<p><strong>ಬೆಂಗಳೂರು: </strong>ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಲು ಖಜಾನೆ ಇಲಾಖೆ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲ್ಲೂಕುಗಳ ಖಜಾನೆಯಲ್ಲಿ ಸಂಗ್ರಹ ಮಾಡಿದ ನಂತರ, ಖಜಾನೆಯ ಒಂದು ಕೀಲಿಕೈ ಅನ್ನು ಉಪಖಜಾನೆ ಅಧಿಕಾರಿ, ಮತ್ತೊಂದನ್ನು `ಕೇಸ್ ವರ್ಕರ್~ ಹೊಂದಿರುತ್ತಾರೆ. ಮೂರನೇ ಕೀಲಿಕೈ ಬ್ಯಾಂಕ್ನ ಸ್ಟ್ರಾಂಗ್ ರೂಂನಲ್ಲಿ ಇರುತ್ತದೆ.<br /> <br /> ನಿಯಮಾವಳಿ ಪ್ರಕಾರ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಹೊರಗೆ ತೆಗೆಯುವಾಗ ಕ್ಷೇತ್ರಶಿಕ್ಷಣಾಧಿಕಾರಿ, ತಹಶೀಲ್ದಾರ್ ಮತ್ತು ಉಪಖಜಾನೆ ಅಧಿಕಾರಿ ಹಾಜರಿರಬೇಕು. ಈ ಮೂವರೂ ಮುದ್ರೆಯನ್ನು ಪರಿಶೀಲಿಸಿದ ನಂತರ ಪ್ರಶ್ನೆಪತ್ರಿಕೆಗಳನ್ನು ಹೊರತೆಗೆದು ಸೂಕ್ತ ಭದ್ರತೆಯಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಬೇಕು.<br /> <br /> ಆದರೆ ಬಹುತೇಕ ಕಡೆ ಉಪಖಜಾನೆ ಅಧಿಕಾರಿಗಳು, ತಹಶೀಲ್ದಾರ್ಗಳು ಪ್ರಶ್ನೆಪತ್ರಿಕೆಗಳನ್ನು ಹೊರ ತೆಗೆಯುವಾಗ ಹಾಜರಿರುವುದಿಲ್ಲ. ಕೇಸ್ ವರ್ಕರ್ ಬಳಿ ಇರುವ ಕೀಲಿಕೈಯಿಂದಲೇ ಖಜಾನೆಯನ್ನು ತೆರೆದು ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಲಾಗುತ್ತಿದೆ.<br /> <br /> ಈ ವಿಷಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗೊತ್ತಿದ್ದರೂ, ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಥವಾ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಲಿಲ್ಲ ಎಂದು ಖಜಾನೆ ಇಲಾಖೆಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕೆಲವೆಡೆ ಉಪ ಖಜಾನೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ ಮಾಡುವುದಿಲ್ಲ. ಹೀಗಾಗಿ ಪ್ರತಿದಿನ ಬೆಳಿಗ್ಗೆ 7.30ಕ್ಕೆ ಕಚೇರಿಗೆ ಹಾಜರಾಗಿ ಖಜಾನೆ ತೆರೆದು ಪ್ರಶ್ನೆಪತ್ರಿಕೆಗಳನ್ನು ನೀಡುವುದು ಕಷ್ಟ ಎಂಬ ಕಾರಣಕ್ಕಾಗಿ ಕೆಳ ಹಂತದ ಸಿಬ್ಬಂದಿಯಾದ `ಕೇಸ್ ವರ್ಕರ್~ಗೆ ಈ ಜವಾಬ್ದಾರಿ ವಹಿಸಿರುತ್ತಾರೆ.<br /> <br /> ಈ ರೀತಿಯ ಬೇಜವಾಬ್ದಾರಿ ವರ್ತನೆಯಿಂದಲೇ ಇಲಾಖೆಗೆ ಕೆಟ್ಟ ಹೆಸರು ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಹಣದ ಆಸೆಗಾಗಿ ಖಜಾನೆಯ ಕೆಳ ಹಂತದ ಸಿಬ್ಬಂದಿ ಮಧ್ಯವರ್ತಿಗಳೊಂದಿಗೆ ಕೈಜೋಡಿಸುತ್ತಾರೆ.<br /> <br /> ಖಜಾನೆ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿ ಕಡ್ಡಾಯವಾಗಿ ಉಪಖಜಾನೆ ಅಧಿಕಾರಿಗಳೇ ಪ್ರತಿದಿನ ಖಜಾನೆಯನ್ನು ತೆರೆದು ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನೀಡುವಂತೆ ಸೂಚಿಸಿದ್ದರೆ ಪ್ರಶ್ನೆಪತ್ರಿಕೆಗಳು ಬಹಿರಂಗವಾಗುವುದನ್ನು ತಡೆಯಬಹುದಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಲು ಖಜಾನೆ ಇಲಾಖೆ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲ್ಲೂಕುಗಳ ಖಜಾನೆಯಲ್ಲಿ ಸಂಗ್ರಹ ಮಾಡಿದ ನಂತರ, ಖಜಾನೆಯ ಒಂದು ಕೀಲಿಕೈ ಅನ್ನು ಉಪಖಜಾನೆ ಅಧಿಕಾರಿ, ಮತ್ತೊಂದನ್ನು `ಕೇಸ್ ವರ್ಕರ್~ ಹೊಂದಿರುತ್ತಾರೆ. ಮೂರನೇ ಕೀಲಿಕೈ ಬ್ಯಾಂಕ್ನ ಸ್ಟ್ರಾಂಗ್ ರೂಂನಲ್ಲಿ ಇರುತ್ತದೆ.<br /> <br /> ನಿಯಮಾವಳಿ ಪ್ರಕಾರ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಹೊರಗೆ ತೆಗೆಯುವಾಗ ಕ್ಷೇತ್ರಶಿಕ್ಷಣಾಧಿಕಾರಿ, ತಹಶೀಲ್ದಾರ್ ಮತ್ತು ಉಪಖಜಾನೆ ಅಧಿಕಾರಿ ಹಾಜರಿರಬೇಕು. ಈ ಮೂವರೂ ಮುದ್ರೆಯನ್ನು ಪರಿಶೀಲಿಸಿದ ನಂತರ ಪ್ರಶ್ನೆಪತ್ರಿಕೆಗಳನ್ನು ಹೊರತೆಗೆದು ಸೂಕ್ತ ಭದ್ರತೆಯಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಬೇಕು.<br /> <br /> ಆದರೆ ಬಹುತೇಕ ಕಡೆ ಉಪಖಜಾನೆ ಅಧಿಕಾರಿಗಳು, ತಹಶೀಲ್ದಾರ್ಗಳು ಪ್ರಶ್ನೆಪತ್ರಿಕೆಗಳನ್ನು ಹೊರ ತೆಗೆಯುವಾಗ ಹಾಜರಿರುವುದಿಲ್ಲ. ಕೇಸ್ ವರ್ಕರ್ ಬಳಿ ಇರುವ ಕೀಲಿಕೈಯಿಂದಲೇ ಖಜಾನೆಯನ್ನು ತೆರೆದು ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಲಾಗುತ್ತಿದೆ.<br /> <br /> ಈ ವಿಷಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗೊತ್ತಿದ್ದರೂ, ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಥವಾ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಲಿಲ್ಲ ಎಂದು ಖಜಾನೆ ಇಲಾಖೆಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಕೆಲವೆಡೆ ಉಪ ಖಜಾನೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ ಮಾಡುವುದಿಲ್ಲ. ಹೀಗಾಗಿ ಪ್ರತಿದಿನ ಬೆಳಿಗ್ಗೆ 7.30ಕ್ಕೆ ಕಚೇರಿಗೆ ಹಾಜರಾಗಿ ಖಜಾನೆ ತೆರೆದು ಪ್ರಶ್ನೆಪತ್ರಿಕೆಗಳನ್ನು ನೀಡುವುದು ಕಷ್ಟ ಎಂಬ ಕಾರಣಕ್ಕಾಗಿ ಕೆಳ ಹಂತದ ಸಿಬ್ಬಂದಿಯಾದ `ಕೇಸ್ ವರ್ಕರ್~ಗೆ ಈ ಜವಾಬ್ದಾರಿ ವಹಿಸಿರುತ್ತಾರೆ.<br /> <br /> ಈ ರೀತಿಯ ಬೇಜವಾಬ್ದಾರಿ ವರ್ತನೆಯಿಂದಲೇ ಇಲಾಖೆಗೆ ಕೆಟ್ಟ ಹೆಸರು ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಹಣದ ಆಸೆಗಾಗಿ ಖಜಾನೆಯ ಕೆಳ ಹಂತದ ಸಿಬ್ಬಂದಿ ಮಧ್ಯವರ್ತಿಗಳೊಂದಿಗೆ ಕೈಜೋಡಿಸುತ್ತಾರೆ.<br /> <br /> ಖಜಾನೆ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿ ಕಡ್ಡಾಯವಾಗಿ ಉಪಖಜಾನೆ ಅಧಿಕಾರಿಗಳೇ ಪ್ರತಿದಿನ ಖಜಾನೆಯನ್ನು ತೆರೆದು ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನೀಡುವಂತೆ ಸೂಚಿಸಿದ್ದರೆ ಪ್ರಶ್ನೆಪತ್ರಿಕೆಗಳು ಬಹಿರಂಗವಾಗುವುದನ್ನು ತಡೆಯಬಹುದಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>