<p><strong>ಬೆಳ್ತಂಗಡಿ:</strong> ಧರ್ಮಸ್ಥಳದ ಆನೆ ಗಂಗೆ (62) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದೆ. 1950ರಲ್ಲಿ ಜನಿಸಿದ್ದ ಆನೆಯನ್ನು 1957ರಲ್ಲಿ ಅರಣ್ಯ ಇಲಾಖೆ ಸೂಕ್ತ ತರಬೇತಿ ಬಳಿಕ ಧರ್ಮಸ್ಥಳಕ್ಕೆ ತರಲಾಗಿತ್ತು. <br /> ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ವಿಷು ಜಾತ್ರೆ, ವಿಶೇಷ ಉತ್ಸವ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಆನೆಯನ್ನು ಅಲಂಕರಿಸಿ ದೇವರ ಸೇವೆಗೆ ಬಳಸಲಾಗುತ್ತಿತ್ತು.<br /> <br /> ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರತ್ನಾಕರ ಮಲ್ಯ ಮತ್ತು ಡಾ. ಜಯಕೀರ್ತಿ ಜೈನ್ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯಾಧಿಕಾರಿ ಪದ್ಮನಾಭ ಗೌಡ, ವಲಯ ಅರಣ್ಯಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಧರ್ಮಸ್ಥಳದ ಆನೆ ಗಂಗೆ (62) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದೆ. 1950ರಲ್ಲಿ ಜನಿಸಿದ್ದ ಆನೆಯನ್ನು 1957ರಲ್ಲಿ ಅರಣ್ಯ ಇಲಾಖೆ ಸೂಕ್ತ ತರಬೇತಿ ಬಳಿಕ ಧರ್ಮಸ್ಥಳಕ್ಕೆ ತರಲಾಗಿತ್ತು. <br /> ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ವಿಷು ಜಾತ್ರೆ, ವಿಶೇಷ ಉತ್ಸವ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಆನೆಯನ್ನು ಅಲಂಕರಿಸಿ ದೇವರ ಸೇವೆಗೆ ಬಳಸಲಾಗುತ್ತಿತ್ತು.<br /> <br /> ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರತ್ನಾಕರ ಮಲ್ಯ ಮತ್ತು ಡಾ. ಜಯಕೀರ್ತಿ ಜೈನ್ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯಾಧಿಕಾರಿ ಪದ್ಮನಾಭ ಗೌಡ, ವಲಯ ಅರಣ್ಯಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>