<p>ಮಾಗಡಿ: ತಾಲ್ಲೂಕಿನ ತಿರುಮಲ ಶ್ರೀರಂಗನಾಥ ಸ್ವಾಮಿ ದೇವಾಲಯದ ಗೋಪುರ ದುರಸ್ತಿಗೆ ರೂ.50ಲಕ್ಷ ಮತ್ತು ಕೋಟೆ ಅಭಿವೃದ್ಧಿಗೆ ರೂ.1 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಬಿಡುಗಡೆ ಮಾಡಿದ್ದಾರೆ ಎಂದು ಶ್ರೀರಂಗ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಎಸ್.ಸತೀಶ್ ತಿಳಿಸಿದರು.<br /> <br /> ತಿರುಮಲ ಶ್ರೀರಂಗ ಸೇವಾ ಟ್ರಸ್ಟ್ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸಲ್ಲಿಸಿದ ಮನವಿಯ ಮೇರೆಗೆ ಹಣ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಮಾಗಡಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು ಎಂದು ಸತೀಶ್ ತಿಳಿಸಿದರು. ನೆಲಮಂಗಲ ಶಾಸಕ ಎಂ.ವಿ, ನಾಗರಾಜು, ಬಿ.ಜೆ.ಪಿ.ಮುಖಂಡರಾದ ಎಂ.ಟಿ.ಶಿವಣ್ಣ, ನಾರಾಯಣ ಸ್ವಾಮಿ, ವೆಂಕಟೇಶ್ ಅಯ್ಯಾಂಗಾರ್ ಹಾಗೂ ಟ್ರಸ್ಟ್ನ ಎಲ್ಲಾ ಪದಾಧಿಕಾರಿಗಳು ಇದ್ದರು.<br /> <br /> ಮನವಿ: ಶ್ರೀರಂಗನಾಥ ಸ್ವಾಮಿ ದೇವಾಲಯದ ದುರಸ್ತಿಯನ್ನು ಶ್ರೀರಂಗ ಸೇವಾ ಟ್ರಸ್ಟ್ ವತಿಯಿಂದಲೇ ಮಾಡಿಸಬೇಕಿದೆ. ದುರಸ್ತಿ ಕಾರ್ಯದಲ್ಲಿ ಗುಣಮಟ್ಟ ಕಾಪಾಡಿಕೊಳ್ಳ ಬೇಕು. ಗೋಪುರದ ಮೊದಲಿನ ವಾಸ್ತುಶಿಲ್ಪಕ್ಕೆ ದಕ್ಕೆಯಾಗದ ರೀತಿಯಲ್ಲಿ ದರುಸ್ತಿ ಮಾಡಿಸಬೇಲು ಎಂದು ಶ್ರೀರಂಗನಾಥ ಸ್ವಾಮಿ ಭಕ್ತ ಮಂಡಳಿಯು ಟ್ರಸ್ಟ್ ಪದಾಧಿಕಾರಿಗಳಿಗೆ ಮನವಿ ಮಾಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ತಿರುಮಲ ಶ್ರೀರಂಗನಾಥ ಸ್ವಾಮಿ ದೇವಾಲಯದ ಗೋಪುರ ದುರಸ್ತಿಗೆ ರೂ.50ಲಕ್ಷ ಮತ್ತು ಕೋಟೆ ಅಭಿವೃದ್ಧಿಗೆ ರೂ.1 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಬಿಡುಗಡೆ ಮಾಡಿದ್ದಾರೆ ಎಂದು ಶ್ರೀರಂಗ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಎಸ್.ಸತೀಶ್ ತಿಳಿಸಿದರು.<br /> <br /> ತಿರುಮಲ ಶ್ರೀರಂಗ ಸೇವಾ ಟ್ರಸ್ಟ್ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸಲ್ಲಿಸಿದ ಮನವಿಯ ಮೇರೆಗೆ ಹಣ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಮಾಗಡಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು ಎಂದು ಸತೀಶ್ ತಿಳಿಸಿದರು. ನೆಲಮಂಗಲ ಶಾಸಕ ಎಂ.ವಿ, ನಾಗರಾಜು, ಬಿ.ಜೆ.ಪಿ.ಮುಖಂಡರಾದ ಎಂ.ಟಿ.ಶಿವಣ್ಣ, ನಾರಾಯಣ ಸ್ವಾಮಿ, ವೆಂಕಟೇಶ್ ಅಯ್ಯಾಂಗಾರ್ ಹಾಗೂ ಟ್ರಸ್ಟ್ನ ಎಲ್ಲಾ ಪದಾಧಿಕಾರಿಗಳು ಇದ್ದರು.<br /> <br /> ಮನವಿ: ಶ್ರೀರಂಗನಾಥ ಸ್ವಾಮಿ ದೇವಾಲಯದ ದುರಸ್ತಿಯನ್ನು ಶ್ರೀರಂಗ ಸೇವಾ ಟ್ರಸ್ಟ್ ವತಿಯಿಂದಲೇ ಮಾಡಿಸಬೇಕಿದೆ. ದುರಸ್ತಿ ಕಾರ್ಯದಲ್ಲಿ ಗುಣಮಟ್ಟ ಕಾಪಾಡಿಕೊಳ್ಳ ಬೇಕು. ಗೋಪುರದ ಮೊದಲಿನ ವಾಸ್ತುಶಿಲ್ಪಕ್ಕೆ ದಕ್ಕೆಯಾಗದ ರೀತಿಯಲ್ಲಿ ದರುಸ್ತಿ ಮಾಡಿಸಬೇಲು ಎಂದು ಶ್ರೀರಂಗನಾಥ ಸ್ವಾಮಿ ಭಕ್ತ ಮಂಡಳಿಯು ಟ್ರಸ್ಟ್ ಪದಾಧಿಕಾರಿಗಳಿಗೆ ಮನವಿ ಮಾಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>