<p>ಭರಮಸಾಗರ: ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಸುಮಾರು 1200 ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ನಿರ್ದಯವಾಗಿ ಕಡಿದುಹಾಕಿದ ಘಟನೆ ಹೋಬಳಿಯ ಕಡ್ಲೆಗುದ್ದು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.<br /> <br /> ಗ್ರಾಮದ ಆಂಜನೇಯ ದೇವಸ್ಥಾನದ ಪೂಜಾರಿ ವೈಷ್ಣವ ಜನಾಂಗದ ಆರ್. ಹನುಮಂತಯ್ಯ ತಮ್ಮ 4 ಎಕರೆ 17ಗುಂಟೆ ಪ್ರದೇಶದಲ್ಲಿ ಅಡಿಕೆ ಗಿಡಗಳನ್ನು ಬೆಳೆಸಿದ್ದಾರೆ. ಅದರಲ್ಲಿ ಸಣ್ಣಗಿಡಗಳನ್ನು ಬಿಟ್ಟು ಎರಡು ಎಕರೆ ಪ್ರದೇಶದಲ್ಲಿದ್ದ ನಾಲ್ಕು ವರ್ಷದ 1200 ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಡಿದು ಹಾಕಿದ್ದು ಸುಮಾರು ₨ 4 ಲಕ್ಷ ನಷ್ಟವಾಗಿದೆ.<br /> <br /> ಇನ್ನೆರಡು ವರ್ಷ ಕಳೆದಿದ್ದರೆ ಅಡಿಕೆ ಫಸಲು ಆರಂಭವಾಗಲಿದ್ದು ಉತ್ತಮ ಆದಾಯದ ನಿರೀಕ್ಷೆ ಇರಿಸಿಕೊಂಡಿದ್ದ ಕುಟುಂಬ ಘಟನೆಯಿಂದ ನೊಂದಿದೆ.<br /> <br /> ಹನುಮಂತಯ್ಯ ಭರಮಸಾಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭರಮಸಾಗರ: ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಸುಮಾರು 1200 ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ನಿರ್ದಯವಾಗಿ ಕಡಿದುಹಾಕಿದ ಘಟನೆ ಹೋಬಳಿಯ ಕಡ್ಲೆಗುದ್ದು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.<br /> <br /> ಗ್ರಾಮದ ಆಂಜನೇಯ ದೇವಸ್ಥಾನದ ಪೂಜಾರಿ ವೈಷ್ಣವ ಜನಾಂಗದ ಆರ್. ಹನುಮಂತಯ್ಯ ತಮ್ಮ 4 ಎಕರೆ 17ಗುಂಟೆ ಪ್ರದೇಶದಲ್ಲಿ ಅಡಿಕೆ ಗಿಡಗಳನ್ನು ಬೆಳೆಸಿದ್ದಾರೆ. ಅದರಲ್ಲಿ ಸಣ್ಣಗಿಡಗಳನ್ನು ಬಿಟ್ಟು ಎರಡು ಎಕರೆ ಪ್ರದೇಶದಲ್ಲಿದ್ದ ನಾಲ್ಕು ವರ್ಷದ 1200 ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಡಿದು ಹಾಕಿದ್ದು ಸುಮಾರು ₨ 4 ಲಕ್ಷ ನಷ್ಟವಾಗಿದೆ.<br /> <br /> ಇನ್ನೆರಡು ವರ್ಷ ಕಳೆದಿದ್ದರೆ ಅಡಿಕೆ ಫಸಲು ಆರಂಭವಾಗಲಿದ್ದು ಉತ್ತಮ ಆದಾಯದ ನಿರೀಕ್ಷೆ ಇರಿಸಿಕೊಂಡಿದ್ದ ಕುಟುಂಬ ಘಟನೆಯಿಂದ ನೊಂದಿದೆ.<br /> <br /> ಹನುಮಂತಯ್ಯ ಭರಮಸಾಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>