<p>ಶಿವಮೊಗ್ಗ: ಪ್ರತಿಯೊಬ್ಬರೂ ವೈಯಕ್ತಿಕ ಹಿತಾಸಕ್ತಿಗೆ ನೀಡುವ ಪ್ರಾಮುಖ್ಯತೆಯನ್ನು ತಾಯ್ನಾಡಿಗೂ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಇನ್ಫೋಸಿಸ್ನ ಸಂಸ್ಥಾಪಕ ಅಧ್ಯಕ್ಷ ಡಾ.ಎನ್.ಆರ್. ನಾರಾಯಣ ಮೂರ್ತಿ ಅಭಿಪ್ರಾಯ ಪಟ್ಟರು.<br /> <br /> ನಗರದ ಜಾವಳ್ಳಿಯ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಅರಬಿಂದೋ ಪದವಿಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರತಿಯೊಬ್ಬರಿಗೂ ದೇಶದ ಹಿತಾಸಕ್ತಿ ಮುಖ್ಯವಾಗಬೇಕು, ಆಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಕಳೆದ 200 ವರ್ಷಗಳಲ್ಲಿ ವಿಶ್ವವೇ ಭಾರತವನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದ್ದು, ಕೆಲವೇ ವರ್ಷಗಳಲ್ಲಿ ಈ ದೇಶದ ಸಾಧನೆ ವಿಶ್ವಕ್ಕೆ ಮಾದರಿಯಾಗುತ್ತದೆ ಎಂದರು.<br /> <br /> ಜಾಗತೀಕರಣ ನಂತರದ ವರ್ಷಗಳಿಂದ ಭಾರತ ಆರ್ಥಿಕ ಬೆಳವಣಿಗೆಯ ದರ 8.5ರಲ್ಲಿ ಸಾಗುತ್ತಿದೆ. ಹಲವು ವರ್ಷಗಳಿಂದ ಒಂದೇ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಂಡು ಬರುವುದು ಕೂಡ ಒಂದು ಸಾಧನೆಯೇ. ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡ ಅಮೆರಿಕ ಕೂಡಾ ಬೆರಗುಗಣ್ಣಿನಿಂದ ನೋಡುವಂತಾಗಿದೆ ಎಂದರು.<br /> <br /> ಜ್ಞಾನದೀಪ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ. ದೇವೇಂದ್ರ, ಪ್ರಾಶುಪಾಲ ಡಾ.ನಾಗರಾಜ್, ಖಜಾಂಚಿ ಡಾ.ಕೆ.ಆರ್. ಶ್ರೀಧರ್, ಸಹಕಾರ್ಯದರ್ಶಿ ನೀಲಕಂಠಮೂರ್ತಿ, ಉಪಾಧ್ಯಕ್ಷ ಟಿ. ಪ್ರಕಾಶ್, ಡಾ.ಪಿ. ನಾರಾಯಣ, ಡಾ.ವೆಂಕಟರಾವ್, ಆಡಳಿತಾಧಿಕಾರಿ ಮಧು ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಪ್ರತಿಯೊಬ್ಬರೂ ವೈಯಕ್ತಿಕ ಹಿತಾಸಕ್ತಿಗೆ ನೀಡುವ ಪ್ರಾಮುಖ್ಯತೆಯನ್ನು ತಾಯ್ನಾಡಿಗೂ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಇನ್ಫೋಸಿಸ್ನ ಸಂಸ್ಥಾಪಕ ಅಧ್ಯಕ್ಷ ಡಾ.ಎನ್.ಆರ್. ನಾರಾಯಣ ಮೂರ್ತಿ ಅಭಿಪ್ರಾಯ ಪಟ್ಟರು.<br /> <br /> ನಗರದ ಜಾವಳ್ಳಿಯ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಅರಬಿಂದೋ ಪದವಿಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರತಿಯೊಬ್ಬರಿಗೂ ದೇಶದ ಹಿತಾಸಕ್ತಿ ಮುಖ್ಯವಾಗಬೇಕು, ಆಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಕಳೆದ 200 ವರ್ಷಗಳಲ್ಲಿ ವಿಶ್ವವೇ ಭಾರತವನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದ್ದು, ಕೆಲವೇ ವರ್ಷಗಳಲ್ಲಿ ಈ ದೇಶದ ಸಾಧನೆ ವಿಶ್ವಕ್ಕೆ ಮಾದರಿಯಾಗುತ್ತದೆ ಎಂದರು.<br /> <br /> ಜಾಗತೀಕರಣ ನಂತರದ ವರ್ಷಗಳಿಂದ ಭಾರತ ಆರ್ಥಿಕ ಬೆಳವಣಿಗೆಯ ದರ 8.5ರಲ್ಲಿ ಸಾಗುತ್ತಿದೆ. ಹಲವು ವರ್ಷಗಳಿಂದ ಒಂದೇ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಂಡು ಬರುವುದು ಕೂಡ ಒಂದು ಸಾಧನೆಯೇ. ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡ ಅಮೆರಿಕ ಕೂಡಾ ಬೆರಗುಗಣ್ಣಿನಿಂದ ನೋಡುವಂತಾಗಿದೆ ಎಂದರು.<br /> <br /> ಜ್ಞಾನದೀಪ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ. ದೇವೇಂದ್ರ, ಪ್ರಾಶುಪಾಲ ಡಾ.ನಾಗರಾಜ್, ಖಜಾಂಚಿ ಡಾ.ಕೆ.ಆರ್. ಶ್ರೀಧರ್, ಸಹಕಾರ್ಯದರ್ಶಿ ನೀಲಕಂಠಮೂರ್ತಿ, ಉಪಾಧ್ಯಕ್ಷ ಟಿ. ಪ್ರಕಾಶ್, ಡಾ.ಪಿ. ನಾರಾಯಣ, ಡಾ.ವೆಂಕಟರಾವ್, ಆಡಳಿತಾಧಿಕಾರಿ ಮಧು ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>