<p><strong>ಗಂಗಾವತಿ</strong>: ತನ್ನ ಇಲಾಖೆಯ ಅನುಮತಿಯಿಲ್ಲದೇ ಮರಗಿಡ ಕತ್ತರಿಸುವಂತಿಲ್ಲ ಎಂದು ಸಮಾಜಿಕ ಅರಣ್ಯ ಇಲಾಖೆ ಆಕ್ಷೇಪದ ಮಧ್ಯೆಯೂ ಬೃಹತ್ ಗಾತ್ರದ ಮರಗಳನ್ನು ಕಡಿದು ನೆಲಕ್ಕುರುಳಿಸಿದ ಘಟನೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.<br /> <br /> ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರವು ತನ್ನ ಅವರಣದಲ್ಲಿ ನಿರುಪಯುಕ್ತವಾಗಿ ಬಿದ್ದ, ಒಣಗಿದ ಮರಗಳನ್ನು ಕತ್ತರಿಸಿ ಸಾಗಿಸುವ ಕಾರ್ಯಕ್ಕೆ ಇತ್ತೀಚಿಗೆ ಟೆಂಡರ್ ಕರೆದಿತ್ತು. ಆದರೆ ಟೆಂಡರ್ ಪಾರದರ್ಶಕ ಇಲ್ಲ ಆರೋಪ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಂದ ವ್ಯಕ್ತವಾಗಿತ್ತು.<br /> <br /> ಮರ-ಗಿಡಗಳನ್ನು ಕತ್ತರಿಸಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು. ಶೇ, 22ರಷ್ಟು ತೆರಿಗೆ ಪಾವತಿಸಬೇಕೆಂಬ ನಿಯಮ ಇದೆ. ಅಲ್ಲದೇ ಟೆಂಡರ್ ಪಡೆದುಕೊಂಡ ವ್ಯಕ್ತಿ ಅರಣ್ಯ ಇಲಾಖೆಯ ನೋಂದಾಯಿತ ತೆರಿಗೆದಾರನಾಗಿರಬೇಕು ಎಂದು ಹೇಳಲಾಗುತ್ತಿದೆ. <br /> <br /> ಆದರೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಕೃಷಿ ವಿಜ್ಞಾನ ಕೇಂದ್ರ ಮರಗಳನ್ನು ಕತ್ತರಿಸಿದೆ ಎಂಬ ಆರೋಪ ಇದೆ. ಆರೋಗ್ಯವಂತ ಮರಗಳನ್ನು ಕತ್ತರಿಸಬಾರದೆಂಬ ನಿಯಮವನ್ನೂ ವಿಜ್ಞಾನ ಕೇಂದ್ರದ ಸಿಬ್ಬಂದಿ ಗಾಳಿಗೆ ತೂರಿದೆ ಎಂದು ಅಶೋಕ ಜಾಡಿ ಎಂಬ ವ್ಯಾಪಾರಿ ದೂರಿದ್ದಾರೆ.<br /> <br /> ಅರಣ್ಯ ಇಲಾಖೆಯ ಸಿಬ್ಬಂದಿ ನೋಟಿಸ್ಗೆ ಬೆಲೆ ಕೊಡದ ವಿಜ್ಞಾನ ಕೇಂದ್ರದ ಅಧಿಕಾರಿಗಳು ಆ ಸಿಬ್ಬಂದಿ ಎದುರಲ್ಲೆ ಟೆಂಡರ್ ಪಡೆದುಕೊಂಡ ವ್ಯಕ್ತಿಗೆ ಮರಕತ್ತರಿಸಿ ಸಾಗಿಸುವ ಪ್ರಕ್ರಿಯೆ ನಿರಾತಂಕವಾಗಿ ಸಾಗಲು ಅನುವು ಮಾಡಿಕೊಟ್ಟರು ಎನ್ನಲಾಗಿದೆ.<br /> <br /> ಕೃಷಿ ಸಂಶೋಧನಾ ಕೇಂದ್ರದ ಸಿಬ್ಬಂದಿ ತಮಗೆ ಬೇಕಾದ ಗುತ್ತಿಗೆದಾರರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಟೆಂಡರ್ ಪ್ರಕ್ರಿಯೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಸಂಧಾನ: ಕೆ.ವಿ.ಕೆಯ ಆವರಣದಲ್ಲಿನ ಗಿಡ ಕತ್ತರಿಸುವ ಈ ಟೆಂಡರ್ಗೆ ಸಂಬಂಧಿಸಿದಂತೆ ಇಬ್ಬರು ಕಟ್ಟಿಗೆ ವ್ಯಾಪಾರಿಗಳಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಾಜಿ ಸಚಿವರೊಬ್ಬರ ಸಮ್ಮುಖದಲ್ಲಿ ಸಂಧಾನಸಭೆ ನಡೆಯಿತು ಎಂದು ತಿಳಿದು ಬಂದಿದೆ. <br /> <br /> ಕಡಿಮೆ ಮೊತ್ತಕ್ಕೆ ಟೆಂಡರ್ ನೀಡಿದ ಕೆ.ವಿ.ಕೆ. ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಾರ್ವಜನಿಕರ ಪರ ವ್ಯಕ್ತಿಯೊಬ್ಬರು ಅರಣ್ಯ ಸಚಿವ, ಸಾಮಾಜಿಕ ಅರಣ್ಯ ಇಲಾಖೆಯ ನಿರ್ದೇಶಕ, ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತನ್ನ ಇಲಾಖೆಯ ಅನುಮತಿಯಿಲ್ಲದೇ ಮರಗಿಡ ಕತ್ತರಿಸುವಂತಿಲ್ಲ ಎಂದು ಸಮಾಜಿಕ ಅರಣ್ಯ ಇಲಾಖೆ ಆಕ್ಷೇಪದ ಮಧ್ಯೆಯೂ ಬೃಹತ್ ಗಾತ್ರದ ಮರಗಳನ್ನು ಕಡಿದು ನೆಲಕ್ಕುರುಳಿಸಿದ ಘಟನೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.<br /> <br /> ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರವು ತನ್ನ ಅವರಣದಲ್ಲಿ ನಿರುಪಯುಕ್ತವಾಗಿ ಬಿದ್ದ, ಒಣಗಿದ ಮರಗಳನ್ನು ಕತ್ತರಿಸಿ ಸಾಗಿಸುವ ಕಾರ್ಯಕ್ಕೆ ಇತ್ತೀಚಿಗೆ ಟೆಂಡರ್ ಕರೆದಿತ್ತು. ಆದರೆ ಟೆಂಡರ್ ಪಾರದರ್ಶಕ ಇಲ್ಲ ಆರೋಪ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಂದ ವ್ಯಕ್ತವಾಗಿತ್ತು.<br /> <br /> ಮರ-ಗಿಡಗಳನ್ನು ಕತ್ತರಿಸಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು. ಶೇ, 22ರಷ್ಟು ತೆರಿಗೆ ಪಾವತಿಸಬೇಕೆಂಬ ನಿಯಮ ಇದೆ. ಅಲ್ಲದೇ ಟೆಂಡರ್ ಪಡೆದುಕೊಂಡ ವ್ಯಕ್ತಿ ಅರಣ್ಯ ಇಲಾಖೆಯ ನೋಂದಾಯಿತ ತೆರಿಗೆದಾರನಾಗಿರಬೇಕು ಎಂದು ಹೇಳಲಾಗುತ್ತಿದೆ. <br /> <br /> ಆದರೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಕೃಷಿ ವಿಜ್ಞಾನ ಕೇಂದ್ರ ಮರಗಳನ್ನು ಕತ್ತರಿಸಿದೆ ಎಂಬ ಆರೋಪ ಇದೆ. ಆರೋಗ್ಯವಂತ ಮರಗಳನ್ನು ಕತ್ತರಿಸಬಾರದೆಂಬ ನಿಯಮವನ್ನೂ ವಿಜ್ಞಾನ ಕೇಂದ್ರದ ಸಿಬ್ಬಂದಿ ಗಾಳಿಗೆ ತೂರಿದೆ ಎಂದು ಅಶೋಕ ಜಾಡಿ ಎಂಬ ವ್ಯಾಪಾರಿ ದೂರಿದ್ದಾರೆ.<br /> <br /> ಅರಣ್ಯ ಇಲಾಖೆಯ ಸಿಬ್ಬಂದಿ ನೋಟಿಸ್ಗೆ ಬೆಲೆ ಕೊಡದ ವಿಜ್ಞಾನ ಕೇಂದ್ರದ ಅಧಿಕಾರಿಗಳು ಆ ಸಿಬ್ಬಂದಿ ಎದುರಲ್ಲೆ ಟೆಂಡರ್ ಪಡೆದುಕೊಂಡ ವ್ಯಕ್ತಿಗೆ ಮರಕತ್ತರಿಸಿ ಸಾಗಿಸುವ ಪ್ರಕ್ರಿಯೆ ನಿರಾತಂಕವಾಗಿ ಸಾಗಲು ಅನುವು ಮಾಡಿಕೊಟ್ಟರು ಎನ್ನಲಾಗಿದೆ.<br /> <br /> ಕೃಷಿ ಸಂಶೋಧನಾ ಕೇಂದ್ರದ ಸಿಬ್ಬಂದಿ ತಮಗೆ ಬೇಕಾದ ಗುತ್ತಿಗೆದಾರರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಟೆಂಡರ್ ಪ್ರಕ್ರಿಯೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಸಂಧಾನ: ಕೆ.ವಿ.ಕೆಯ ಆವರಣದಲ್ಲಿನ ಗಿಡ ಕತ್ತರಿಸುವ ಈ ಟೆಂಡರ್ಗೆ ಸಂಬಂಧಿಸಿದಂತೆ ಇಬ್ಬರು ಕಟ್ಟಿಗೆ ವ್ಯಾಪಾರಿಗಳಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಾಜಿ ಸಚಿವರೊಬ್ಬರ ಸಮ್ಮುಖದಲ್ಲಿ ಸಂಧಾನಸಭೆ ನಡೆಯಿತು ಎಂದು ತಿಳಿದು ಬಂದಿದೆ. <br /> <br /> ಕಡಿಮೆ ಮೊತ್ತಕ್ಕೆ ಟೆಂಡರ್ ನೀಡಿದ ಕೆ.ವಿ.ಕೆ. ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಾರ್ವಜನಿಕರ ಪರ ವ್ಯಕ್ತಿಯೊಬ್ಬರು ಅರಣ್ಯ ಸಚಿವ, ಸಾಮಾಜಿಕ ಅರಣ್ಯ ಇಲಾಖೆಯ ನಿರ್ದೇಶಕ, ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>