<p><strong>ನವದೆಹಲಿ (ಪಿಟಿಐ): </strong>ದೇಶದಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ರಾಜಧಾನಿ ದೆಹಲಿಗೆ ಭಾನುವಾರ ಮಳೆ ಕಾಲಿಟ್ಟಿದೆ.ಜೂನ್ 1ರಂದು ಕೇರಳ ಪ್ರವೇಶಿಸಿದ್ದ ನೈರುತ್ಯ ಮುಂಗಾರು ರಾಷ್ಟ್ರದಾದ್ಯಂತ ತೀವ್ರಗತಿಯಲ್ಲಿ ಪ್ರಗತಿ ಕಂಡಿದ್ದು, ಎಲ್ಲೆಡೆಯು ಉತ್ತಮ ಮಳೆಯಾಗುತ್ತಿದೆ. <br /> <br /> ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಬರ ಪೀಡಿತ ಪ್ರದೇಶಗಳ ಜನರಲ್ಲಿ ಒಂದಷ್ಟು ನೆಮ್ಮದಿ ತಂದಿದೆ.ಅವಧಿ ಮುಂಚಿತವಾಗಿ ದೆಹಲಿಗೆ ಮಳೆ: ಎರಡು ವಾರಗಳ ಮುಂಚಿತವಾಗಿ ಮುಂಗಾರು ದೆಹಲಿಗೆ ಕಾಲಿಟ್ಟಿದೆ. ಸಾಮಾನ್ಯವಾಗಿ ರಾಜಧಾನಿಯಲ್ಲಿ ಜೂನ್ 29ರಂದು ಮಳೆಗಾಲ ಆರಂಭವಾಗುತ್ತದೆ.<br /> <br /> ಸಾಮಾನ್ಯವಾಗಿ ಜೂನ್ 15ರ ವೇಳೆಗೆ ನೈರುತ್ಯ ಮುಂಗಾರು ಇಡೀ ರಾಷ್ಟ್ರವನ್ನು ವ್ಯಾಪಿಸುತ್ತದೆ. ಆದರೆ ಈ ವರ್ಷ ಅವಧಿಗೆ ಮುಂಚಿತವಾಗಿ, ಅಂದರೆ ಶುಕ್ರವಾರವೇ ದೇಶದ ಮೂರನೇ ಎರಡು ಭೂಭಾಗದಲ್ಲಿ ಮಳೆಯಾಗಿದೆ.<br /> <br /> `ನೈರುತ್ಯ ಮುಂಗಾರು ಮಾರುತವು ಉತ್ತರಾಖಂಡ, ಹಿಮಾಚಲ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಪ್ರದೇಶ, ವಿದರ್ಭ ಮತ್ತು ಕೇರಳ ರಾಜ್ಯಗಳಲ್ಲಿ ಬಿರುಸುಗೊಂಡಿದೆ. ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ಕ್ರಿಯಾಶೀಲವಾಗಿದೆ' ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಬ್ರಹ್ಮ ಪ್ರಕಾಶ್ ಯಾದವ್ ಹೇಳಿದ್ದಾರೆ.<br /> <br /> ಮುಂದಿನ ಮೂರು ದಿನಗಳಲ್ಲಿ ಲಕ್ಷದೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿ ಸೇರಿದಂತೆ ಪೂರ್ವ ಕರಾವಳಿಯ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದೂ ಅವರು ತಿಳಿಸಿದ್ದಾರೆ.ಜುಲೈ ಮತ್ತು ಆಗಸ್ಟ್ನಲ್ಲಿ ದೇಶದಾದ್ಯಂತ ವಾಡಿಕೆಯಷ್ಟು ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೇಶದಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ರಾಜಧಾನಿ ದೆಹಲಿಗೆ ಭಾನುವಾರ ಮಳೆ ಕಾಲಿಟ್ಟಿದೆ.ಜೂನ್ 1ರಂದು ಕೇರಳ ಪ್ರವೇಶಿಸಿದ್ದ ನೈರುತ್ಯ ಮುಂಗಾರು ರಾಷ್ಟ್ರದಾದ್ಯಂತ ತೀವ್ರಗತಿಯಲ್ಲಿ ಪ್ರಗತಿ ಕಂಡಿದ್ದು, ಎಲ್ಲೆಡೆಯು ಉತ್ತಮ ಮಳೆಯಾಗುತ್ತಿದೆ. <br /> <br /> ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಬರ ಪೀಡಿತ ಪ್ರದೇಶಗಳ ಜನರಲ್ಲಿ ಒಂದಷ್ಟು ನೆಮ್ಮದಿ ತಂದಿದೆ.ಅವಧಿ ಮುಂಚಿತವಾಗಿ ದೆಹಲಿಗೆ ಮಳೆ: ಎರಡು ವಾರಗಳ ಮುಂಚಿತವಾಗಿ ಮುಂಗಾರು ದೆಹಲಿಗೆ ಕಾಲಿಟ್ಟಿದೆ. ಸಾಮಾನ್ಯವಾಗಿ ರಾಜಧಾನಿಯಲ್ಲಿ ಜೂನ್ 29ರಂದು ಮಳೆಗಾಲ ಆರಂಭವಾಗುತ್ತದೆ.<br /> <br /> ಸಾಮಾನ್ಯವಾಗಿ ಜೂನ್ 15ರ ವೇಳೆಗೆ ನೈರುತ್ಯ ಮುಂಗಾರು ಇಡೀ ರಾಷ್ಟ್ರವನ್ನು ವ್ಯಾಪಿಸುತ್ತದೆ. ಆದರೆ ಈ ವರ್ಷ ಅವಧಿಗೆ ಮುಂಚಿತವಾಗಿ, ಅಂದರೆ ಶುಕ್ರವಾರವೇ ದೇಶದ ಮೂರನೇ ಎರಡು ಭೂಭಾಗದಲ್ಲಿ ಮಳೆಯಾಗಿದೆ.<br /> <br /> `ನೈರುತ್ಯ ಮುಂಗಾರು ಮಾರುತವು ಉತ್ತರಾಖಂಡ, ಹಿಮಾಚಲ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಪ್ರದೇಶ, ವಿದರ್ಭ ಮತ್ತು ಕೇರಳ ರಾಜ್ಯಗಳಲ್ಲಿ ಬಿರುಸುಗೊಂಡಿದೆ. ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ಕ್ರಿಯಾಶೀಲವಾಗಿದೆ' ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಬ್ರಹ್ಮ ಪ್ರಕಾಶ್ ಯಾದವ್ ಹೇಳಿದ್ದಾರೆ.<br /> <br /> ಮುಂದಿನ ಮೂರು ದಿನಗಳಲ್ಲಿ ಲಕ್ಷದೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿ ಸೇರಿದಂತೆ ಪೂರ್ವ ಕರಾವಳಿಯ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದೂ ಅವರು ತಿಳಿಸಿದ್ದಾರೆ.ಜುಲೈ ಮತ್ತು ಆಗಸ್ಟ್ನಲ್ಲಿ ದೇಶದಾದ್ಯಂತ ವಾಡಿಕೆಯಷ್ಟು ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>