<p><strong>ಜಮ್ಮು/ನವದೆಹಲಿ/ಕೋಲ್ಕೋತ್ತಾ (ಪಿಟಿಐ): </strong>ದೆಹಲಿ ಹೈಕೋರ್ಟ್ ಬಾಂಬ್ ಸ್ಫೋಟ ಪ್ರಕರಣದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರನ್ನು ಹಾಗೂ ಜಾರ್ಖಾಂಡ್ನಲ್ಲಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.<br /> <br /> ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ನಲ್ಲಿ ಸ್ಫೋಟದ ಹೊಣೆ ಹೊತ್ತು ಮಾಧ್ಯಮ ಕಚೇರಿಗಳಿಗೆ ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಅಬೀದ್ ಮತ್ತು ಶಾರೀಖ್ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ. <br /> <br /> ಇವರಿಬ್ಬರಿಗೂ ಯಾವುದೇ ಅಪರಾಧ ಹಾಗೂ ಭಯೋತ್ಪಾದನಾ ಚಟುವಟಿಕೆಯ ಹಿನ್ನಲೆ ಇಲ್ಲ ಎಂಬುದು ಸ್ಪಷ್ಟವಾಗಿದ್ದರೂ ಇವರು ಸ್ಫೋಟ ಸಂಭವಿಸಿದ ಒಂದು ಗಂಟೆಯೊಳಗೆ ಮಾಧ್ಯಮ ಕಚೇರಿಗಳಿಗೆ ಸ್ಫೋಟದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ್ದರು. ಹೀಗಾಗಿ ಇವರನ್ನು ಬಂಧಿಸಿದ್ದು, ಸುಳ್ಳು ಪತ್ತೆಯಂತ್ರದ ಮೂಲಕ ಹಾಗೂ ಮಂಪರು ಪರೀಕ್ಷೆ ಮೂಲಕ ಇವರನ್ನು ಹೆಚ್ಚಿನ ವಿಚಾರಣೆಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.<br /> <br /> ನಾಲ್ಕನೇ ಇ-ಮೇಲ್ ಕುರಿತಂತೆ ಜಾರ್ಖಾಂಡ್ನ 14 ವರ್ಷದ ವಿದ್ಯಾರ್ಥಿ ಸನ್ನಿ ಶುಕ್ಲ ಎಂಬಾತನನ್ನು ಬಂಧಿಸಿರುವ ಪೊಲೀಸರು ಈತ ಕುಚೋದ್ಯಕ್ಕಾಗಿ ಮೇಲ್ ಕಳುಹಿಸಿದ್ದು, ಈತನಿಗೂ ಸ್ಫೋಟಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಈತನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು/ನವದೆಹಲಿ/ಕೋಲ್ಕೋತ್ತಾ (ಪಿಟಿಐ): </strong>ದೆಹಲಿ ಹೈಕೋರ್ಟ್ ಬಾಂಬ್ ಸ್ಫೋಟ ಪ್ರಕರಣದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರನ್ನು ಹಾಗೂ ಜಾರ್ಖಾಂಡ್ನಲ್ಲಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.<br /> <br /> ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ನಲ್ಲಿ ಸ್ಫೋಟದ ಹೊಣೆ ಹೊತ್ತು ಮಾಧ್ಯಮ ಕಚೇರಿಗಳಿಗೆ ಇ-ಮೇಲ್ ಕಳುಹಿಸಿದ ಆರೋಪದ ಮೇಲೆ ಅಬೀದ್ ಮತ್ತು ಶಾರೀಖ್ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ. <br /> <br /> ಇವರಿಬ್ಬರಿಗೂ ಯಾವುದೇ ಅಪರಾಧ ಹಾಗೂ ಭಯೋತ್ಪಾದನಾ ಚಟುವಟಿಕೆಯ ಹಿನ್ನಲೆ ಇಲ್ಲ ಎಂಬುದು ಸ್ಪಷ್ಟವಾಗಿದ್ದರೂ ಇವರು ಸ್ಫೋಟ ಸಂಭವಿಸಿದ ಒಂದು ಗಂಟೆಯೊಳಗೆ ಮಾಧ್ಯಮ ಕಚೇರಿಗಳಿಗೆ ಸ್ಫೋಟದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ್ದರು. ಹೀಗಾಗಿ ಇವರನ್ನು ಬಂಧಿಸಿದ್ದು, ಸುಳ್ಳು ಪತ್ತೆಯಂತ್ರದ ಮೂಲಕ ಹಾಗೂ ಮಂಪರು ಪರೀಕ್ಷೆ ಮೂಲಕ ಇವರನ್ನು ಹೆಚ್ಚಿನ ವಿಚಾರಣೆಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.<br /> <br /> ನಾಲ್ಕನೇ ಇ-ಮೇಲ್ ಕುರಿತಂತೆ ಜಾರ್ಖಾಂಡ್ನ 14 ವರ್ಷದ ವಿದ್ಯಾರ್ಥಿ ಸನ್ನಿ ಶುಕ್ಲ ಎಂಬಾತನನ್ನು ಬಂಧಿಸಿರುವ ಪೊಲೀಸರು ಈತ ಕುಚೋದ್ಯಕ್ಕಾಗಿ ಮೇಲ್ ಕಳುಹಿಸಿದ್ದು, ಈತನಿಗೂ ಸ್ಫೋಟಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಈತನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>