<p>ಅಲ್ವಾರ್ (ಪಿಟಿಐ): ದೆಹಲಿ ಹೈಕೋರ್ಟ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ರೇಖಾಚಿತ್ರವನ್ನು ಹೋಲುವ ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳನ್ನು ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರನ್ನು ಅಬ್ದುಲ್ ಗನಿ ಮತ್ತು ಮಿಯಾನ್ ಅಹಮದ್ ಎಂದು ಗುರುತಿಸಲಾಗಿದೆ. <br /> <br /> `ಇವರು ಅನಂತನಾಗ್ ಜಿಲ್ಲೆಯ ಗ್ರಾಮವೊಂದರ ನಿವಾಸಿಗಳಾಗಿದ್ದು, ಇವರ ಮುಖಚರ್ಯೆಯು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತರ ರೇಖಾಚಿತ್ರಗಳಿಗೆ ಹೋಲುತ್ತಿರುವುದನ್ನು ಕೆಲವು ಜನರು ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಶುಕ್ರವಾರ ಸಂಜೆ ಕಿಶನ್ಗಡ ಬಾಸ್ ಪ್ರದೇಶದಲ್ಲಿ ಬಂಧಿಸಲಾಯಿತು~ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ತಿಳಿಸಿದ್ದಾರೆ.<br /> <br /> `ಶುಕ್ರವಾರ ರಾತ್ರಿ ಪೂರ್ತಿ ಇಬ್ಬರ ವಿಚಾರಣೆ ನಡೆಸಲಾಗಿದೆ. ಅವರು ಯಾವುದೇ ಸಂಶಯಾಸ್ಪದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ~ ಎಂದು ಅವರು ಹೇಳಿದ್ದಾರೆ.<br /> <br /> ಸ್ವಿಚ್ ಪತ್ತೆ: ಈ ಮಧ್ಯೆ ಪೊಲೀಸರಿಗೆ ಸ್ಫೋಟ ಸ್ಥಳದಲ್ಲಿ ಸ್ವಿಚ್ ಒಂದು ದೊರಕಿದ್ದು, ಹೈಕೋರ್ಟ್ ಹೊರಭಾಗದಲ್ಲಿ ಸೂಟ್ಕೇಸ್ನಲ್ಲಿದ್ದ ಬಾಂಬ್ನ್ನು ಸ್ಫೋಟಿಸಲು ಈ ಸ್ವಿಚ್ ಬಳಸಿರಬಹುದು ಎಂದು ಶಂಕಿಸಲಾಗಿದೆ. ಇಷ್ಟಾದರೂ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಇದುವರೆಗೆ ಖಚಿತವಾದ ಸುಳಿವು ಸಿಕ್ಕಿಲ್ಲ. ಸ್ಫೋಟಕ್ಕೆ ಬಳಸಿರಬಹುದಾದ ಟೈಮರ್ಗಾಗಿ ಶೋಧ ನಡೆದಿದೆ.<br /> <br /> ಮುಂಬೈನಲ್ಲಿ ವಿಚಾರಣೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶನಿವಾರ ಇಬ್ಬರನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿದ ಬಳಿಕ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.<br /> `ಸ್ಫೋಟಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿದು ಬಂದ ಬಳಿಕ ಬಿಡುಗಡೆ ಮಾಡಲಾಗಿದೆ.<br /> <br /> ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತರ ಛಾಯಾಚಿತ್ರ ಹಾಗೂ ಇವರ ನಡುವೆ ಹೋಲಿಕೆ ಇದ್ದಿದ್ದರಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು~ ಎಂದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ರಾಕೇಶ್ ಮರಿಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಲ್ವಾರ್ (ಪಿಟಿಐ): ದೆಹಲಿ ಹೈಕೋರ್ಟ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ರೇಖಾಚಿತ್ರವನ್ನು ಹೋಲುವ ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳನ್ನು ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರನ್ನು ಅಬ್ದುಲ್ ಗನಿ ಮತ್ತು ಮಿಯಾನ್ ಅಹಮದ್ ಎಂದು ಗುರುತಿಸಲಾಗಿದೆ. <br /> <br /> `ಇವರು ಅನಂತನಾಗ್ ಜಿಲ್ಲೆಯ ಗ್ರಾಮವೊಂದರ ನಿವಾಸಿಗಳಾಗಿದ್ದು, ಇವರ ಮುಖಚರ್ಯೆಯು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತರ ರೇಖಾಚಿತ್ರಗಳಿಗೆ ಹೋಲುತ್ತಿರುವುದನ್ನು ಕೆಲವು ಜನರು ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಶುಕ್ರವಾರ ಸಂಜೆ ಕಿಶನ್ಗಡ ಬಾಸ್ ಪ್ರದೇಶದಲ್ಲಿ ಬಂಧಿಸಲಾಯಿತು~ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ತಿಳಿಸಿದ್ದಾರೆ.<br /> <br /> `ಶುಕ್ರವಾರ ರಾತ್ರಿ ಪೂರ್ತಿ ಇಬ್ಬರ ವಿಚಾರಣೆ ನಡೆಸಲಾಗಿದೆ. ಅವರು ಯಾವುದೇ ಸಂಶಯಾಸ್ಪದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ~ ಎಂದು ಅವರು ಹೇಳಿದ್ದಾರೆ.<br /> <br /> ಸ್ವಿಚ್ ಪತ್ತೆ: ಈ ಮಧ್ಯೆ ಪೊಲೀಸರಿಗೆ ಸ್ಫೋಟ ಸ್ಥಳದಲ್ಲಿ ಸ್ವಿಚ್ ಒಂದು ದೊರಕಿದ್ದು, ಹೈಕೋರ್ಟ್ ಹೊರಭಾಗದಲ್ಲಿ ಸೂಟ್ಕೇಸ್ನಲ್ಲಿದ್ದ ಬಾಂಬ್ನ್ನು ಸ್ಫೋಟಿಸಲು ಈ ಸ್ವಿಚ್ ಬಳಸಿರಬಹುದು ಎಂದು ಶಂಕಿಸಲಾಗಿದೆ. ಇಷ್ಟಾದರೂ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಇದುವರೆಗೆ ಖಚಿತವಾದ ಸುಳಿವು ಸಿಕ್ಕಿಲ್ಲ. ಸ್ಫೋಟಕ್ಕೆ ಬಳಸಿರಬಹುದಾದ ಟೈಮರ್ಗಾಗಿ ಶೋಧ ನಡೆದಿದೆ.<br /> <br /> ಮುಂಬೈನಲ್ಲಿ ವಿಚಾರಣೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶನಿವಾರ ಇಬ್ಬರನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿದ ಬಳಿಕ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.<br /> `ಸ್ಫೋಟಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿದು ಬಂದ ಬಳಿಕ ಬಿಡುಗಡೆ ಮಾಡಲಾಗಿದೆ.<br /> <br /> ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತರ ಛಾಯಾಚಿತ್ರ ಹಾಗೂ ಇವರ ನಡುವೆ ಹೋಲಿಕೆ ಇದ್ದಿದ್ದರಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು~ ಎಂದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ರಾಕೇಶ್ ಮರಿಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>