<p>ಭದ್ರಾವತಿ: ರೈತ ಸಂಘದ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಜತೆಗೆ ಪಿಎಲ್ಡಿ ಬ್ಯಾಂಕ್ ರೈತರ ಮೇಲೆ ಹೂಡಿರುವ ದಾವೆ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಸರ್ಕಾರದ ಸಾಲ ವಸೂಲಾತಿ ನೀತಿ ಖಂಡಿಸುವ ಜತೆಗೆ ಸ್ಥಳೀಯ ಪಿಎಲ್ ಡಿ ಬ್ಯಾಂಕ್ ಧೋರಣೆ ಖಂಡಿಸಿ ಮುಖ್ಯ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ನೂರಾರು ರೈತರು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ<br /> ತಲುಪಿದರು.<br /> <br /> ಸಭೆಯಲ್ಲಿ ಮಾತನಾಡಿದ ಮುಖಂಡರು, ಡಿಸಿಸಿ, ಪಿಎಲ್ಡಿ ಮತ್ತು ಇತರ ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನು ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡಬೇಕು ಹಾಗೂ ಭದ್ರಾ ಜಲಾಶಯದಿಂದ ಹೆಚ್ಚುವರಿಯಾಗಿ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.<br /> <br /> ಇದೇ ಸಂದರ್ಭದಲ್ಲಿ ಮನವಿ ಸ್ವೀಕರಿಸಲು ಸ್ಥಳಕ್ಕೆ ಬರಲು ತಡಮಾಡಿದ ತಹಶೀಲ್ದಾರ್ ಧೋರಣೆ ಖಂಡಿಸಿದ ಮುಖಂಡರು ಕಚೇರಿ ಒಳ ಆವರಣ ಪ್ರವೇಶಿಸಿ ಧರಣಿ ನಡೆಸಲು ಆರಂಭಿಸಿದರು.<br /> <br /> ಪ್ರತಿಭಟನೆಯ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.<br /> ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಟಿ. ಗಂಗಾಧರಪ್ಪ, ಕೆ. ಬೆನಕಪ್ಪ, ಯಶವಂತರಾವ್ ಘೋರ್ಪಡೆ, ಜಿ. ಉಮಾಪತಿಯಪ್ಪ, ವಿರೇಶ್, ಓಂಕಾರಪ್ಪ ಸೇರಿದಂತೆ ಇತರರು ನೇತೃತ್ವ ವಹಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ರೈತ ಸಂಘದ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಜತೆಗೆ ಪಿಎಲ್ಡಿ ಬ್ಯಾಂಕ್ ರೈತರ ಮೇಲೆ ಹೂಡಿರುವ ದಾವೆ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಸರ್ಕಾರದ ಸಾಲ ವಸೂಲಾತಿ ನೀತಿ ಖಂಡಿಸುವ ಜತೆಗೆ ಸ್ಥಳೀಯ ಪಿಎಲ್ ಡಿ ಬ್ಯಾಂಕ್ ಧೋರಣೆ ಖಂಡಿಸಿ ಮುಖ್ಯ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ನೂರಾರು ರೈತರು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ<br /> ತಲುಪಿದರು.<br /> <br /> ಸಭೆಯಲ್ಲಿ ಮಾತನಾಡಿದ ಮುಖಂಡರು, ಡಿಸಿಸಿ, ಪಿಎಲ್ಡಿ ಮತ್ತು ಇತರ ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನು ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡಬೇಕು ಹಾಗೂ ಭದ್ರಾ ಜಲಾಶಯದಿಂದ ಹೆಚ್ಚುವರಿಯಾಗಿ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.<br /> <br /> ಇದೇ ಸಂದರ್ಭದಲ್ಲಿ ಮನವಿ ಸ್ವೀಕರಿಸಲು ಸ್ಥಳಕ್ಕೆ ಬರಲು ತಡಮಾಡಿದ ತಹಶೀಲ್ದಾರ್ ಧೋರಣೆ ಖಂಡಿಸಿದ ಮುಖಂಡರು ಕಚೇರಿ ಒಳ ಆವರಣ ಪ್ರವೇಶಿಸಿ ಧರಣಿ ನಡೆಸಲು ಆರಂಭಿಸಿದರು.<br /> <br /> ಪ್ರತಿಭಟನೆಯ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.<br /> ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಟಿ. ಗಂಗಾಧರಪ್ಪ, ಕೆ. ಬೆನಕಪ್ಪ, ಯಶವಂತರಾವ್ ಘೋರ್ಪಡೆ, ಜಿ. ಉಮಾಪತಿಯಪ್ಪ, ವಿರೇಶ್, ಓಂಕಾರಪ್ಪ ಸೇರಿದಂತೆ ಇತರರು ನೇತೃತ್ವ ವಹಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>