<p> <strong>ದೇವನಹಳ್ಳಿ:</strong> ಹೋಮಿಯೋಪತಿ ಚಿಕಿತ್ಸೆಯಿಂದ ಎಲ್ಲಾ ರೋಗಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೋಮಿಯೋಪತಿ ವೈದ್ಯರಾದ ಅನುರಾಧ ತಿಳಿಸಿದರು.ಇಲ್ಲಿನ ಲಯನ್ಸ್ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಮ್ಮಿಕೊಂಡಿದ್ದ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ರೋಗಗಳನ್ನು ಗುಣಪಡಿಸಲು ಹಲವು ಚಿಕಿತ್ಸಾ ವಿಧಾನಗಳಿವೆ. ರೋಗಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ರೋಗದ ಲಕ್ಷಣಗಳು ಕಾಣಸಿಕೊಂಡಲ್ಲಿ ಪ್ರಾಥಮಿಕ ಹಂತದಲ್ಲೇ ತಜ್ಞ ವೈದ್ಯರ ಸಲಹೆ ಪಡೆಯುವುದು ಅವಶ್ಯ ಎಂದು ತಿಳಿಸಿದರು.<br /> <br /> ಲಯನ್ಸ್ ಅಧ್ಯಕ್ಷ ವೈ.ಕೆ.ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ 60 ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ನಡೆಸಲಾಗಿದೆ. ಪ್ರತಿ ತಿಂಗಳ ಮೂರನೇ ಭಾನುವಾರ ಉಚಿತ ಹೋಮಿಯೋಪತಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.<br /> <br /> ಲಯನೆಸ್ ಅಧ್ಯಕ್ಷೆ ಗೋಮತಿ ರಮೇಶ್, ಮಾಜಿ ಅಧ್ಯಕ್ಷರಾದ ವೈ.ಸಿ.ಕೃಪಾಕರ್, ರಮೇಶ್, ಪಶುವೈದ್ಯ ಮುನಿವೆಂಕಟಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ದೇವನಹಳ್ಳಿ:</strong> ಹೋಮಿಯೋಪತಿ ಚಿಕಿತ್ಸೆಯಿಂದ ಎಲ್ಲಾ ರೋಗಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಹೋಮಿಯೋಪತಿ ವೈದ್ಯರಾದ ಅನುರಾಧ ತಿಳಿಸಿದರು.ಇಲ್ಲಿನ ಲಯನ್ಸ್ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಮ್ಮಿಕೊಂಡಿದ್ದ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ರೋಗಗಳನ್ನು ಗುಣಪಡಿಸಲು ಹಲವು ಚಿಕಿತ್ಸಾ ವಿಧಾನಗಳಿವೆ. ರೋಗಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ರೋಗದ ಲಕ್ಷಣಗಳು ಕಾಣಸಿಕೊಂಡಲ್ಲಿ ಪ್ರಾಥಮಿಕ ಹಂತದಲ್ಲೇ ತಜ್ಞ ವೈದ್ಯರ ಸಲಹೆ ಪಡೆಯುವುದು ಅವಶ್ಯ ಎಂದು ತಿಳಿಸಿದರು.<br /> <br /> ಲಯನ್ಸ್ ಅಧ್ಯಕ್ಷ ವೈ.ಕೆ.ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ 60 ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ನಡೆಸಲಾಗಿದೆ. ಪ್ರತಿ ತಿಂಗಳ ಮೂರನೇ ಭಾನುವಾರ ಉಚಿತ ಹೋಮಿಯೋಪತಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.<br /> <br /> ಲಯನೆಸ್ ಅಧ್ಯಕ್ಷೆ ಗೋಮತಿ ರಮೇಶ್, ಮಾಜಿ ಅಧ್ಯಕ್ಷರಾದ ವೈ.ಸಿ.ಕೃಪಾಕರ್, ರಮೇಶ್, ಪಶುವೈದ್ಯ ಮುನಿವೆಂಕಟಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>