<p><strong>ಕುರುಗೋಡು (ಬಳ್ಳಾರಿ ಜಿಲ್ಲೆ):</strong> ಭಾನುವಾರ ಸಂಜೆ ಇಲ್ಲಿ ನಡೆದ ದೊಡ್ಡ ಬಸವೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು.<br /> <br /> ರಥ ಮತ್ತು ದೊಡ್ಡಬಸವೇಶ್ವರ ಸ್ವಾಮಿ ದರ್ಶನ ಪಡೆಯಲು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಬಂದಿದ್ದರು. ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದವು. ಭಕ್ತರು ಬೆಳಿಗ್ಗೆಯಿಂದಲೇ ಸಾಲಿನಲ್ಲಿ ನಿಂತು, ದೊಡ್ಡಬಸವೇಶ್ವರ ಸ್ವಾಮಿ ದರ್ಶನ ಪಡೆದರು.<br /> ವಿವಿಧ ಹೂವುಗಳು ಮತ್ತು ಇತರೇ ಅಲಂಕಾರಿಕ ವಸ್ತುಗಳು ಮತ್ತು ಗೊಂಬೆಗಳಿಂದ ಅಲಂಕೃತಗೊಂಡಿದ್ದ 60 ಅಡಿ ಎತ್ತರದ ರಥವನ್ನು ಭಕ್ತರು ಬಸವಣ್ಣ ದೇವಸ್ಥಾನದವರೆಗೆ ಮತ್ತೆ ಅಲ್ಲಿಂದ ಸ್ವಸ್ಥಳಕ್ಕೆ ಎಳೆದರು. ರಥಕ್ಕೆ ಹೂ ಹಣ್ಣು ಎಸೆದು ಹಲವರು ಹರಕೆ ತೀರಿಸಿದರು.<br /> <br /> ಜಿಲ್ಲೆಯ ವಿವಿಧ ತಾಲ್ಲೂಕು ಸೇರಿದಂತೆ ನೆರೆಯ ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಂದ ಮತ್ತು ಆಂಧ್ರಪ್ರದೇಶದಿಂದಲೂ ಭಕ್ತರು ಬಂದಿದ್ದರು. ಇಲ್ಲಿನ ಸುಂಕಲಮ್ಮದೇವಿ ದೇವಸ್ಥಾನ, ಕಲ್ಲುಗುಡೇಶ್ವರ ದೇವಸ್ಥಾನ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ, ಬಾದನಹಟ್ಟಿಯ ಮೂರು ದೇವಸ್ಥಾನಗಳಲ್ಲಿ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು (ಬಳ್ಳಾರಿ ಜಿಲ್ಲೆ):</strong> ಭಾನುವಾರ ಸಂಜೆ ಇಲ್ಲಿ ನಡೆದ ದೊಡ್ಡ ಬಸವೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು.<br /> <br /> ರಥ ಮತ್ತು ದೊಡ್ಡಬಸವೇಶ್ವರ ಸ್ವಾಮಿ ದರ್ಶನ ಪಡೆಯಲು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಬಂದಿದ್ದರು. ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದವು. ಭಕ್ತರು ಬೆಳಿಗ್ಗೆಯಿಂದಲೇ ಸಾಲಿನಲ್ಲಿ ನಿಂತು, ದೊಡ್ಡಬಸವೇಶ್ವರ ಸ್ವಾಮಿ ದರ್ಶನ ಪಡೆದರು.<br /> ವಿವಿಧ ಹೂವುಗಳು ಮತ್ತು ಇತರೇ ಅಲಂಕಾರಿಕ ವಸ್ತುಗಳು ಮತ್ತು ಗೊಂಬೆಗಳಿಂದ ಅಲಂಕೃತಗೊಂಡಿದ್ದ 60 ಅಡಿ ಎತ್ತರದ ರಥವನ್ನು ಭಕ್ತರು ಬಸವಣ್ಣ ದೇವಸ್ಥಾನದವರೆಗೆ ಮತ್ತೆ ಅಲ್ಲಿಂದ ಸ್ವಸ್ಥಳಕ್ಕೆ ಎಳೆದರು. ರಥಕ್ಕೆ ಹೂ ಹಣ್ಣು ಎಸೆದು ಹಲವರು ಹರಕೆ ತೀರಿಸಿದರು.<br /> <br /> ಜಿಲ್ಲೆಯ ವಿವಿಧ ತಾಲ್ಲೂಕು ಸೇರಿದಂತೆ ನೆರೆಯ ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಂದ ಮತ್ತು ಆಂಧ್ರಪ್ರದೇಶದಿಂದಲೂ ಭಕ್ತರು ಬಂದಿದ್ದರು. ಇಲ್ಲಿನ ಸುಂಕಲಮ್ಮದೇವಿ ದೇವಸ್ಥಾನ, ಕಲ್ಲುಗುಡೇಶ್ವರ ದೇವಸ್ಥಾನ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ, ಬಾದನಹಟ್ಟಿಯ ಮೂರು ದೇವಸ್ಥಾನಗಳಲ್ಲಿ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>