<p>ಕುರುಗೋಡು: ಇತಿಹಾಸ ಪ್ರಸಿದ್ಧ ದೊಡ್ಡ ಬಸವೇಶ್ವರ ಸ್ವಾಮಿ ಮಹಾ ರಥೋತ್ಸವ ಶನಿವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು. ಇದರ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.<br /> <br /> ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತು ದೊಡ್ಡಬಸವೇಶ್ವರ ಸ್ವಾಮಿ ಸಮೀಪ ದರ್ಶನ ಪಡೆದರು.<br /> <br /> ಸಂಜೆ 5-30ಕ್ಕೆ ಸುಮಾರು 60 ಅಡಿ ಎತ್ತರದ ಬಣ್ಣದ ಹೂಗಳು ಮತ್ತು ಇತರೆ ಅಲಂಕಾರಿಕ ವಸ್ತುಗಳು ಮತ್ತು ಗೊಂಬೆಗಳಿಂದ ಅಲಂಕೃತಗೊಂಡಿದ್ದ ರಥವನ್ನು ಒಂದು ಕಿ.ಮೀ. ದೂರದ ಎದುರುಬಸವಣ್ಣ ದೇವಸ್ಥಾನದವರೆಗೆ ಎಳೆದೊಯ್ದು ಭಕ್ತರು ಪುನಃ ಸ್ವಸ್ಥಳಕ್ಕೆ ಎಳೆದುತಂದರು.<br /> <br /> ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಭಕ್ತರು ರಥಕ್ಕೆ ಹೂ ಹಣ್ಣು ಎಸೆದು ಹರಕೆ ತೀರಿಸಿದರು.<br /> <br /> ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಾತ್ರವಲ್ಲದೆ ನೆರೆಯ ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕೆಲವು ಊರುಗಳಿಂದ ಆಗಮಿಸಿದ್ದ ಹೆಚ್ಚಿನ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.<br /> <br /> ಈ ವರ್ಷ ಮಳೆ ಬೆಳೆ ಉತ್ತಮವಾಗಿರುವುದರಿಂದ ರೈತರು ಬೆಳೆದ ಬೆಳೆ ಮಾರಾಟ ಮಾಡಿದ ಹಣ ಜಾತ್ರೆ ಸಮಯಕ್ಕೆ ಕೈಸೇರಿರುದರಿಂದ ಕಳೆದ ವರ್ಷಕ್ಕಿಂತ ಈ ವರ್ಷ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆ ಜನರು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.<br /> <br /> ಇಲ್ಲಿನ ಸುಂಕಲಮ್ಮದೇವಿ ದೇವಸ್ಥಾನ, ಕಲ್ಲುಗುಡೇಶ್ವರ ದೇವಸ್ಥಾನ, ರಾಘವಾಂಕಸ್ವಾಮಿ ಮಠ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಬಾದನಹಟ್ಟಿ ಚಿತ್ರಯ್ಯನಗುಡಿ, ಬೈಲೂರು ರಸ್ತೆಯ ಗೂಳಪ್ಪ ತಾತನವರ ಮಠದಲ್ಲಿ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ಇತಿಹಾಸ ಪ್ರಸಿದ್ಧ ದೊಡ್ಡ ಬಸವೇಶ್ವರ ಸ್ವಾಮಿ ಮಹಾ ರಥೋತ್ಸವ ಶನಿವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು. ಇದರ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.<br /> <br /> ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತು ದೊಡ್ಡಬಸವೇಶ್ವರ ಸ್ವಾಮಿ ಸಮೀಪ ದರ್ಶನ ಪಡೆದರು.<br /> <br /> ಸಂಜೆ 5-30ಕ್ಕೆ ಸುಮಾರು 60 ಅಡಿ ಎತ್ತರದ ಬಣ್ಣದ ಹೂಗಳು ಮತ್ತು ಇತರೆ ಅಲಂಕಾರಿಕ ವಸ್ತುಗಳು ಮತ್ತು ಗೊಂಬೆಗಳಿಂದ ಅಲಂಕೃತಗೊಂಡಿದ್ದ ರಥವನ್ನು ಒಂದು ಕಿ.ಮೀ. ದೂರದ ಎದುರುಬಸವಣ್ಣ ದೇವಸ್ಥಾನದವರೆಗೆ ಎಳೆದೊಯ್ದು ಭಕ್ತರು ಪುನಃ ಸ್ವಸ್ಥಳಕ್ಕೆ ಎಳೆದುತಂದರು.<br /> <br /> ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಭಕ್ತರು ರಥಕ್ಕೆ ಹೂ ಹಣ್ಣು ಎಸೆದು ಹರಕೆ ತೀರಿಸಿದರು.<br /> <br /> ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಾತ್ರವಲ್ಲದೆ ನೆರೆಯ ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕೆಲವು ಊರುಗಳಿಂದ ಆಗಮಿಸಿದ್ದ ಹೆಚ್ಚಿನ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.<br /> <br /> ಈ ವರ್ಷ ಮಳೆ ಬೆಳೆ ಉತ್ತಮವಾಗಿರುವುದರಿಂದ ರೈತರು ಬೆಳೆದ ಬೆಳೆ ಮಾರಾಟ ಮಾಡಿದ ಹಣ ಜಾತ್ರೆ ಸಮಯಕ್ಕೆ ಕೈಸೇರಿರುದರಿಂದ ಕಳೆದ ವರ್ಷಕ್ಕಿಂತ ಈ ವರ್ಷ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆ ಜನರು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.<br /> <br /> ಇಲ್ಲಿನ ಸುಂಕಲಮ್ಮದೇವಿ ದೇವಸ್ಥಾನ, ಕಲ್ಲುಗುಡೇಶ್ವರ ದೇವಸ್ಥಾನ, ರಾಘವಾಂಕಸ್ವಾಮಿ ಮಠ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಬಾದನಹಟ್ಟಿ ಚಿತ್ರಯ್ಯನಗುಡಿ, ಬೈಲೂರು ರಸ್ತೆಯ ಗೂಳಪ್ಪ ತಾತನವರ ಮಠದಲ್ಲಿ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>