<p><strong>ಚನ್ನರಾಯಪಟ್ಟಣ:</strong> ಶಿವಮೊಗ್ಗ ಜಿಲ್ಲೆ ಹೊಂಬುಜ ಜೈನ ಕ್ಷೇತ್ರದ ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರವಣಬೆಳಗೊಳದ ಧರ್ಮಕೀರ್ತಿ ಸ್ವಾಮೀಜಿ ಅವರ ಪಟ್ಟಾಭಿಷೇಕ ಮಹೋತ್ಸವ ನ.14 ರಿಂದ 17ರ ವರೆಗೆ ಹೊಂಬುಜ ಜೈನ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ನೆರವೇರಲಿದೆ.<br /> <br /> ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸೋಮವಾರ ಶ್ರವಣಬೆಳಗೊಳದಲ್ಲಿ ಏರ್ಪಡಿಸಿದ್ದ ಧಾರ್ಮಿಕ ಸಮಾರಂಭದಲ್ಲಿ ಹೊಂಬುಜ ಮಠದ ಪರಂಪರೆಯ ಸಂಘಮಿ ಕುಟುಂಬದ ಹಿರಿಯರಾದ ವಸಂತ ಹೊಂಬಣ್ಣ ಅವರು ಈ ವಿಷಯ ತಿಳಿಸಿದರು.<br /> <br /> ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಧರ್ಮಕೀರ್ತಿ ಸ್ವಾಮೀಜಿ ಅವರಿಗೆ ತಿಲಕವಿರಿಸಿ ಸ್ವಾಗತಿಸಿ, ಆಯ್ಕೆಯ ಅಧಿಕೃತ ನಿರ್ಣಯ ಪತ್ರವನ್ನು ಈ ಸಂದರ್ಭದಲ್ಲಿ ಸಮರ್ಪಿಸಲಾಯಿತು.<br /> <br /> ಹೊಂಬುಜ ಮಠದ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಹೆಗ್ಗಡೆ ಮಾತನಾಡಿ, ನೂತನ ಪೀಠಾಧ್ಯಕ್ಷರು ಶ್ರವಣಬೆಳಗೊಳದಿಂದ ಹೊರಟು ನ.14 ರಂದು ಹೊಂಬುಜ ಕ್ಷೇತ್ರಕ್ಕೆ ಪುರ ಪ್ರವೇಶ ಮಾಡಲಿದ್ದಾರೆ. ನ. 17ರಂದು ಪಟ್ಟಾಭಿಷೇಕ ಮಹೋತ್ಸವವು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಸಾನ್ನಿಧ್ಯದಲ್ಲಿ ನೆರವೇರಲಿದೆ ಎಂದು ಹೇಳಿದರು.<br /> <br /> ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ಕಾರ್ಯದ ಯಶಸ್ಸಿಗೆ ಅದರ ನಿರ್ವಹಣೆ ಮುಖ್ಯ. ಉತ್ತಮ ವ್ಯಕ್ತಿಗಳಿಂದ ಉತ್ತಮ ಕಾರ್ಯಗಳಾಗಲಿವೆ ಎಂದು ನುಡಿದರು.<br /> <br /> ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಧರ್ಮಕೀರ್ತಿ ಸ್ವಾಮೀಜಿ ಮಾತನಾಡಿ, ಹೊಂಬುಜ ಕ್ಷೇತ್ರದ ಬೆಳವಣಿಗೆ ಎಲ್ಲರ ಸಹಕಾರ ಅಗತ್ಯ. ತಮ್ಮನ್ನು ಒಮ್ಮತದಿಂದ ಆಯ್ಕೆ ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದರು.</p>.<p>ಕರ್ನಾಟಕ ಜೈನ ಸಂಘದ ಅಧ್ಯಕ್ಷ ಜೀತೇಂದ್ರಕುಮಾರ್ ಸ್ವಾಗತಿಸಿದರು. ಹೊಂಬುಜ ಕ್ಷೇತ್ರದ ದೇವೇಂದ್ರಕೀರ್ತಿ ಕಾಲವಾದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಶಿವಮೊಗ್ಗ ಜಿಲ್ಲೆ ಹೊಂಬುಜ ಜೈನ ಕ್ಷೇತ್ರದ ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರವಣಬೆಳಗೊಳದ ಧರ್ಮಕೀರ್ತಿ ಸ್ವಾಮೀಜಿ ಅವರ ಪಟ್ಟಾಭಿಷೇಕ ಮಹೋತ್ಸವ ನ.14 ರಿಂದ 17ರ ವರೆಗೆ ಹೊಂಬುಜ ಜೈನ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ನೆರವೇರಲಿದೆ.<br /> <br /> ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸೋಮವಾರ ಶ್ರವಣಬೆಳಗೊಳದಲ್ಲಿ ಏರ್ಪಡಿಸಿದ್ದ ಧಾರ್ಮಿಕ ಸಮಾರಂಭದಲ್ಲಿ ಹೊಂಬುಜ ಮಠದ ಪರಂಪರೆಯ ಸಂಘಮಿ ಕುಟುಂಬದ ಹಿರಿಯರಾದ ವಸಂತ ಹೊಂಬಣ್ಣ ಅವರು ಈ ವಿಷಯ ತಿಳಿಸಿದರು.<br /> <br /> ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಧರ್ಮಕೀರ್ತಿ ಸ್ವಾಮೀಜಿ ಅವರಿಗೆ ತಿಲಕವಿರಿಸಿ ಸ್ವಾಗತಿಸಿ, ಆಯ್ಕೆಯ ಅಧಿಕೃತ ನಿರ್ಣಯ ಪತ್ರವನ್ನು ಈ ಸಂದರ್ಭದಲ್ಲಿ ಸಮರ್ಪಿಸಲಾಯಿತು.<br /> <br /> ಹೊಂಬುಜ ಮಠದ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಹೆಗ್ಗಡೆ ಮಾತನಾಡಿ, ನೂತನ ಪೀಠಾಧ್ಯಕ್ಷರು ಶ್ರವಣಬೆಳಗೊಳದಿಂದ ಹೊರಟು ನ.14 ರಂದು ಹೊಂಬುಜ ಕ್ಷೇತ್ರಕ್ಕೆ ಪುರ ಪ್ರವೇಶ ಮಾಡಲಿದ್ದಾರೆ. ನ. 17ರಂದು ಪಟ್ಟಾಭಿಷೇಕ ಮಹೋತ್ಸವವು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಸಾನ್ನಿಧ್ಯದಲ್ಲಿ ನೆರವೇರಲಿದೆ ಎಂದು ಹೇಳಿದರು.<br /> <br /> ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ಕಾರ್ಯದ ಯಶಸ್ಸಿಗೆ ಅದರ ನಿರ್ವಹಣೆ ಮುಖ್ಯ. ಉತ್ತಮ ವ್ಯಕ್ತಿಗಳಿಂದ ಉತ್ತಮ ಕಾರ್ಯಗಳಾಗಲಿವೆ ಎಂದು ನುಡಿದರು.<br /> <br /> ನೂತನ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಧರ್ಮಕೀರ್ತಿ ಸ್ವಾಮೀಜಿ ಮಾತನಾಡಿ, ಹೊಂಬುಜ ಕ್ಷೇತ್ರದ ಬೆಳವಣಿಗೆ ಎಲ್ಲರ ಸಹಕಾರ ಅಗತ್ಯ. ತಮ್ಮನ್ನು ಒಮ್ಮತದಿಂದ ಆಯ್ಕೆ ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದರು.</p>.<p>ಕರ್ನಾಟಕ ಜೈನ ಸಂಘದ ಅಧ್ಯಕ್ಷ ಜೀತೇಂದ್ರಕುಮಾರ್ ಸ್ವಾಗತಿಸಿದರು. ಹೊಂಬುಜ ಕ್ಷೇತ್ರದ ದೇವೇಂದ್ರಕೀರ್ತಿ ಕಾಲವಾದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>