<p><strong>ಬೆಂಗಳೂರು: ‘</strong>ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿರುವುದನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳಲು ನಾನೇನು ಸಣ್ಣ ಹುಡುಗನಲ್ಲ. ನಾನು ದೇಶ ಸೇವೆ ಮಾಡುವ ಬಯಕೆಯುಳ್ಳ ಜವಾಬ್ದಾರಿಯುತ ವ್ಯಕ್ತಿ. ಆ ಕೆಲಸ ಮಾಡುವುದಕ್ಕೆ ನನಗೆ ಹಲವು ದಾರಿಗಳಿವೆ’ ಎಂದು ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ಹೇಳಿದರು.<br /> <br /> ಹೈಕಮಾಂಡ್ ವಿರುದ್ಧ ಮುನಿಸಿಕೊಂಡಿರುವ ಅವರು ‘ಪ್ರಜಾವಾಣಿ’ ಜೊತೆ ಮಾತನಾಡುತ್ತ ತಮ್ಮ<br /> ಅಸಮಾಧಾನ ಹೊರಹಾಕಿದರು.<br /> <br /> ‘ಭವಿಷ್ಯದ ಹಾದಿ ಕುರಿತು ನನ್ನ ತಲೆಯಲ್ಲಿ ಒಂದಷ್ಟು ಯೋಚನೆಗಳಿವೆ. ಆದರೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ನಾನು ಮೆಕ್ಕಾ ಯಾತ್ರೆಗೆ ಹೋಗುತ್ತಿದ್ದೇನೆ. ಅಲ್ಲಿ ದೇವರ ಬಳಿ ಸಲಹೆ ಕೇಳುತ್ತೇನೆ. ದೇವರು ಮುಂದಿನದನ್ನು ನಿರ್ಧರಿಸುತ್ತಾನೆ’ ಎಂದು ಮುಂದಿನ ನಡೆ ಕುರಿತು ಗುಟ್ಟು ಕಾಯ್ದುಕೊಂಡರು.<br /> <br /> ರಿಜ್ವಾನ್ಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ‘ಆತ (ರಿಜ್ವಾನ್) ಇನ್ನೂ ಯುವಕ. ಅವರಿಗೆ ದೀರ್ಘ ಕಾಲಾವಕಾಶ ದೊರೆಯುತ್ತದೆ. ಅವರಿಗೆ ನಾಯಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕೆಲವು ಸಂದರ್ಭದಲ್ಲಿ<br /> ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ಸಿಟ್ಟು ಹೊರಹಾಕಿದರು.<br /> <br /> <strong>ಸಮಾಧಾನಕ್ಕೆ ಯತ್ನ</strong><br /> ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳಲ್ಲಿ ಒಬ್ಬರಾಗಿರುವ ಡಾ.ಎ.ಚೆಲ್ಲಕುಮಾರ್ ಅವರು ಸಿ.ಕೆ.ಜಾಫರ್ ಷರೀಫ್ ಅವರನ್ನು ಭೇಟಿಮಾಡಿ ಸಮಾಧಾನಪಡಿಸುವ ಪ್ರಯತ್ನ ಮಾಡಿದರು.<br /> <br /> ‘ನಿಮಗೆ ಅವಮಾನ ಮಾಡುವ ಉದ್ದೇಶದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸಿಲ್ಲ. ಪಕ್ಷದ ಹಿತದೃಷ್ಟಿಯಿಂದ ರಿಜ್ವಾನ್ ಅರ್ಷದ್ ಅವರಿಗೆ ಅವಕಾಶ ನೀಡಲಾಗಿದೆ’ ಎಂದು ಹೈಕಮಾಂಡ್ ನಿರ್ಧಾರವನ್ನು ಷರೀಫ್ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿರುವುದನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳಲು ನಾನೇನು ಸಣ್ಣ ಹುಡುಗನಲ್ಲ. ನಾನು ದೇಶ ಸೇವೆ ಮಾಡುವ ಬಯಕೆಯುಳ್ಳ ಜವಾಬ್ದಾರಿಯುತ ವ್ಯಕ್ತಿ. ಆ ಕೆಲಸ ಮಾಡುವುದಕ್ಕೆ ನನಗೆ ಹಲವು ದಾರಿಗಳಿವೆ’ ಎಂದು ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ಹೇಳಿದರು.<br /> <br /> ಹೈಕಮಾಂಡ್ ವಿರುದ್ಧ ಮುನಿಸಿಕೊಂಡಿರುವ ಅವರು ‘ಪ್ರಜಾವಾಣಿ’ ಜೊತೆ ಮಾತನಾಡುತ್ತ ತಮ್ಮ<br /> ಅಸಮಾಧಾನ ಹೊರಹಾಕಿದರು.<br /> <br /> ‘ಭವಿಷ್ಯದ ಹಾದಿ ಕುರಿತು ನನ್ನ ತಲೆಯಲ್ಲಿ ಒಂದಷ್ಟು ಯೋಚನೆಗಳಿವೆ. ಆದರೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ನಾನು ಮೆಕ್ಕಾ ಯಾತ್ರೆಗೆ ಹೋಗುತ್ತಿದ್ದೇನೆ. ಅಲ್ಲಿ ದೇವರ ಬಳಿ ಸಲಹೆ ಕೇಳುತ್ತೇನೆ. ದೇವರು ಮುಂದಿನದನ್ನು ನಿರ್ಧರಿಸುತ್ತಾನೆ’ ಎಂದು ಮುಂದಿನ ನಡೆ ಕುರಿತು ಗುಟ್ಟು ಕಾಯ್ದುಕೊಂಡರು.<br /> <br /> ರಿಜ್ವಾನ್ಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ‘ಆತ (ರಿಜ್ವಾನ್) ಇನ್ನೂ ಯುವಕ. ಅವರಿಗೆ ದೀರ್ಘ ಕಾಲಾವಕಾಶ ದೊರೆಯುತ್ತದೆ. ಅವರಿಗೆ ನಾಯಕರ ಬೆಂಬಲ ಇದೆ ಎಂಬ ಕಾರಣಕ್ಕೆ ಕೆಲವು ಸಂದರ್ಭದಲ್ಲಿ<br /> ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ಸಿಟ್ಟು ಹೊರಹಾಕಿದರು.<br /> <br /> <strong>ಸಮಾಧಾನಕ್ಕೆ ಯತ್ನ</strong><br /> ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳಲ್ಲಿ ಒಬ್ಬರಾಗಿರುವ ಡಾ.ಎ.ಚೆಲ್ಲಕುಮಾರ್ ಅವರು ಸಿ.ಕೆ.ಜಾಫರ್ ಷರೀಫ್ ಅವರನ್ನು ಭೇಟಿಮಾಡಿ ಸಮಾಧಾನಪಡಿಸುವ ಪ್ರಯತ್ನ ಮಾಡಿದರು.<br /> <br /> ‘ನಿಮಗೆ ಅವಮಾನ ಮಾಡುವ ಉದ್ದೇಶದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸಿಲ್ಲ. ಪಕ್ಷದ ಹಿತದೃಷ್ಟಿಯಿಂದ ರಿಜ್ವಾನ್ ಅರ್ಷದ್ ಅವರಿಗೆ ಅವಕಾಶ ನೀಡಲಾಗಿದೆ’ ಎಂದು ಹೈಕಮಾಂಡ್ ನಿರ್ಧಾರವನ್ನು ಷರೀಫ್ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>