<p><strong>ಧರ್ಮಪುರ: </strong>ಸ್ವ-ಸಹಾಯ ಸಂಘಗಳು ಹಾಗೂ ರೈತಕೂಟದ ಮೂಲಕ ಮುಂದಿನ ದಿನಗಳಲ್ಲಿ ಬ್ಯಾಂಕಿನ ವ್ಯವಹಾರ ಮನೆ-ಮನೆಗೂ ತಲುಪಲಿದೆ ಎಂದು ನಬಾರ್ಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ್ಭಂಡಾರಿ ತಿಳಿಸಿದರು.ಇಲ್ಲಿನ ಪ್ರಗತಿ ಗ್ರಾಮೀಣ ಬ್ಯಾಂಕಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಗ್ರಾಹಕರ ಸಮಾವೇಶ’ದಲ್ಲಿ ಅವರು ಮಾತನಾಡಿದರು.ದೇಶದಲ್ಲಿ ಶೇ. 51ರಷ್ಟು ಜನರು ಬ್ಯಾಂಕಿನ ವ್ಯವಹಾರದಿಂದ ದೂರವಿದ್ದು, ಅಂತಹವರಿಗೆ ರೈತಕೂಟ ಮತ್ತು ಸ್ವ-ಸಹಾಯ ಸಂಘಗಳ ಮೂಲಕ ಸಂದೇಶ ನೀಡುವುದು ನಬಾರ್ಡ್ ಬ್ಯಾಂಕಿನ ಉದ್ದೇಶ. <br /> <br /> ಕುರಿ ಸಾಕಾಣಿಕೆ, ಸಾವಯವ ಕೃಷಿ ಮತ್ತು ಕೃಷಿಯೇತರ ಕಸುಬುಗಳಿಗೆ ಶೇ. 25ಸಬ್ಸಿಡಿ ನೀಡಲಾಗುವುದು. ಗ್ರಾಹಕರು ಇದರ ಸದುಪಯೋಗಪಡೆದುಕೊಳ್ಳಲು ಸಲಹೆ ನೀಡಿದರು.<br /> ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಆರ್.ಸಿ. ಪಾಟೀಲ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಮತ್ತು ಸಾಮಾಜಿಕ ಭದ್ರತೆ ಪಿಂಚಣಿ ಪಡೆಯುವಂತಹ ಫಲಾನುಭವಿಗಳಿಗೆ ಅನೂಕೂಲವಾಗಲು ಪ್ರಗತಿ ಗ್ರಾಮೀಣ ಬ್ಯಾಂಕ್ ಹಣವಿಲ್ಲದೇ ಖಾತೆ ತೆರೆಯುವ ಅವಕಾಶ ನೀಡಿದೆ ಎಂದರು.<br /> <br /> ಜಿಲ್ಲಾ ಪ್ರಗತಿ ಗ್ರಾಮೀಣ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕರಾದ ಶಿವಕುಮಾರ್ಸ್ವಾಮಿ, ಯೋಗೇಶ್ವರಪ್ಪ, ರಾಜೇಶ್ ಕುಮಾರ್, ನಾಗಣ್ಣ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎ.ವಿ. ರಂಗಸ್ವಾಮಿ ಮಾತನಾಡಿದರು.ರಂಗಪ್ಪ, ಜೆಸಿಬಿ ವೀರಣ್ಣ, ಗಿರಿ, ನಂಜುಂಡೇಶ್ವರ, ತಿಪ್ಪೇಸ್ವಾಮಿ. ರಾಮಚಂದ್ರಪ್ಪ, ಪುಟ್ಟಕೆಂಚಮ್ಮ ಮತ್ತಿತರರು ಹಾಜರಿದ್ದರು.<br /> <br /> <strong>ಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆ</strong><br /> <strong>ಧರ್ಮಪುರ:</strong> ಹೊಟ್ಟೆನೋವು ತಾಳಲಾರದೇ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಶ್ರವಣಗೆರೆಯಲ್ಲಿ ಗುರುವಾರ ನಡೆದಿದೆ.<br /> ಮೃತನನ್ನು ಗೋವಿಂದಪ್ಪ (65) ಎಂದು ಗುರುತಿಸಲಾಗಿದೆ. ಗೋವಿಂದಪ್ಪ ಹೊಟ್ಟೆನೋವು ತಾಳಲಾರದೇ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಮೀಪದ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ: </strong>ಸ್ವ-ಸಹಾಯ ಸಂಘಗಳು ಹಾಗೂ ರೈತಕೂಟದ ಮೂಲಕ ಮುಂದಿನ ದಿನಗಳಲ್ಲಿ ಬ್ಯಾಂಕಿನ ವ್ಯವಹಾರ ಮನೆ-ಮನೆಗೂ ತಲುಪಲಿದೆ ಎಂದು ನಬಾರ್ಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ್ಭಂಡಾರಿ ತಿಳಿಸಿದರು.ಇಲ್ಲಿನ ಪ್ರಗತಿ ಗ್ರಾಮೀಣ ಬ್ಯಾಂಕಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಗ್ರಾಹಕರ ಸಮಾವೇಶ’ದಲ್ಲಿ ಅವರು ಮಾತನಾಡಿದರು.ದೇಶದಲ್ಲಿ ಶೇ. 51ರಷ್ಟು ಜನರು ಬ್ಯಾಂಕಿನ ವ್ಯವಹಾರದಿಂದ ದೂರವಿದ್ದು, ಅಂತಹವರಿಗೆ ರೈತಕೂಟ ಮತ್ತು ಸ್ವ-ಸಹಾಯ ಸಂಘಗಳ ಮೂಲಕ ಸಂದೇಶ ನೀಡುವುದು ನಬಾರ್ಡ್ ಬ್ಯಾಂಕಿನ ಉದ್ದೇಶ. <br /> <br /> ಕುರಿ ಸಾಕಾಣಿಕೆ, ಸಾವಯವ ಕೃಷಿ ಮತ್ತು ಕೃಷಿಯೇತರ ಕಸುಬುಗಳಿಗೆ ಶೇ. 25ಸಬ್ಸಿಡಿ ನೀಡಲಾಗುವುದು. ಗ್ರಾಹಕರು ಇದರ ಸದುಪಯೋಗಪಡೆದುಕೊಳ್ಳಲು ಸಲಹೆ ನೀಡಿದರು.<br /> ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಆರ್.ಸಿ. ಪಾಟೀಲ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಮತ್ತು ಸಾಮಾಜಿಕ ಭದ್ರತೆ ಪಿಂಚಣಿ ಪಡೆಯುವಂತಹ ಫಲಾನುಭವಿಗಳಿಗೆ ಅನೂಕೂಲವಾಗಲು ಪ್ರಗತಿ ಗ್ರಾಮೀಣ ಬ್ಯಾಂಕ್ ಹಣವಿಲ್ಲದೇ ಖಾತೆ ತೆರೆಯುವ ಅವಕಾಶ ನೀಡಿದೆ ಎಂದರು.<br /> <br /> ಜಿಲ್ಲಾ ಪ್ರಗತಿ ಗ್ರಾಮೀಣ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕರಾದ ಶಿವಕುಮಾರ್ಸ್ವಾಮಿ, ಯೋಗೇಶ್ವರಪ್ಪ, ರಾಜೇಶ್ ಕುಮಾರ್, ನಾಗಣ್ಣ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎ.ವಿ. ರಂಗಸ್ವಾಮಿ ಮಾತನಾಡಿದರು.ರಂಗಪ್ಪ, ಜೆಸಿಬಿ ವೀರಣ್ಣ, ಗಿರಿ, ನಂಜುಂಡೇಶ್ವರ, ತಿಪ್ಪೇಸ್ವಾಮಿ. ರಾಮಚಂದ್ರಪ್ಪ, ಪುಟ್ಟಕೆಂಚಮ್ಮ ಮತ್ತಿತರರು ಹಾಜರಿದ್ದರು.<br /> <br /> <strong>ಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆ</strong><br /> <strong>ಧರ್ಮಪುರ:</strong> ಹೊಟ್ಟೆನೋವು ತಾಳಲಾರದೇ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಶ್ರವಣಗೆರೆಯಲ್ಲಿ ಗುರುವಾರ ನಡೆದಿದೆ.<br /> ಮೃತನನ್ನು ಗೋವಿಂದಪ್ಪ (65) ಎಂದು ಗುರುತಿಸಲಾಗಿದೆ. ಗೋವಿಂದಪ್ಪ ಹೊಟ್ಟೆನೋವು ತಾಳಲಾರದೇ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಮೀಪದ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>