<p><strong>ವಿಜಯಪುರ: </strong> ದ್ವಿತೀಯ ಪಿಯು ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಪರೀಕ್ಷಾ ಕೇಂದ್ರವಾಗಿರುವ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಗತಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾಲೇಜು ಆವರಣದ ಸುತ್ತ 100 ಮೀಟರ್ ನಿಷೇಧಾಜ್ಞೆ ಜಾರಿಯಲ್ಲಿತ್ತು.<br /> <br /> ವಿಜಯಪುರದ ಎರಡು ಮತ್ತು ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚು: ವಿಜಯಪುರ ಸರ್ಕಾರಿ ಕಿರಿಯ ಕಾಲೇಜಿನ ಒಟ್ಟಾರೆ 252 ವಿದ್ಯಾರ್ಥಿಗಳ ಪೈಕಿ 156 ಮಂದಿ ಹೆಣ್ಣು ಮಕ್ಕಳು 96 ಮಂದಿ ಗಂಡು ಮಕ್ಕಳು ಪರೀಕ್ಷೆಯನ್ನು ಬರೆಯುತ್ತಿದ್ದು, ವಿಜ್ಞಾನ, ಕಲೆ, ವಾಣಿಜ್ಯ ವಿಭಾಗಗಳಲ್ಲೂ ಹೆಣ್ಣು ಮಕ್ಕಳ ಸಂಖ್ಯೆಯೇ ಹೆಚ್ಚು. <br /> <br /> ಇನ್ನು ಪ್ರಗತಿ ಮಹಿಳಾ ಕಾಲೇಜಿನ 204 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸುತ್ತಿದ್ದು, ಒಟ್ಟಾರೆ ತಾಲ್ಲೂಕಿನಲ್ಲಿ ಒಬ್ಬ ವಿದ್ಯಾರ್ಥಿಗೆ ಇಬ್ಬರು ವಿದ್ಯಾರ್ಥಿನಿಯರಂತೆ ದುಪ್ಪಟ್ಟು ಹೆಣ್ಣು ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ.<br /> ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳ, ತಾಲ್ಲೂಕು ಮಟ್ಟದಲ್ಲಿ ಎ.ಸಿ.ಅವರನ್ನೊಳಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜಾಗೃತದಳ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳನ್ನೊಳಗೊಂ ಡ ಜಾಗೃತ ದಳ ಕಾರ್ಯನಿರ್ವಹಿಸುತ್ತಿದೆ. <br /> <br /> ವಿಶ್ವನಾಥಪುರ ಸ.ಪ.ಪೂ.ಕಾಲೇಜು ಮತ್ತು ಬೂದಿಗೆರೆಯ ಸಿದ್ಧಗಂಗಾ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ದೇವನಹಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಜಂಗಮಕೋಟೆಯ ಜ್ಯೋತಿ ಪ.ಪೂ.ಕಾಲೇಜು ಮತ್ತು ವಿಜಯ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> <strong>`ಕಟ್ಟು ನಿಟ್ಟಿನ ಕ್ರಮ~<br /> </strong><br /> <strong>ಆನೇಕಲ್:</strong> ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಪಾರದರ್ಶಕವಾಗಿ ನಡೆಯುವಂತೆ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಉಮಾ ಬಸವಣ್ಣಪ್ಪ ನುಡಿದರು.<br /> <br /> ಪಟ್ಟಣದ ಎಎಸ್ಬಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಜಿಲ್ಲೆಯಲ್ಲಿ 71 ಕೇಂದ್ರಗಳಿದ್ದು ಎಲ್ಲ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ನಕಲು ತಡೆಗಟ್ಟುವ ಸಲುವಾಗಿ ಸಂಚಾರಿ ಜಾಗೃತ ದಳಗಳು ಎಲ್ಲೆಡೆ ಸಂಚರಿಸಲಿವೆ ಎಂದರು.<br /> <br /> ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಸಹ ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ. ಪಟ್ಟಣದ ಕೇಂದ್ರವು ಸೂಕ್ಷ್ಮ ಕೇಂದ್ರವಾಗಿರುವುದರಿಂದ ಹೆಚ್ಚಿನ ಜಾಗೃತ ದಳವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong> ದ್ವಿತೀಯ ಪಿಯು ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಪರೀಕ್ಷಾ ಕೇಂದ್ರವಾಗಿರುವ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಗತಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾಲೇಜು ಆವರಣದ ಸುತ್ತ 100 ಮೀಟರ್ ನಿಷೇಧಾಜ್ಞೆ ಜಾರಿಯಲ್ಲಿತ್ತು.<br /> <br /> ವಿಜಯಪುರದ ಎರಡು ಮತ್ತು ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚು: ವಿಜಯಪುರ ಸರ್ಕಾರಿ ಕಿರಿಯ ಕಾಲೇಜಿನ ಒಟ್ಟಾರೆ 252 ವಿದ್ಯಾರ್ಥಿಗಳ ಪೈಕಿ 156 ಮಂದಿ ಹೆಣ್ಣು ಮಕ್ಕಳು 96 ಮಂದಿ ಗಂಡು ಮಕ್ಕಳು ಪರೀಕ್ಷೆಯನ್ನು ಬರೆಯುತ್ತಿದ್ದು, ವಿಜ್ಞಾನ, ಕಲೆ, ವಾಣಿಜ್ಯ ವಿಭಾಗಗಳಲ್ಲೂ ಹೆಣ್ಣು ಮಕ್ಕಳ ಸಂಖ್ಯೆಯೇ ಹೆಚ್ಚು. <br /> <br /> ಇನ್ನು ಪ್ರಗತಿ ಮಹಿಳಾ ಕಾಲೇಜಿನ 204 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸುತ್ತಿದ್ದು, ಒಟ್ಟಾರೆ ತಾಲ್ಲೂಕಿನಲ್ಲಿ ಒಬ್ಬ ವಿದ್ಯಾರ್ಥಿಗೆ ಇಬ್ಬರು ವಿದ್ಯಾರ್ಥಿನಿಯರಂತೆ ದುಪ್ಪಟ್ಟು ಹೆಣ್ಣು ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ.<br /> ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳ, ತಾಲ್ಲೂಕು ಮಟ್ಟದಲ್ಲಿ ಎ.ಸಿ.ಅವರನ್ನೊಳಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜಾಗೃತದಳ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳನ್ನೊಳಗೊಂ ಡ ಜಾಗೃತ ದಳ ಕಾರ್ಯನಿರ್ವಹಿಸುತ್ತಿದೆ. <br /> <br /> ವಿಶ್ವನಾಥಪುರ ಸ.ಪ.ಪೂ.ಕಾಲೇಜು ಮತ್ತು ಬೂದಿಗೆರೆಯ ಸಿದ್ಧಗಂಗಾ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ದೇವನಹಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಜಂಗಮಕೋಟೆಯ ಜ್ಯೋತಿ ಪ.ಪೂ.ಕಾಲೇಜು ಮತ್ತು ವಿಜಯ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.<br /> <br /> <strong>`ಕಟ್ಟು ನಿಟ್ಟಿನ ಕ್ರಮ~<br /> </strong><br /> <strong>ಆನೇಕಲ್:</strong> ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಪಾರದರ್ಶಕವಾಗಿ ನಡೆಯುವಂತೆ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಉಮಾ ಬಸವಣ್ಣಪ್ಪ ನುಡಿದರು.<br /> <br /> ಪಟ್ಟಣದ ಎಎಸ್ಬಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಜಿಲ್ಲೆಯಲ್ಲಿ 71 ಕೇಂದ್ರಗಳಿದ್ದು ಎಲ್ಲ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ನಕಲು ತಡೆಗಟ್ಟುವ ಸಲುವಾಗಿ ಸಂಚಾರಿ ಜಾಗೃತ ದಳಗಳು ಎಲ್ಲೆಡೆ ಸಂಚರಿಸಲಿವೆ ಎಂದರು.<br /> <br /> ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಸಹ ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ. ಪಟ್ಟಣದ ಕೇಂದ್ರವು ಸೂಕ್ಷ್ಮ ಕೇಂದ್ರವಾಗಿರುವುದರಿಂದ ಹೆಚ್ಚಿನ ಜಾಗೃತ ದಳವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>