<p><strong>ಚನ್ನಗಿರಿ: </strong>ದೇಗುಲಗಳು ಶಾಂತಿ, ನೆಮ್ಮದಿಯ ತಾಣಗಳು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಮುಖ್ಯ ಕಚೇರಿಯ ಮುಂಭಾಗದಲ್ಲಿ ಸತ್ಯಸಾಯಿ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ ಸತ್ಯಸಾಯಿ ಸೇವಾ ಕ್ಷೇತ್ರ ಹಾಗೂ ಸಾಯಿ ಗಣಪತಿ ಮಂದಿರದ ಶಂಕುಸ್ಥಾಪನಾ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜನರಲ್ಲಿ ಧಾರ್ಮಿಕ ಭಾವನೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂಬುದಕ್ಕೆ ಕಳೆದ ಮೂರು ವರ್ಷಗಳಲ್ಲಿ ಅನೇಕ ದೇಗುಲಗಳನ್ನು ನಿರ್ಮಾಣ ಮಾಡಿರುವುದೇ ಸಾಕ್ಷಿ. ದೇಗುಲಗಳನ್ನು ನಿರ್ಮಿಸುವುದು ಸುಲಭ. ಆದರೆ, ನಿರ್ಮಾಣಗೊಂಡ ನಂತರ ಅವುಗಳನ್ನು ನಿರ್ವಹಣೆ ಕಷ್ಟದ ಕಾರ್ಯವಾಗಿದೆ ಎಂದರು.<br /> <br /> ಮೂಢನಂಬಿಕೆಗೆ ದಾಸರಾಗಬಾರದು. ಜೀವನದಲ್ಲಿ ಸಂಸ್ಕಾರವಂತರಾಗಬೇಕು. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ವಚನದ ಸಾರದಂತೆ ಕಾಯಕಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಕರೆ ನೀಡಿದರು.<br /> ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ಪಾಂಡುರಂಗ ಶೇಟ್ ಅಧ್ಯಕ್ಷತೆ ವಹಿಸಿದ್ದರು. <br /> <br /> ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಎಂ.ಬಿ. ರಾಜಪ್ಪ, ಸದಸ್ಯರಾದ ಭಾರತಿ ಪ್ರಸಾದ್, ಸಿ.ಕೆ. ರೇವಣ್ಣ, ಲಕ್ಷ್ಮೀ ರುದ್ರೋಜಿರಾವ್, ಪಿ.ಬಿ. ನಾಯಕ್, ಮುಖ್ಯ ಅಂಚೆ ಕಚೇರಿ ಅಧಿಕಾರಿ ಲಿಂಗರಾಜ್, ರೈತ ಸಂಘದ ಅಧ್ಯಕ್ಷ ಸುಣಿಗೆರೆ ಪರಮೇಶ್ವರಪ್ಪ, ಎಲ್.ಎಂ. ಬಾಬಣ್ಣ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: </strong>ದೇಗುಲಗಳು ಶಾಂತಿ, ನೆಮ್ಮದಿಯ ತಾಣಗಳು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಮುಖ್ಯ ಕಚೇರಿಯ ಮುಂಭಾಗದಲ್ಲಿ ಸತ್ಯಸಾಯಿ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ ಸತ್ಯಸಾಯಿ ಸೇವಾ ಕ್ಷೇತ್ರ ಹಾಗೂ ಸಾಯಿ ಗಣಪತಿ ಮಂದಿರದ ಶಂಕುಸ್ಥಾಪನಾ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜನರಲ್ಲಿ ಧಾರ್ಮಿಕ ಭಾವನೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂಬುದಕ್ಕೆ ಕಳೆದ ಮೂರು ವರ್ಷಗಳಲ್ಲಿ ಅನೇಕ ದೇಗುಲಗಳನ್ನು ನಿರ್ಮಾಣ ಮಾಡಿರುವುದೇ ಸಾಕ್ಷಿ. ದೇಗುಲಗಳನ್ನು ನಿರ್ಮಿಸುವುದು ಸುಲಭ. ಆದರೆ, ನಿರ್ಮಾಣಗೊಂಡ ನಂತರ ಅವುಗಳನ್ನು ನಿರ್ವಹಣೆ ಕಷ್ಟದ ಕಾರ್ಯವಾಗಿದೆ ಎಂದರು.<br /> <br /> ಮೂಢನಂಬಿಕೆಗೆ ದಾಸರಾಗಬಾರದು. ಜೀವನದಲ್ಲಿ ಸಂಸ್ಕಾರವಂತರಾಗಬೇಕು. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ವಚನದ ಸಾರದಂತೆ ಕಾಯಕಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಕರೆ ನೀಡಿದರು.<br /> ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ಪಾಂಡುರಂಗ ಶೇಟ್ ಅಧ್ಯಕ್ಷತೆ ವಹಿಸಿದ್ದರು. <br /> <br /> ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಎಂ.ಬಿ. ರಾಜಪ್ಪ, ಸದಸ್ಯರಾದ ಭಾರತಿ ಪ್ರಸಾದ್, ಸಿ.ಕೆ. ರೇವಣ್ಣ, ಲಕ್ಷ್ಮೀ ರುದ್ರೋಜಿರಾವ್, ಪಿ.ಬಿ. ನಾಯಕ್, ಮುಖ್ಯ ಅಂಚೆ ಕಚೇರಿ ಅಧಿಕಾರಿ ಲಿಂಗರಾಜ್, ರೈತ ಸಂಘದ ಅಧ್ಯಕ್ಷ ಸುಣಿಗೆರೆ ಪರಮೇಶ್ವರಪ್ಪ, ಎಲ್.ಎಂ. ಬಾಬಣ್ಣ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>