಸ್ನಿಂದ ಕಾಲೇಜು ಬಂದ್</strong><br /> ಪಾಲಿಕೆ ಆವರಣದಿಂದ ಘೋಷಣೆ ಕೂಗುತ್ತಾ ಹೊರಟ ಕಾಂಗ್ರೆಸ್ ಮುಖಂಡರು ನಗರದ ವಿವಿಧ ಕಾಲೇಜುಗಳಿಗೆ ತೆರಳಿ ತರಗತಿ ಬಹಿಷ್ಕರಿಸುವಂತೆ ವಿದ್ಯಾರ್ಥಿಗಳನ್ನು ಕೋರಿದರು. ರಾಜನಹಳ್ಳಿ ಸೀತಮ್ಮ ಕಾಲೇಜು, ಸರ್ಕಾರಿ ಬಾಲಕರ ಪ್ರೌಢಶಾಲೆ, ಎವಿಕೆ ಕಾಲೇಜು ಹಾಗೂ ಬಾಪೂಜಿ ಪ್ರೌಢಶಾಲೆಗಳನ್ನು ಬಂದ್ ಮಾಡಿಸಿದರು.<br /> <br /> ಕೆಪಿಸಿಸಿ ಸದಸ್ಯ ಡಿ. ಬಸವರಾಜ್ ಮಾತನಾಡಿ, ಬಿಜೆಪಿಯ ಅಂಗಸಂಸ್ಥೆಗಳಾದ ಹಿಂದೂಪರ ಸಂಘಟನೆಗಳು ವಿದ್ಯಾರ್ಥಿಗಳ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಜಾಗರಣಾ ವೇದಿಕೆಯಂಥ ಸಂಘಟನೆಗಳು ಮಹಿಳೆಯರು ಮತ್ತು ಸಂಸ್ಕೃತಿ ರಕ್ಷಣೆಯನ್ನು ಗುತ್ತಿಗೆಗೆ ಪಡೆದಂತೆ ವರ್ತಿಸುತ್ತಿವೆ. ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಮಾತನಾಡಿ, ಅಫ್ಘಾನಿಸ್ತಾನದ ತಾಲಿಬಾನಿಗಳೂ ನಾಚುವಂತೆ ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.<br /> <br /> 2009ರಂದು ಪಬ್ ಮೇಲೆ ದಾಳಿ ನಡೆದಾಗಲೇ ಅಂಥ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ್ದರೆ ಘಟನೆ ಮರುಕಳಿಸುತ್ತಿರಲಿಲ್ಲ ಎಂದು ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ ಹೇಳಿದರು. <br /> <br /> ಕೆ.ಜಿ. ಶಿವಕುಮಾರ್, ಎಸ್. ಮಲ್ಲಿಕಾರ್ಜುನ, ಎ. ನಾಗರಾಜ್, ನಲ್ಕುಂದ ಹಾಲೇಶ್, ಕೋಳಿ ಇಬ್ರಾಹಿಂ, ಡಿ.ಎನ್. ಜಗದೀಶ್, ಪದ್ಮಾ ವೆಂಕಟೇಶ್, ಕೆ. ಕಾಳಾಚಾರ್, ಎಂ. ಮಂಜುನಾಥ್ ನೇತೃತ್ವ ವಹಿಸಿದ್ದರು.<br /> <br /> <strong>ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ</strong><br /> ಘಟನೆ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ, ಪ್ರಜಾಸತ್ತಾತ್ಮಕ ಯುವ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.<br /> <br /> ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಇಂಥ ಅಮಾನುಷ ದಾಳಿಗಳಿಗೆ ಸ್ಥಳವಿಲ್ಲ. ಜಾಹೀರಾತು, ಸಿನಿಮಾ, ಇನ್ನಿತರ ಕಾರ್ಯಕ್ರಮಗಳಲ್ಲಿ ರಾರಾಜಿಸುತ್ತಿರುವ ಅಶ್ಲೀಲತೆ ವಿರುದ್ಧ ಧ್ವನಿ ಎತ್ತದ ದಾಳಿಕೋರರು ಸಂಸ್ಕೃತಿಯ ವಕ್ತಾರರಂತೆ ಇಂಥ ಹಲ್ಲೆಗೆ ಮುಂದಾಗುತ್ತಿರುವುದು ವಿಷಾದನೀಯ.<br /> <br /> ಅಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. <br /> <br /> ಸಂಘಟನೆಯ ಮುಖಂಡರಾದ ದೀಪಾ, ಡಾ.ವಸುಧೇಂದ್ರ, ಮಂಜುನಾಥ್ ಕೈದಾಳ್, ಸುನಿಲ್, ಪರಶುರಾಮ್, ಭಾರತಿ, ಮೋಹನ್ ಭಾಗವಹಿಸಿದ್ದರು.<br /> <strong><br /> ಮಹಿಳಾ ವಕೀಲರು, ಜೆಡಿಎಸ್, ಸುವರ್ಣ ಲೇಡಿಸ್ ಕ್ಲಬ್</strong><br /> ನಗರದ ಮಹಿಳಾ ವಕೀಲರು, ಜೆಡಿಎಸ್ ಮಹಿಳಾ ಘಟಕ ಹಾಗೂ ಸುವರ್ಣ ಲೇಡಿಸ್ ಕ್ಲಬ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.<br /> <br /> ವಕೀಲರಾದ ಅಮೀರಾಬಾನು ಮಾತನಾಡಿ, ಹಲ್ಲೆ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಮಹಿಳೆಯರು ತಲೆಎತ್ತಿ ನಡೆಯದಂತಾಗಿದೆ. ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.<br /> <br /> ಕೆ. ಮಂಜುಳಾ, ವಿಜಯಾ ಅಕ್ಕಿ, ಮಮ್ತಾಜ್ ಬೇಗಂ, ಜಮ್ರುದಾ ಬೇಗಂ, ಮಾಲಾ, ಶಶಿಪ್ರಕಾಶ್, ಚಂದ್ರಿಕಾ ಜಗನ್ನಾಥ್, ಶಶಿ ಶಿವಲಿಂಗಪ್ಪ, ಶಶಿ ಶಿವಯ್ಯ, ಬಿ. ಮಾಧವಿ ಭಾಗವಹಿಸಿದ್ದರು.<br /> <br /> <strong> ಭಾರತ ಕಮ್ಯುನಿಸ್ಟ್ ಪಕ್ಷ </strong><br /> ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ (ಎಂ) ಕಾರ್ಯಕರ್ತರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೂಂಡಾ ಸಂಸ್ಕೃತಿಗೆ ಕಡಿವಾಣ ಹಾಕಬೇಕು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸರ್ಕಾರವು ಈ ಘಟನೆಯ ಸಂಚನ್ನು ಬಯಲಿಗೆ ತರಬೇಕು. ಮಹಿಳೆಯರು ಹಾಗೂ ಯುವಕರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.<br /> <br /> ಪಕ್ಷದ ಮುಖಂಡರಾದ ಇ. ಶ್ರೀನಿವಾಸ್, ಕೆ.ಎಲ್. ಭಟ್, ಎಚ್. ವೆಂಕಟೇಶ್, ಬಸವರಾಜ್, ಉಬೇದುಲ್ಲಾ, ಶ್ರೀನಿವಾಸಮೂರ್ತಿ, ಮಹಾಲಿಂಗಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಿಂದೂಪರ ಸಂಘಟನೆಗಳು ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.<br /> ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲ್ಲೆಕೋರರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಯಿತು.<br /> <br /> <strong>ಜಿಲ್ಲಾ ಕಾಂಗ್ರೆಸ್ನಿಂದ ಕಾಲೇಜು ಬಂದ್</strong><br /> ಪಾಲಿಕೆ ಆವರಣದಿಂದ ಘೋಷಣೆ ಕೂಗುತ್ತಾ ಹೊರಟ ಕಾಂಗ್ರೆಸ್ ಮುಖಂಡರು ನಗರದ ವಿವಿಧ ಕಾಲೇಜುಗಳಿಗೆ ತೆರಳಿ ತರಗತಿ ಬಹಿಷ್ಕರಿಸುವಂತೆ ವಿದ್ಯಾರ್ಥಿಗಳನ್ನು ಕೋರಿದರು. ರಾಜನಹಳ್ಳಿ ಸೀತಮ್ಮ ಕಾಲೇಜು, ಸರ್ಕಾರಿ ಬಾಲಕರ ಪ್ರೌಢಶಾಲೆ, ಎವಿಕೆ ಕಾಲೇಜು ಹಾಗೂ ಬಾಪೂಜಿ ಪ್ರೌಢಶಾಲೆಗಳನ್ನು ಬಂದ್ ಮಾಡಿಸಿದರು.<br /> <br /> ಕೆಪಿಸಿಸಿ ಸದಸ್ಯ ಡಿ. ಬಸವರಾಜ್ ಮಾತನಾಡಿ, ಬಿಜೆಪಿಯ ಅಂಗಸಂಸ್ಥೆಗಳಾದ ಹಿಂದೂಪರ ಸಂಘಟನೆಗಳು ವಿದ್ಯಾರ್ಥಿಗಳ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಜಾಗರಣಾ ವೇದಿಕೆಯಂಥ ಸಂಘಟನೆಗಳು ಮಹಿಳೆಯರು ಮತ್ತು ಸಂಸ್ಕೃತಿ ರಕ್ಷಣೆಯನ್ನು ಗುತ್ತಿಗೆಗೆ ಪಡೆದಂತೆ ವರ್ತಿಸುತ್ತಿವೆ. ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಮಾತನಾಡಿ, ಅಫ್ಘಾನಿಸ್ತಾನದ ತಾಲಿಬಾನಿಗಳೂ ನಾಚುವಂತೆ ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.<br /> <br /> 2009ರಂದು ಪಬ್ ಮೇಲೆ ದಾಳಿ ನಡೆದಾಗಲೇ ಅಂಥ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ್ದರೆ ಘಟನೆ ಮರುಕಳಿಸುತ್ತಿರಲಿಲ್ಲ ಎಂದು ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ ಹೇಳಿದರು. <br /> <br /> ಕೆ.ಜಿ. ಶಿವಕುಮಾರ್, ಎಸ್. ಮಲ್ಲಿಕಾರ್ಜುನ, ಎ. ನಾಗರಾಜ್, ನಲ್ಕುಂದ ಹಾಲೇಶ್, ಕೋಳಿ ಇಬ್ರಾಹಿಂ, ಡಿ.ಎನ್. ಜಗದೀಶ್, ಪದ್ಮಾ ವೆಂಕಟೇಶ್, ಕೆ. ಕಾಳಾಚಾರ್, ಎಂ. ಮಂಜುನಾಥ್ ನೇತೃತ್ವ ವಹಿಸಿದ್ದರು.<br /> <br /> <strong>ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ</strong><br /> ಘಟನೆ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ, ಪ್ರಜಾಸತ್ತಾತ್ಮಕ ಯುವ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.<br /> <br /> ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಇಂಥ ಅಮಾನುಷ ದಾಳಿಗಳಿಗೆ ಸ್ಥಳವಿಲ್ಲ. ಜಾಹೀರಾತು, ಸಿನಿಮಾ, ಇನ್ನಿತರ ಕಾರ್ಯಕ್ರಮಗಳಲ್ಲಿ ರಾರಾಜಿಸುತ್ತಿರುವ ಅಶ್ಲೀಲತೆ ವಿರುದ್ಧ ಧ್ವನಿ ಎತ್ತದ ದಾಳಿಕೋರರು ಸಂಸ್ಕೃತಿಯ ವಕ್ತಾರರಂತೆ ಇಂಥ ಹಲ್ಲೆಗೆ ಮುಂದಾಗುತ್ತಿರುವುದು ವಿಷಾದನೀಯ.<br /> <br /> ಅಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. <br /> <br /> ಸಂಘಟನೆಯ ಮುಖಂಡರಾದ ದೀಪಾ, ಡಾ.ವಸುಧೇಂದ್ರ, ಮಂಜುನಾಥ್ ಕೈದಾಳ್, ಸುನಿಲ್, ಪರಶುರಾಮ್, ಭಾರತಿ, ಮೋಹನ್ ಭಾಗವಹಿಸಿದ್ದರು.<br /> <strong><br /> ಮಹಿಳಾ ವಕೀಲರು, ಜೆಡಿಎಸ್, ಸುವರ್ಣ ಲೇಡಿಸ್ ಕ್ಲಬ್</strong><br /> ನಗರದ ಮಹಿಳಾ ವಕೀಲರು, ಜೆಡಿಎಸ್ ಮಹಿಳಾ ಘಟಕ ಹಾಗೂ ಸುವರ್ಣ ಲೇಡಿಸ್ ಕ್ಲಬ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.<br /> <br /> ವಕೀಲರಾದ ಅಮೀರಾಬಾನು ಮಾತನಾಡಿ, ಹಲ್ಲೆ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಮಹಿಳೆಯರು ತಲೆಎತ್ತಿ ನಡೆಯದಂತಾಗಿದೆ. ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.<br /> <br /> ಕೆ. ಮಂಜುಳಾ, ವಿಜಯಾ ಅಕ್ಕಿ, ಮಮ್ತಾಜ್ ಬೇಗಂ, ಜಮ್ರುದಾ ಬೇಗಂ, ಮಾಲಾ, ಶಶಿಪ್ರಕಾಶ್, ಚಂದ್ರಿಕಾ ಜಗನ್ನಾಥ್, ಶಶಿ ಶಿವಲಿಂಗಪ್ಪ, ಶಶಿ ಶಿವಯ್ಯ, ಬಿ. ಮಾಧವಿ ಭಾಗವಹಿಸಿದ್ದರು.<br /> <br /> <strong> ಭಾರತ ಕಮ್ಯುನಿಸ್ಟ್ ಪಕ್ಷ </strong><br /> ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ (ಎಂ) ಕಾರ್ಯಕರ್ತರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೂಂಡಾ ಸಂಸ್ಕೃತಿಗೆ ಕಡಿವಾಣ ಹಾಕಬೇಕು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸರ್ಕಾರವು ಈ ಘಟನೆಯ ಸಂಚನ್ನು ಬಯಲಿಗೆ ತರಬೇಕು. ಮಹಿಳೆಯರು ಹಾಗೂ ಯುವಕರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.<br /> <br /> ಪಕ್ಷದ ಮುಖಂಡರಾದ ಇ. ಶ್ರೀನಿವಾಸ್, ಕೆ.ಎಲ್. ಭಟ್, ಎಚ್. ವೆಂಕಟೇಶ್, ಬಸವರಾಜ್, ಉಬೇದುಲ್ಲಾ, ಶ್ರೀನಿವಾಸಮೂರ್ತಿ, ಮಹಾಲಿಂಗಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>