<p><strong>ಚಿತ್ರದುರ್ಗ</strong>: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯ್ತಿಯ ಮಳಿಗೆಯೊಂದರಲ್ಲಿ ಕೊಳೆತಿರುವ ಸುಮಾರು 60 ಅಕ್ಕಿಚೀಲಗಳು ಪತ್ತೆಯಾಗಿವೆ.<br /> <br /> ತಲಾ 50 ಕೆಜಿ ತೂಕದ ಈ ಚೀಲಗಳಲ್ಲಿ ಕಳೆದ 7-8 ವರ್ಷಗಳ ಹಿಂದೆ ಸಂಗ್ರಹಿಸಿಡಲಾಗಿತ್ತು. `ಕೂಲಿಗಾಗಿ ಕಾಳು~ ಯೋಜನೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕೂಲಿಕಾರ್ಮಿಕರಿಗೆ ವಿತರಿಸಲು ಅಕ್ಕಿ ಸಂಗ್ರಹಿಸಿಡಲಾಗಿತ್ತು. ಆದರೆ, ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿಲ್ಲ ಮತ್ತು ಅಕ್ಕಿಯನ್ನು ಸಹ ಹಿಂತಿರುಗಿಸದೆ ಗ್ರಾ.ಪಂ. ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ.<br /> <br /> ಗ್ರಾಮ ಪಂಚಾಯ್ತಿಯ ಮಳಿಗೆಯೊಂದರಲ್ಲಿ ಈ ಅಕ್ಕಿ ಚೀಲಗಳನ್ನು ಸಂಗ್ರಹಿಸಿಡಲಾಗಿತ್ತು. ಕೆಲವು ದಿನಗಳಿಂದ ಈ ಮಳಿಗೆಯಿಂದ ವಾಸನೆಯಿಂದ ಬರುತ್ತಿದ್ದರಿಂದ ಸಂಶಯಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.<br /> <br /> ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ರುದ್ರಮುನಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.<br /> <br /> `ಕೂಲಿಗಾಗಿ ಕಾಳು ಯೋಜನೆಯ ಅಕ್ಕಿಯನ್ನು ಬಳಕೆ ಮಾಡದೆ ಕೊಳೆಯುವಂತೆ ಮಾಡಲಾಗಿದೆ. ಈ ವಿಷಯದಲ್ಲಿ ಗ್ರಾಮ ಪಂಚಾಯ್ತಿಯ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದೆ. ಅಕ್ಕಿ ಬಳಕೆಯಾಗದಿದ್ದರೆ ತಾಲ್ಲೂಕು ಪಂಚಾಯ್ತಿಗೆ ಹಿಂತಿರುಗಿಸಬೇಕಾಗಿತ್ತು. ಒಂದೆರಡು ಕಾಮಗಾರಿಗಳನ್ನು ಅನುಷ್ಠಾನಗೊಳಿಸದ ಪರಿಣಾಮ ಈ ರೀತಿ ಘಟನೆ ನಡೆದಿದೆ~ ಎಂದು ರುದ್ರಮುನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯ್ತಿಯ ಮಳಿಗೆಯೊಂದರಲ್ಲಿ ಕೊಳೆತಿರುವ ಸುಮಾರು 60 ಅಕ್ಕಿಚೀಲಗಳು ಪತ್ತೆಯಾಗಿವೆ.<br /> <br /> ತಲಾ 50 ಕೆಜಿ ತೂಕದ ಈ ಚೀಲಗಳಲ್ಲಿ ಕಳೆದ 7-8 ವರ್ಷಗಳ ಹಿಂದೆ ಸಂಗ್ರಹಿಸಿಡಲಾಗಿತ್ತು. `ಕೂಲಿಗಾಗಿ ಕಾಳು~ ಯೋಜನೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕೂಲಿಕಾರ್ಮಿಕರಿಗೆ ವಿತರಿಸಲು ಅಕ್ಕಿ ಸಂಗ್ರಹಿಸಿಡಲಾಗಿತ್ತು. ಆದರೆ, ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿಲ್ಲ ಮತ್ತು ಅಕ್ಕಿಯನ್ನು ಸಹ ಹಿಂತಿರುಗಿಸದೆ ಗ್ರಾ.ಪಂ. ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ.<br /> <br /> ಗ್ರಾಮ ಪಂಚಾಯ್ತಿಯ ಮಳಿಗೆಯೊಂದರಲ್ಲಿ ಈ ಅಕ್ಕಿ ಚೀಲಗಳನ್ನು ಸಂಗ್ರಹಿಸಿಡಲಾಗಿತ್ತು. ಕೆಲವು ದಿನಗಳಿಂದ ಈ ಮಳಿಗೆಯಿಂದ ವಾಸನೆಯಿಂದ ಬರುತ್ತಿದ್ದರಿಂದ ಸಂಶಯಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.<br /> <br /> ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ರುದ್ರಮುನಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.<br /> <br /> `ಕೂಲಿಗಾಗಿ ಕಾಳು ಯೋಜನೆಯ ಅಕ್ಕಿಯನ್ನು ಬಳಕೆ ಮಾಡದೆ ಕೊಳೆಯುವಂತೆ ಮಾಡಲಾಗಿದೆ. ಈ ವಿಷಯದಲ್ಲಿ ಗ್ರಾಮ ಪಂಚಾಯ್ತಿಯ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದೆ. ಅಕ್ಕಿ ಬಳಕೆಯಾಗದಿದ್ದರೆ ತಾಲ್ಲೂಕು ಪಂಚಾಯ್ತಿಗೆ ಹಿಂತಿರುಗಿಸಬೇಕಾಗಿತ್ತು. ಒಂದೆರಡು ಕಾಮಗಾರಿಗಳನ್ನು ಅನುಷ್ಠಾನಗೊಳಿಸದ ಪರಿಣಾಮ ಈ ರೀತಿ ಘಟನೆ ನಡೆದಿದೆ~ ಎಂದು ರುದ್ರಮುನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>