<p><strong>ಹುಬ್ಬಳ್ಳಿ: </strong>ಧಾರವಾಡ ತಾಲ್ಲೂಕಿನ ನರೇಂದ್ರ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಕುರಿ ಕಾಯುತ್ತಿದ್ದ ಮಹಿಳೆ ಸಾವಿಗೀಡಾದ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಗಂಗವ್ವ ವಿಠ್ಠಲ ಮದಲಿ(23) ಎಂದು ಗುರುತಿಸಲಾಗಿದೆ.<br /> <br /> ಧಾರವಾಡ ಮತ್ತು ಹುಬ್ಬಳ್ಳಿ ನಗರಗಳಲ್ಲೂ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಆಲಿಕಲ್ಲು ಸಮೇತ ಮಳೆ ಸುರಿದಿದೆ.<br /> ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಮತ್ತು ತಾಲ್ಲೂಕಿನ ಮಸಬಿನಾಳ, ಕಾನ್ನಾಳ ಗ್ರಾಮಗಳಲ್ಲಿ ಮಳೆಯಾಗಿದೆ. ಮುತ್ತಗಿ ಗ್ರಾಮದಲ್ಲಿ ರವೀಂದ್ರ ಮಾಮಲಪ್ಪ ಮಾಳಜಿ ಎಂಬುವವರ ತೋಟದಲ್ಲಿ ಸಿಡಿಲು ಬಡಿದು ಎರಡು ಆಕಳು ಮತ್ತು ಒಂದು ಎತ್ತು ಮೃತಪಟ್ಟಿವೆ.<br /> <br /> <strong>ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ) ವರದಿ:</strong><br /> ಪಟ್ಟಣದಲ್ಲಿ ಸೋಮವಾರ ಸುರಿದ ಮಳೆಯಿಂದ ಚರಂಡಿಗಳು ತುಂಬಿ ಹರಿದು, ಹೊಟೇಲ್, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. <br /> <br /> ಬಸ್ ನಿಲ್ದಾಣದ ಮುಂಭಾಗ ಇರುವ ಪುಟ್ಟಣ್ಣ ಅವರ ಹೊಟೇಲ್, ಬಷೀರ್ ಸಾಬ್ ಅವರ ಬಾಳೆಕಾಯಿ ಮಂಡಿ ಹಾಗೂ ಪೀಠೋಪಕರಣ ಮಳಿಗೆಗಳಿಗೆ ನೀರು ನುಗ್ಗಿ ಸಾವಿರಾರು ರೂ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ. <br /> <br /> ಮಳೆ, ಗಾಳಿಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ನಷ್ಟವಾಗಿದೆ. ಒಂದು ಗಂಟೆಗೂ ಹೆಚ್ಚುಕಾಲ ಆಲಿಕಲ್ಲು ಮಳೆ ಸುರಿದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ. ಕೆಳಗಿನ ಕೊಟ್ಟಿಗೆ ಸಮೀಪ ರಾಜ್ಯ ಹೆದ್ದಾರಿ-47ರ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಸುಮಾರು ಮೂರ್ನಾಲ್ಕು ಗಂಟೆ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಧಾರವಾಡ ತಾಲ್ಲೂಕಿನ ನರೇಂದ್ರ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಕುರಿ ಕಾಯುತ್ತಿದ್ದ ಮಹಿಳೆ ಸಾವಿಗೀಡಾದ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಗಂಗವ್ವ ವಿಠ್ಠಲ ಮದಲಿ(23) ಎಂದು ಗುರುತಿಸಲಾಗಿದೆ.<br /> <br /> ಧಾರವಾಡ ಮತ್ತು ಹುಬ್ಬಳ್ಳಿ ನಗರಗಳಲ್ಲೂ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಆಲಿಕಲ್ಲು ಸಮೇತ ಮಳೆ ಸುರಿದಿದೆ.<br /> ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಮತ್ತು ತಾಲ್ಲೂಕಿನ ಮಸಬಿನಾಳ, ಕಾನ್ನಾಳ ಗ್ರಾಮಗಳಲ್ಲಿ ಮಳೆಯಾಗಿದೆ. ಮುತ್ತಗಿ ಗ್ರಾಮದಲ್ಲಿ ರವೀಂದ್ರ ಮಾಮಲಪ್ಪ ಮಾಳಜಿ ಎಂಬುವವರ ತೋಟದಲ್ಲಿ ಸಿಡಿಲು ಬಡಿದು ಎರಡು ಆಕಳು ಮತ್ತು ಒಂದು ಎತ್ತು ಮೃತಪಟ್ಟಿವೆ.<br /> <br /> <strong>ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ) ವರದಿ:</strong><br /> ಪಟ್ಟಣದಲ್ಲಿ ಸೋಮವಾರ ಸುರಿದ ಮಳೆಯಿಂದ ಚರಂಡಿಗಳು ತುಂಬಿ ಹರಿದು, ಹೊಟೇಲ್, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. <br /> <br /> ಬಸ್ ನಿಲ್ದಾಣದ ಮುಂಭಾಗ ಇರುವ ಪುಟ್ಟಣ್ಣ ಅವರ ಹೊಟೇಲ್, ಬಷೀರ್ ಸಾಬ್ ಅವರ ಬಾಳೆಕಾಯಿ ಮಂಡಿ ಹಾಗೂ ಪೀಠೋಪಕರಣ ಮಳಿಗೆಗಳಿಗೆ ನೀರು ನುಗ್ಗಿ ಸಾವಿರಾರು ರೂ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ. <br /> <br /> ಮಳೆ, ಗಾಳಿಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ನಷ್ಟವಾಗಿದೆ. ಒಂದು ಗಂಟೆಗೂ ಹೆಚ್ಚುಕಾಲ ಆಲಿಕಲ್ಲು ಮಳೆ ಸುರಿದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ. ಕೆಳಗಿನ ಕೊಟ್ಟಿಗೆ ಸಮೀಪ ರಾಜ್ಯ ಹೆದ್ದಾರಿ-47ರ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಸುಮಾರು ಮೂರ್ನಾಲ್ಕು ಗಂಟೆ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>