<p><strong>ಮಡಿಕೇರಿ: </strong>ಮಾ.15ರಿಂದ 30ರವರೆಗೆ ಜಿಲ್ಲೆಯ 14 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚನೆ ನೀಡಿದ್ದಾರೆ. <br /> <br /> ಜಿಲ್ಲಾಧಿಕಾರಿ ಕಚೇರಿ ವಿಡಿಯೊ ಕಾನ್ಪರೆನ್ಸ್ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮಗಳು ನಡೆಯುವುದು ಕಡಿಮೆ. ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುತ್ತವೆ ಎಂಬುದು ಎಲ್ಲರ ಅಭಿಪ್ರಾಯ. ಇದು ಈ ವರ್ಷವೂ ಮುಂದುವರೆಯಬೇಕು ಎಂದರು.<br /> <br /> ಒಂದು ವೇಳೆ ನಕಲು ಅಥವಾ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಿದ್ದು ಕಂಡು ಬಂದಲ್ಲಿ ಪರೀಕ್ಷಾ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. <br /> <br /> ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆ ಹಾಗೂ ಇತರ ಪೂರಕ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.<br /> <br /> ಪರೀಕ್ಷಾ ಕೇಂದ್ರದೊಳಕ್ಕೆ ಮೊಬೈಲ್ ಅಥವಾ ಪುಸ್ತಕಗಳನ್ನು ಕೊಂಡೊಯ್ಯುವುದು ನಿಷೇಧಿಸಲಾಗಿದ್ದು, ಈ ಬಗ್ಗೆ ಮೇಲ್ವಿಚಾರಕರು ಜಾಗೃತಿ ವಹಿಸಬೇಕು. ನಕಲು ಮಾಡುವವರು ಹಾಗೂ ಪ್ರೇರೆಪಣೆ ನೀಡುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. <br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೋಹಿಣಿ, ಮೂರು ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿ ಸುರೇಶ್, ಜಿಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಇತರರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಮಾ.15ರಿಂದ 30ರವರೆಗೆ ಜಿಲ್ಲೆಯ 14 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚನೆ ನೀಡಿದ್ದಾರೆ. <br /> <br /> ಜಿಲ್ಲಾಧಿಕಾರಿ ಕಚೇರಿ ವಿಡಿಯೊ ಕಾನ್ಪರೆನ್ಸ್ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮಗಳು ನಡೆಯುವುದು ಕಡಿಮೆ. ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುತ್ತವೆ ಎಂಬುದು ಎಲ್ಲರ ಅಭಿಪ್ರಾಯ. ಇದು ಈ ವರ್ಷವೂ ಮುಂದುವರೆಯಬೇಕು ಎಂದರು.<br /> <br /> ಒಂದು ವೇಳೆ ನಕಲು ಅಥವಾ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಿದ್ದು ಕಂಡು ಬಂದಲ್ಲಿ ಪರೀಕ್ಷಾ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. <br /> <br /> ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆ ಹಾಗೂ ಇತರ ಪೂರಕ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.<br /> <br /> ಪರೀಕ್ಷಾ ಕೇಂದ್ರದೊಳಕ್ಕೆ ಮೊಬೈಲ್ ಅಥವಾ ಪುಸ್ತಕಗಳನ್ನು ಕೊಂಡೊಯ್ಯುವುದು ನಿಷೇಧಿಸಲಾಗಿದ್ದು, ಈ ಬಗ್ಗೆ ಮೇಲ್ವಿಚಾರಕರು ಜಾಗೃತಿ ವಹಿಸಬೇಕು. ನಕಲು ಮಾಡುವವರು ಹಾಗೂ ಪ್ರೇರೆಪಣೆ ನೀಡುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. <br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೋಹಿಣಿ, ಮೂರು ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿ ಸುರೇಶ್, ಜಿಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಇತರರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>