<p>ಬೆಂಗಳೂರು: ಉತ್ತರ ತಾಲ್ಲೂಕಿನ ಚಿಕ್ಕಜಾಲ ಹೋಬಳಿಯಲ್ಲಿನ ಉಣಚೂರು ಗ್ರಾಮದಲ್ಲಿ ಇರುವ ತಿರುಮಲ ದೇವಸ್ಥಾನ ಹಿಂದೆ ಯಾವ ರೀತಿ ಇತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.<br /> <br /> ಈ ದೇವಾಲಯದ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಆಗುತ್ತಿದೆ ಎಂದು ದೂರಿ ಅರ್ಚಕ ಎಚ್.ಆರ್.ರಘುನಾಥ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ಸರ್ವೆ ನಂ.98ರಲ್ಲಿ ಇರುವ ಈ ದೇವಾಲಯದಲ್ಲಿ ನಾರಾಯಣಸ್ವಾಮಿ ಹಾಗೂ ಇತರರು ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ. ವಿಚಾರಣೆ ಮುಂದೂಡಲಾಗಿದೆ.<br /> <br /> ಸರ್ಕಾರಕ್ಕೆ ನೋಟಿಸ್<br /> ರಾಜಕೀಯ ಪ್ರಭಾವ ಬಳಸಿಕೊಂಡು ಮಾರಸಂದ್ರ ಮುನಿಯಪ್ಪ ಅವರು ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದು ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ಜನರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರಿಗೆ ಮುನಿಯಪ್ಪನವರು ತೀವ್ರ ಹಿಂಸೆ ನೀಡುತ್ತಿದ್ದಾರೆ ಎಂದು ವೀರಣ್ಣ ಹಾಗೂ ಇತರರು ದೂರಿದ್ದಾರೆ. <br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.<br /> <br /> ತನಿಖೆ: ತಡೆ ವಿಸ್ತರಣೆ<br /> ಚಿತ್ರನಟ ವಿನೋದ್ ಕುಮಾರ್ ಅವರ ಕೊಲೆ ಪ್ರಕರಣವನ್ನು ಮುಂದಿನ ತನಿಖೆಗೆ ಸಿಐಡಿಗೆ ಒಪ್ಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಒಂದು ವಾರದ ವರೆಗೆ ವಿಸ್ತರಿಸಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.<br /> <br /> 4ನೇ ಎಸಿಎಂಎಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಅಂತಿಮ ಹಂತದಲ್ಲಿ ಇರುವಾಗಲೇ ಅದನ್ನು ಸಿಐಡಿಗೆ ಒಪ್ಪಿಸಲಾಗಿದ್ದು ಇದು ಸರಿಯಲ್ಲ ಎಂದು ದೂರಿ ವಿನೋದ್ ಅವರ ಸಹೋದರ ಎನ್.ಕಿರಣ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್.ಆನಂದ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಉತ್ತರ ತಾಲ್ಲೂಕಿನ ಚಿಕ್ಕಜಾಲ ಹೋಬಳಿಯಲ್ಲಿನ ಉಣಚೂರು ಗ್ರಾಮದಲ್ಲಿ ಇರುವ ತಿರುಮಲ ದೇವಸ್ಥಾನ ಹಿಂದೆ ಯಾವ ರೀತಿ ಇತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.<br /> <br /> ಈ ದೇವಾಲಯದ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಆಗುತ್ತಿದೆ ಎಂದು ದೂರಿ ಅರ್ಚಕ ಎಚ್.ಆರ್.ರಘುನಾಥ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ಸರ್ವೆ ನಂ.98ರಲ್ಲಿ ಇರುವ ಈ ದೇವಾಲಯದಲ್ಲಿ ನಾರಾಯಣಸ್ವಾಮಿ ಹಾಗೂ ಇತರರು ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ. ವಿಚಾರಣೆ ಮುಂದೂಡಲಾಗಿದೆ.<br /> <br /> ಸರ್ಕಾರಕ್ಕೆ ನೋಟಿಸ್<br /> ರಾಜಕೀಯ ಪ್ರಭಾವ ಬಳಸಿಕೊಂಡು ಮಾರಸಂದ್ರ ಮುನಿಯಪ್ಪ ಅವರು ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದು ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.<br /> <br /> ಜನರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರಿಗೆ ಮುನಿಯಪ್ಪನವರು ತೀವ್ರ ಹಿಂಸೆ ನೀಡುತ್ತಿದ್ದಾರೆ ಎಂದು ವೀರಣ್ಣ ಹಾಗೂ ಇತರರು ದೂರಿದ್ದಾರೆ. <br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.<br /> <br /> ತನಿಖೆ: ತಡೆ ವಿಸ್ತರಣೆ<br /> ಚಿತ್ರನಟ ವಿನೋದ್ ಕುಮಾರ್ ಅವರ ಕೊಲೆ ಪ್ರಕರಣವನ್ನು ಮುಂದಿನ ತನಿಖೆಗೆ ಸಿಐಡಿಗೆ ಒಪ್ಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಒಂದು ವಾರದ ವರೆಗೆ ವಿಸ್ತರಿಸಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.<br /> <br /> 4ನೇ ಎಸಿಎಂಎಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಅಂತಿಮ ಹಂತದಲ್ಲಿ ಇರುವಾಗಲೇ ಅದನ್ನು ಸಿಐಡಿಗೆ ಒಪ್ಪಿಸಲಾಗಿದ್ದು ಇದು ಸರಿಯಲ್ಲ ಎಂದು ದೂರಿ ವಿನೋದ್ ಅವರ ಸಹೋದರ ಎನ್.ಕಿರಣ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್.ಆನಂದ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>