<p><strong>ನವದೆಹಲಿ (ಪಿಟಿಐ):</strong> ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್ಸಿಟಿ) ಆಡಳಿತ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ಗುರುವಾರದ ಆದೇಶದಲ್ಲಿ ಸ್ಪಷ್ಟಪಡಿಸಿದೆ.<br /> <br /> ದೆಹಲಿ ಸಚಿವ ಸಂಪುಟ ನೀಡುವ ಸಲಹೆ ಆಧರಿಸಿಯೇ ಲೆಫ್ಟಿನೆಂಟ್ ಗವರ್ನರ್ ಕೆಲಸ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ಮುಂದಿಟ್ಟಿರುವ ವಾದ ಹುರುಳಿಲ್ಲದ್ದು ಎಂದು ಹೈಕೋರ್ಟ್ ಹೇಳಿದೆ. ಈ ಆದೇಶ ಎಎಪಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ.<br /> <br /> ದೆಹಲಿ ಮೇಲಿನ ನಿಯಂತ್ರಣಕ್ಕಾಗಿ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ತಿಂಗಳುಗಳಿಂದ ಸಂಘರ್ಷ ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.<br /> <br /> ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ನೇಮಕ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ಗೆ ಪರಮಾಧಿಕಾರ ನೀಡಿ ಕೇಂದ್ರ ಸರ್ಕಾರ 2015ರ ಮೇ 21ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಎಎಪಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಮತ್ತು ನ್ಯಾಯಮೂರ್ತಿ ಜಯಂತ್ ಸಿನ್ಹಾ ಅವರಿದ್ದ ಪೀಠ ನಡೆಸಿತ್ತು.<br /> <br /> ಅಧಿಕಾರಕ್ಕೆ ಮರಳಿದ ನಂತರ ಕೇಜ್ರಿವಾಲ್ ಹೊರಡಿಸಿದ್ದ ಹಲವು ಅಧಿಸೂಚನೆಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ಸಮ್ಮತಿ ಇಲ್ಲದೆಯೇ ಈ ಅಧಿಸೂಚನೆಗಳನ್ನು ಹೊರಡಿಸಿದ್ದು ಕಾನೂನು ಬಾಹಿರ ಎಂದು ಆದೇಶದಲ್ಲಿ ಹೇಳಲಾಗಿದೆ.<br /> <br /> ದೆಹಲಿ ಸಂಪುಟ ನೀಡಿದ ಸಲಹೆಗೆ ಅನುಗುಣವಾಗಿ ಲೆಫ್ಟಿನೆಂಟ್ ಗವರ್ನರ್ ಕೆಲಸ ಮಾಡಲೇಬೇಕು ಎಂದು ಎಎಪಿ ಸರ್ಕಾರ ಮುಂದಿಟ್ಟಿದ್ದ ವಾದವನ್ನು ಒಪ್ಪಲಾಗದು ಎಂದು ಕೋರ್ಟ್ ಹೇಳಿದೆ.<br /> <br /> ಹೈಕೋರ್ಟ್ನ ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ತಕ್ಷಣ ಪ್ರಶ್ನಿಸಲಾಗುವುದು ಎಂದು ದೆಹಲಿ ಸರ್ಕಾರದ ವಕೀಲ ರಾಹುಲ್ ಮೆಹ್ರಾ ತಿಳಿಸಿದ್ದಾರೆ.<br /> ಹೈಕೋರ್ಟ್ನ ಈ ಆದೇಶವು, ಸಚಿವ ಸಂಪುಟಕ್ಕೆ ಸಂವಿಧಾನದತ್ತವಾಗಿ ಸಿಕ್ಕಿರುವ ಅಧಿಕಾರವನ್ನು ಮೊಟಕುಗೊಳಿಸಿದೆ. ಹಾಗಾಗಿ ಈ ಆದೇಶವನ್ನು ಪ್ರಶ್ನಿಸಲಾಗುವುದು ಎಂದು ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.<br /> <br /> ಭ್ರಷ್ಟಾಚಾರದ ವಿರುದ್ಧ ಯಾವುದೇ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ಕೇಜ್ರಿವಾಲ್ ಅವರಿಗೆ ಅವಕಾಶ ನೀಡುತ್ತಿಲ್ಲ ಎಂದು ಜೈನ್ ದೂರಿದ್ದಾರೆ.<br /> ಪ್ರಜಾತಾಂತ್ರಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಬಲ ಕುಗ್ಗಿಸುವುದು ಸಲ್ಲದು. ಆದೇಶವನ್ನು ಮೇಲಿನ ನ್ಯಾಯಾಲಯದಲ್ಲಿ ಪ್ರಶ್ನಿಸಲಾ<br /> ಗುವುದು. ಈ ಹೋರಾಟ ಅಧಿಕಾರದ ಮೇಲಾಟಕ್ಕಾಗಿ ಅಲ್ಲ. ಇದು ಪ್ರಜಾತಂತ್ರಕ್ಕಾಗಿ ಎಂದು ಎಎಪಿ ನಾಯಕ ರಾಘವ್ ಛಡ್ಡಾ ಹೇಳಿದ್ದಾರೆ.<br /> <br /> <strong>ಆದೇಶಕ್ಕೆ ಬಿಜೆಪಿ ಹರ್ಷ<br /> ಪುದುಚೇರಿ (ಪಿಟಿಐ): </strong>ಲೆಫ್ಟಿನೆಂಟ್ ಗವರ್ನರ್ಪರ ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಬಿಜೆಪಿ ಪುದುಚೇರಿ ಘಟಕ ಸ್ವಾಗತಿಸಿದೆ. ‘ಈ ಆದೇಶವು ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯವಾಗುತ್ತದೆ’ ಎಂದು ಪುದುಚೇರಿ ಬಿಜೆಪಿ ಅಧ್ಯಕ್ಷ ವಿ. ಸ್ವಾಮಿನಾಥನ್ ಹೇಳಿದರು.<br /> <br /> ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವೆ ಕೂಡ ಅಧಿಕಾರವ್ಯಾಪ್ತಿ ಕುರಿತು ಸಂಘರ್ಷ ಇದೆ. ‘ಆಡಳಿತ ಸುಗಮವಾಗಿ ಸಾಗಲು ನಾರಾಯಣಸ್ವಾಮಿ ಅವರು ಬೇಡಿ ಅವರ ಜೊತೆ ಕೈಜೋಡಿಸಬೇಕು’ ಎಂದು ಸ್ವಾಮಿನಾಥನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್ಸಿಟಿ) ಆಡಳಿತ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ಗುರುವಾರದ ಆದೇಶದಲ್ಲಿ ಸ್ಪಷ್ಟಪಡಿಸಿದೆ.<br /> <br /> ದೆಹಲಿ ಸಚಿವ ಸಂಪುಟ ನೀಡುವ ಸಲಹೆ ಆಧರಿಸಿಯೇ ಲೆಫ್ಟಿನೆಂಟ್ ಗವರ್ನರ್ ಕೆಲಸ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ಮುಂದಿಟ್ಟಿರುವ ವಾದ ಹುರುಳಿಲ್ಲದ್ದು ಎಂದು ಹೈಕೋರ್ಟ್ ಹೇಳಿದೆ. ಈ ಆದೇಶ ಎಎಪಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ.<br /> <br /> ದೆಹಲಿ ಮೇಲಿನ ನಿಯಂತ್ರಣಕ್ಕಾಗಿ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ತಿಂಗಳುಗಳಿಂದ ಸಂಘರ್ಷ ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.<br /> <br /> ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ನೇಮಕ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ಗೆ ಪರಮಾಧಿಕಾರ ನೀಡಿ ಕೇಂದ್ರ ಸರ್ಕಾರ 2015ರ ಮೇ 21ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಎಎಪಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಮತ್ತು ನ್ಯಾಯಮೂರ್ತಿ ಜಯಂತ್ ಸಿನ್ಹಾ ಅವರಿದ್ದ ಪೀಠ ನಡೆಸಿತ್ತು.<br /> <br /> ಅಧಿಕಾರಕ್ಕೆ ಮರಳಿದ ನಂತರ ಕೇಜ್ರಿವಾಲ್ ಹೊರಡಿಸಿದ್ದ ಹಲವು ಅಧಿಸೂಚನೆಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ಸಮ್ಮತಿ ಇಲ್ಲದೆಯೇ ಈ ಅಧಿಸೂಚನೆಗಳನ್ನು ಹೊರಡಿಸಿದ್ದು ಕಾನೂನು ಬಾಹಿರ ಎಂದು ಆದೇಶದಲ್ಲಿ ಹೇಳಲಾಗಿದೆ.<br /> <br /> ದೆಹಲಿ ಸಂಪುಟ ನೀಡಿದ ಸಲಹೆಗೆ ಅನುಗುಣವಾಗಿ ಲೆಫ್ಟಿನೆಂಟ್ ಗವರ್ನರ್ ಕೆಲಸ ಮಾಡಲೇಬೇಕು ಎಂದು ಎಎಪಿ ಸರ್ಕಾರ ಮುಂದಿಟ್ಟಿದ್ದ ವಾದವನ್ನು ಒಪ್ಪಲಾಗದು ಎಂದು ಕೋರ್ಟ್ ಹೇಳಿದೆ.<br /> <br /> ಹೈಕೋರ್ಟ್ನ ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ತಕ್ಷಣ ಪ್ರಶ್ನಿಸಲಾಗುವುದು ಎಂದು ದೆಹಲಿ ಸರ್ಕಾರದ ವಕೀಲ ರಾಹುಲ್ ಮೆಹ್ರಾ ತಿಳಿಸಿದ್ದಾರೆ.<br /> ಹೈಕೋರ್ಟ್ನ ಈ ಆದೇಶವು, ಸಚಿವ ಸಂಪುಟಕ್ಕೆ ಸಂವಿಧಾನದತ್ತವಾಗಿ ಸಿಕ್ಕಿರುವ ಅಧಿಕಾರವನ್ನು ಮೊಟಕುಗೊಳಿಸಿದೆ. ಹಾಗಾಗಿ ಈ ಆದೇಶವನ್ನು ಪ್ರಶ್ನಿಸಲಾಗುವುದು ಎಂದು ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.<br /> <br /> ಭ್ರಷ್ಟಾಚಾರದ ವಿರುದ್ಧ ಯಾವುದೇ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ಕೇಜ್ರಿವಾಲ್ ಅವರಿಗೆ ಅವಕಾಶ ನೀಡುತ್ತಿಲ್ಲ ಎಂದು ಜೈನ್ ದೂರಿದ್ದಾರೆ.<br /> ಪ್ರಜಾತಾಂತ್ರಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಬಲ ಕುಗ್ಗಿಸುವುದು ಸಲ್ಲದು. ಆದೇಶವನ್ನು ಮೇಲಿನ ನ್ಯಾಯಾಲಯದಲ್ಲಿ ಪ್ರಶ್ನಿಸಲಾ<br /> ಗುವುದು. ಈ ಹೋರಾಟ ಅಧಿಕಾರದ ಮೇಲಾಟಕ್ಕಾಗಿ ಅಲ್ಲ. ಇದು ಪ್ರಜಾತಂತ್ರಕ್ಕಾಗಿ ಎಂದು ಎಎಪಿ ನಾಯಕ ರಾಘವ್ ಛಡ್ಡಾ ಹೇಳಿದ್ದಾರೆ.<br /> <br /> <strong>ಆದೇಶಕ್ಕೆ ಬಿಜೆಪಿ ಹರ್ಷ<br /> ಪುದುಚೇರಿ (ಪಿಟಿಐ): </strong>ಲೆಫ್ಟಿನೆಂಟ್ ಗವರ್ನರ್ಪರ ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಬಿಜೆಪಿ ಪುದುಚೇರಿ ಘಟಕ ಸ್ವಾಗತಿಸಿದೆ. ‘ಈ ಆದೇಶವು ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯವಾಗುತ್ತದೆ’ ಎಂದು ಪುದುಚೇರಿ ಬಿಜೆಪಿ ಅಧ್ಯಕ್ಷ ವಿ. ಸ್ವಾಮಿನಾಥನ್ ಹೇಳಿದರು.<br /> <br /> ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವೆ ಕೂಡ ಅಧಿಕಾರವ್ಯಾಪ್ತಿ ಕುರಿತು ಸಂಘರ್ಷ ಇದೆ. ‘ಆಡಳಿತ ಸುಗಮವಾಗಿ ಸಾಗಲು ನಾರಾಯಣಸ್ವಾಮಿ ಅವರು ಬೇಡಿ ಅವರ ಜೊತೆ ಕೈಜೋಡಿಸಬೇಕು’ ಎಂದು ಸ್ವಾಮಿನಾಥನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>