<p><strong>ಚಿಂಚೋಳಿ: </strong>ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಶೀಲ ರಾಷ್ಟ್ರ ಎಂಬ ಗೌರವಕ್ಕೆ ಪಾತ್ರವಾಗುತ್ತಿರುವ ಭಾರತದ ಯುವಜನರಲ್ಲಿ ದೇಶಭಕ್ತಿ ಹಾಗೂ ಸಹೋದರತ್ವ ಬೆಳೆಯಲು ರಾಷ್ಟ್ರೀಯ ಸೇವಾ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದೀಪಕನಾಗ್ ಪುಣ್ಯಶೆಟ್ಟಿ ತಿಳಿಸಿದರು.<br /> <br /> ಅವರು ಶನಿವಾರ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಚಿಂಚೋಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಸದೃಢ ಭಾರತಕ್ಕಾಗಿ ಸದೃಢ ಯುವಕರು~ ಎಂಬ ಶೀರ್ಷಿಕೆ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ತಾವು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಎನ್ಸಿಸಿ ಘಟಕದಲ್ಲಿ ಸೇವೆ ಸಲ್ಲಿಸಿದ್ದನ್ನು ಮೆಲಕು ಹಾಕಿದ ದೀಪಕನಾಗ್ ಪೋಲಕಪಳ್ಳಿ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯವರು ಎನ್ಎಸ್ಎಸ್ ಸ್ವಯಂ ಸೇವಕರಿಗೆ ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಿ ವಿಶೇಷ ಶಿಬಿರ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. <br /> <br /> ಗುಲ್ಬರ್ಗ ವಿ.ವಿಯ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ರಮೇಶ ಲಂಡನಕರ್ ಮಾತನಾಡಿ ಎನ್ಎಸ್ಎಸ್ ವಿಶೇಷ ಶಿಬಿರದ ಮಹತ್ವ ವಿವರಿಸಿದರು.ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಂ ಬಾರಿ, ಡೆಕ್ಕನ್ ಎಂ.ಇಡಿ ಕಾಲೇಜಿನ ಪ್ರಾಚಾರ್ಯ ಡಾ. ಸುದರ್ಶನ, ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ್ ಮಾತನಾಡಿದರು.<br /> <br /> ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ ನಾಯನೂರು ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನಾಧಿಕಾರಿ ಡಾ. ಸಂಗಪ್ಪ ಮಾಮನಶೆಟ್ಟಿ ಸ್ವಾಗತಿಸಿದರು. ಹೈದರ ಅಲಿ ನಿರೂಪಿಸಿದರು. ದಶರಥ ಬಿರಾಪೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ: </strong>ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಶೀಲ ರಾಷ್ಟ್ರ ಎಂಬ ಗೌರವಕ್ಕೆ ಪಾತ್ರವಾಗುತ್ತಿರುವ ಭಾರತದ ಯುವಜನರಲ್ಲಿ ದೇಶಭಕ್ತಿ ಹಾಗೂ ಸಹೋದರತ್ವ ಬೆಳೆಯಲು ರಾಷ್ಟ್ರೀಯ ಸೇವಾ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದೀಪಕನಾಗ್ ಪುಣ್ಯಶೆಟ್ಟಿ ತಿಳಿಸಿದರು.<br /> <br /> ಅವರು ಶನಿವಾರ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಚಿಂಚೋಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಸದೃಢ ಭಾರತಕ್ಕಾಗಿ ಸದೃಢ ಯುವಕರು~ ಎಂಬ ಶೀರ್ಷಿಕೆ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.<br /> <br /> ತಾವು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಎನ್ಸಿಸಿ ಘಟಕದಲ್ಲಿ ಸೇವೆ ಸಲ್ಲಿಸಿದ್ದನ್ನು ಮೆಲಕು ಹಾಕಿದ ದೀಪಕನಾಗ್ ಪೋಲಕಪಳ್ಳಿ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯವರು ಎನ್ಎಸ್ಎಸ್ ಸ್ವಯಂ ಸೇವಕರಿಗೆ ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಿ ವಿಶೇಷ ಶಿಬಿರ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. <br /> <br /> ಗುಲ್ಬರ್ಗ ವಿ.ವಿಯ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ರಮೇಶ ಲಂಡನಕರ್ ಮಾತನಾಡಿ ಎನ್ಎಸ್ಎಸ್ ವಿಶೇಷ ಶಿಬಿರದ ಮಹತ್ವ ವಿವರಿಸಿದರು.ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಂ ಬಾರಿ, ಡೆಕ್ಕನ್ ಎಂ.ಇಡಿ ಕಾಲೇಜಿನ ಪ್ರಾಚಾರ್ಯ ಡಾ. ಸುದರ್ಶನ, ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ್ ಮಾತನಾಡಿದರು.<br /> <br /> ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ ನಾಯನೂರು ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನಾಧಿಕಾರಿ ಡಾ. ಸಂಗಪ್ಪ ಮಾಮನಶೆಟ್ಟಿ ಸ್ವಾಗತಿಸಿದರು. ಹೈದರ ಅಲಿ ನಿರೂಪಿಸಿದರು. ದಶರಥ ಬಿರಾಪೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>