<p><strong>ಬೆಂಗಳೂರು:</strong> ಸುಬ್ರಹ್ಮಣ್ಯಪುರ-ಉತ್ತರಹಳ್ಳಿ ಆಸುಪಾಸಿನ ಕೆರೆ ಅಭಿವೃದ್ಧಿ ಟ್ರಸ್ಟ್ (ಸನ್ಲಿಟ್) ಸದಸ್ಯರು ಭಾನುವಾರ ವಸಂತಪುರದ ವಸಂತವಲ್ಲಭ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರು.<br /> <br /> ಸನ್ಲಿಟ್ ಸದಸ್ಯರಲ್ಲದೆ ಅಕ್ಕ-ಪಕ್ಕದ ನಿವಾಸಿಗಳು, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಬೆಳಿಗ್ಗೆ 7.30ರ ಸುಮಾರಿಗೆ ಆರಂಭವಾದ ಸ್ವಚ್ಛತಾ ಕಾರ್ಯ ನಾಲ್ಕು ಗಂಟೆಗಳ ಕಾಲ ನಡೆಯಿತು. ಸಾವಿರ ವರ್ಷದಷ್ಟು ಹಳೆಯದಾದ ಕಲ್ಯಾಣಿ, ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.<br /> <br /> ಮೂರು ವರ್ಷಗಳಿಂದ ಕಲ್ಯಾಣಿಯಲ್ಲಿ ನೀರೇ ಇಲ್ಲ. ಕಲ್ಯಾಣಿಗೆ ನೀರು ತರುತ್ತಿದ್ದ ಕಾಲುವೆಗಳು ಮುಚ್ಚಿಹೋಗಿದ್ದೇ ಅದು ಬತ್ತಿಹೋಗಲು ಕಾರಣ ಎಂದು ಸನ್ಲಿಟ್ ಸದಸ್ಯರು ದೂರಿದರು.<br /> <br /> `ಕಲ್ಯಾಣಿಗೆ ಜಲಮೂಲವಾದ ಜನಾರ್ದನ ಕೆರೆ ಸಹ ಎರಡು ವರ್ಷಗಳಿಂದ ಒಣಗಿಹೋಗಿದೆ. ನೀರಿಲ್ಲದೆ ಕೆರೆಗೆ ಮರುಜೀವ ಬರುವುದಾದರೂ ಹೇಗೆ' ಎಂದು ಪ್ರಶ್ನಿಸಿದ ಸನ್ಲಿಟ್ ಟ್ರಸ್ಟಿ ಮಹೇಶಕುಮಾರ್, `ಮುಂದಿನ ಶ್ರಮದಾನದಲ್ಲಿ ಕಾಲುವೆಗಳನ್ನು ಸ್ವಚ್ಛಗೊಳಿಸಲಾಗುವುದು. ಪ್ರತಿ ಭಾನುವಾರವೂ ಶ್ರಮದಾನ ಮಾಡಲು ನಿರ್ಧರಿಸಲಾಗಿದೆ' ಎಂದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಕಲ್ಯಾಣಿ ಅಭಿವೃದ್ಧಿಗೆ ರೂ 50 ಲಕ್ಷವನ್ನು ಮೀಸಲಿಟ್ಟಿತ್ತು. ಬೊಮ್ಮನಹಳ್ಳಿ ವಲಯ ಎಂಜನಿಯರ್ಗಳು ಆ ಮೊತ್ತವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದರು. ಬಿಬಿಎಂಪಿ ಆಯುಕ್ತರ ತಾಂತ್ರಿಕ ತನಿಖಾ ಕೋಶ (ಟಿವಿಸಿಸಿ) ಈ ಅಕ್ರಮವನ್ನು ಬಯಲಿಗೆ ತಂದಿತ್ತು.<br /> <br /> `ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಸಂಬಂಧ ಅಧಿಕಾರಿಗಳ ವಿರುದ್ಧ ಏಪ್ರಿಲ್ನಲ್ಲಿ ದೂರು ನೀಡಿದ್ದಾರೆ. ತಪ್ಪು ಮಾಡಿದ ಅಧಿಕಾರಿಗಳು ರಾಜಾರೋಷವಾಗಿ ಓಡಾಡುತ್ತಿದ್ದು, ಕ್ರಮ ಕೈಗೊಂಡಿಲ್ಲ' ಎಂದು ಸನ್ಲಿಟ್ನ ವ್ಯವಸ್ಥಾಪಕ ಟ್ರಸ್ಟಿ ಫಣಿಸಾಯಿ ಭಾರದ್ವಾಜ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುಬ್ರಹ್ಮಣ್ಯಪುರ-ಉತ್ತರಹಳ್ಳಿ ಆಸುಪಾಸಿನ ಕೆರೆ ಅಭಿವೃದ್ಧಿ ಟ್ರಸ್ಟ್ (ಸನ್ಲಿಟ್) ಸದಸ್ಯರು ಭಾನುವಾರ ವಸಂತಪುರದ ವಸಂತವಲ್ಲಭ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರು.<br /> <br /> ಸನ್ಲಿಟ್ ಸದಸ್ಯರಲ್ಲದೆ ಅಕ್ಕ-ಪಕ್ಕದ ನಿವಾಸಿಗಳು, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಬೆಳಿಗ್ಗೆ 7.30ರ ಸುಮಾರಿಗೆ ಆರಂಭವಾದ ಸ್ವಚ್ಛತಾ ಕಾರ್ಯ ನಾಲ್ಕು ಗಂಟೆಗಳ ಕಾಲ ನಡೆಯಿತು. ಸಾವಿರ ವರ್ಷದಷ್ಟು ಹಳೆಯದಾದ ಕಲ್ಯಾಣಿ, ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.<br /> <br /> ಮೂರು ವರ್ಷಗಳಿಂದ ಕಲ್ಯಾಣಿಯಲ್ಲಿ ನೀರೇ ಇಲ್ಲ. ಕಲ್ಯಾಣಿಗೆ ನೀರು ತರುತ್ತಿದ್ದ ಕಾಲುವೆಗಳು ಮುಚ್ಚಿಹೋಗಿದ್ದೇ ಅದು ಬತ್ತಿಹೋಗಲು ಕಾರಣ ಎಂದು ಸನ್ಲಿಟ್ ಸದಸ್ಯರು ದೂರಿದರು.<br /> <br /> `ಕಲ್ಯಾಣಿಗೆ ಜಲಮೂಲವಾದ ಜನಾರ್ದನ ಕೆರೆ ಸಹ ಎರಡು ವರ್ಷಗಳಿಂದ ಒಣಗಿಹೋಗಿದೆ. ನೀರಿಲ್ಲದೆ ಕೆರೆಗೆ ಮರುಜೀವ ಬರುವುದಾದರೂ ಹೇಗೆ' ಎಂದು ಪ್ರಶ್ನಿಸಿದ ಸನ್ಲಿಟ್ ಟ್ರಸ್ಟಿ ಮಹೇಶಕುಮಾರ್, `ಮುಂದಿನ ಶ್ರಮದಾನದಲ್ಲಿ ಕಾಲುವೆಗಳನ್ನು ಸ್ವಚ್ಛಗೊಳಿಸಲಾಗುವುದು. ಪ್ರತಿ ಭಾನುವಾರವೂ ಶ್ರಮದಾನ ಮಾಡಲು ನಿರ್ಧರಿಸಲಾಗಿದೆ' ಎಂದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಕಲ್ಯಾಣಿ ಅಭಿವೃದ್ಧಿಗೆ ರೂ 50 ಲಕ್ಷವನ್ನು ಮೀಸಲಿಟ್ಟಿತ್ತು. ಬೊಮ್ಮನಹಳ್ಳಿ ವಲಯ ಎಂಜನಿಯರ್ಗಳು ಆ ಮೊತ್ತವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದರು. ಬಿಬಿಎಂಪಿ ಆಯುಕ್ತರ ತಾಂತ್ರಿಕ ತನಿಖಾ ಕೋಶ (ಟಿವಿಸಿಸಿ) ಈ ಅಕ್ರಮವನ್ನು ಬಯಲಿಗೆ ತಂದಿತ್ತು.<br /> <br /> `ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಸಂಬಂಧ ಅಧಿಕಾರಿಗಳ ವಿರುದ್ಧ ಏಪ್ರಿಲ್ನಲ್ಲಿ ದೂರು ನೀಡಿದ್ದಾರೆ. ತಪ್ಪು ಮಾಡಿದ ಅಧಿಕಾರಿಗಳು ರಾಜಾರೋಷವಾಗಿ ಓಡಾಡುತ್ತಿದ್ದು, ಕ್ರಮ ಕೈಗೊಂಡಿಲ್ಲ' ಎಂದು ಸನ್ಲಿಟ್ನ ವ್ಯವಸ್ಥಾಪಕ ಟ್ರಸ್ಟಿ ಫಣಿಸಾಯಿ ಭಾರದ್ವಾಜ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>