<p><strong>ವಿಜಯಪುರ :</strong> ಇಲ್ಲಿನ ಪ್ರಸಿದ್ಧ ಧರ್ಮರಾಯಸ್ವಾಮಿ ದ್ರೌಪತಮ್ಮ ದೇವಾಲಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದ್ರೌಪತಮ್ಮ ನವರ ಕಲ್ಯಾಣೋತ್ಸವವು ಗುರುವಾರ ಅದ್ದೂರಿಯಾಗಿ ಜರುಗಿತು.<br /> <br /> ಧಾರ್ಮಿಕ ವಿಧಿ ವಿಧಾನಗಳಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವರಿಗೆ ಕಲ್ಯಾಣೋತ್ಸವದ ಉಡುಗೊರೆ ಸಲ್ಲಿಸಿದರು. ಪಂಡರಾಪುರ ಭಜನೆ, ಮತ್ತಿತರ ಕಾರ್ಯಕ್ರಮಗಳು ನಡೆದವು.<br /> <br /> ಹೂವಿನ ಕರಗ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು, ಪುಣ್ಯಾಹ, ಧ್ವಜಾರೋಹಣ, ವಿಶೇಷ ಅಲಂಕಾರ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು, ಹಸಿಕರಗ ಮಹೋತ್ಸವ ನಡೆಯಿತು.<br /> <br /> ಜಾತ್ರೆ: ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಆರಂಭವಾಗಿದ್ದು ಗುರುವಾರ ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣ, ಧ್ವಜಾರೋಹಣ, ಭೇರಿಪೂಜೆ, ಅಭಿಷೇಕ, ಹನುಮಂತ ವಾಹನೋತ್ಸವ, ಸಿಂಹವಾಹನೋತ್ಸವ, ಶೇಷ ವಾಹನೋತ್ಸವ, ಅಭಿಷೇಕ, ಪೂಲಂಗಿ ಸೇವೆ, ಮಂಟಪ ಪಡಿಸೇವೆ, ಹೂವಿನ ಅಲಂಕಾರ, ಕಲ್ಯಾಣೋತ್ಸವ, ಗರುಡ ವಾಹನೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ :</strong> ಇಲ್ಲಿನ ಪ್ರಸಿದ್ಧ ಧರ್ಮರಾಯಸ್ವಾಮಿ ದ್ರೌಪತಮ್ಮ ದೇವಾಲಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದ್ರೌಪತಮ್ಮ ನವರ ಕಲ್ಯಾಣೋತ್ಸವವು ಗುರುವಾರ ಅದ್ದೂರಿಯಾಗಿ ಜರುಗಿತು.<br /> <br /> ಧಾರ್ಮಿಕ ವಿಧಿ ವಿಧಾನಗಳಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವರಿಗೆ ಕಲ್ಯಾಣೋತ್ಸವದ ಉಡುಗೊರೆ ಸಲ್ಲಿಸಿದರು. ಪಂಡರಾಪುರ ಭಜನೆ, ಮತ್ತಿತರ ಕಾರ್ಯಕ್ರಮಗಳು ನಡೆದವು.<br /> <br /> ಹೂವಿನ ಕರಗ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು, ಪುಣ್ಯಾಹ, ಧ್ವಜಾರೋಹಣ, ವಿಶೇಷ ಅಲಂಕಾರ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು, ಹಸಿಕರಗ ಮಹೋತ್ಸವ ನಡೆಯಿತು.<br /> <br /> ಜಾತ್ರೆ: ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಆರಂಭವಾಗಿದ್ದು ಗುರುವಾರ ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣ, ಧ್ವಜಾರೋಹಣ, ಭೇರಿಪೂಜೆ, ಅಭಿಷೇಕ, ಹನುಮಂತ ವಾಹನೋತ್ಸವ, ಸಿಂಹವಾಹನೋತ್ಸವ, ಶೇಷ ವಾಹನೋತ್ಸವ, ಅಭಿಷೇಕ, ಪೂಲಂಗಿ ಸೇವೆ, ಮಂಟಪ ಪಡಿಸೇವೆ, ಹೂವಿನ ಅಲಂಕಾರ, ಕಲ್ಯಾಣೋತ್ಸವ, ಗರುಡ ವಾಹನೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>