<p><strong>ಬೆಂಗಳೂರು: </strong>ಪರವಾನಗಿ ಪಡೆಯದ ಪ್ರಾರ್ಥನಾ ಮಂದಿರಗಳು ಧ್ವನಿವರ್ಧಕ ಬಳಕೆಯನ್ನು ಮತ್ತೂ ಮುಂದುವರಿಸಿದರೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು ಮಾಡಬೇಕಾಗುತ್ತದೆ ಎಂದು ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದೆ.<br /> <br /> `ಇದರಿಂದ ಶಬ್ದ ಮಾಲಿನ್ಯ ಆಗುತ್ತಿದೆ ಎಂಬ ಹಿನ್ನೆಲೆಯಲ್ಲಿ, ಧ್ವನಿವರ್ಧಕದ ಬಳಕೆ ನಿಲ್ಲಿಸಲು ಕ್ರಮ ತೆಗೆದುಕೊಳ್ಳುವಂತೆ ಈ ಹಿಂದೆ ಆದೇಶ ಹೊರಡಿಸಿದರೂ ಇದುವರೆಗೆ ಏನೂ ಕ್ರಮ ತೆಗೆದುಕೊಂಡಿಲ್ಲ. ಇನ್ನು ಒಂದು ವಾರದ ಗಡುವು ನೀಡಲಾಗುವುದು. ಅಲ್ಲಿಯವರೆಗೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಹೋದರೆ ನ್ಯಾಯಾಂಗ ನಿಂದನೆ ದಾಖಲು ಮಾಡಬೇಕಾಗುತ್ತದೆ~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ತಿಳಿಸಿದೆ.<br /> <br /> `ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಉಪಯೋಗಿಸಬಾರದು ಎಂಬ ಕಾನೂನೇ ಇದೆ. ಈ ಕಾನೂನು ಓದಲು ಇನ್ನೂ ನಿಮಗೆ ವೇಳೆ ಸಿಕ್ಕಿಲ್ಲವೇ~ ಎಂದು ಪೀಠ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. <br /> <br /> ಧ್ವನಿವರ್ಧಕಗಳ ವಿರುದ್ಧ `ಜಯನಗರ ನಾಗರಿಕ ಸಮಿತಿ~ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ. ವಿಚಾರಣೆ ಮುಂದೂಡಲಾಗಿದೆ.<br /> <br /> <strong>ಸಿಬಿಐ ತನಿಖೆಗೆ ಅಸ್ತು: </strong>ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿಗೆ ವಂಚನೆ ಮಾಡಿರುವ ಆರೋಪ ಹೊತ್ತ ಮಾಜಿ ಸಚಿವ ಡಿ. ಸುಧಾಕರ್ ಅವರ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.<br /> <br /> ತನಿಖೆ ರದ್ದತಿಗೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಆನಂದ ವಜಾ ಮಾಡಿದ್ದಾರೆ. 2003ರಿಂದ 2006ರ ಅವಧಿಯಲ್ಲಿ ಬ್ಯಾಂಕಿಗೆ ವಂಚನೆ ಮಾಡಿರುವ ಆರೋಪ ಇವರ ಮೇಲಿದೆ. <br /> ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಲು ಆಗದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರವಾನಗಿ ಪಡೆಯದ ಪ್ರಾರ್ಥನಾ ಮಂದಿರಗಳು ಧ್ವನಿವರ್ಧಕ ಬಳಕೆಯನ್ನು ಮತ್ತೂ ಮುಂದುವರಿಸಿದರೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು ಮಾಡಬೇಕಾಗುತ್ತದೆ ಎಂದು ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದೆ.<br /> <br /> `ಇದರಿಂದ ಶಬ್ದ ಮಾಲಿನ್ಯ ಆಗುತ್ತಿದೆ ಎಂಬ ಹಿನ್ನೆಲೆಯಲ್ಲಿ, ಧ್ವನಿವರ್ಧಕದ ಬಳಕೆ ನಿಲ್ಲಿಸಲು ಕ್ರಮ ತೆಗೆದುಕೊಳ್ಳುವಂತೆ ಈ ಹಿಂದೆ ಆದೇಶ ಹೊರಡಿಸಿದರೂ ಇದುವರೆಗೆ ಏನೂ ಕ್ರಮ ತೆಗೆದುಕೊಂಡಿಲ್ಲ. ಇನ್ನು ಒಂದು ವಾರದ ಗಡುವು ನೀಡಲಾಗುವುದು. ಅಲ್ಲಿಯವರೆಗೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಹೋದರೆ ನ್ಯಾಯಾಂಗ ನಿಂದನೆ ದಾಖಲು ಮಾಡಬೇಕಾಗುತ್ತದೆ~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ತಿಳಿಸಿದೆ.<br /> <br /> `ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಉಪಯೋಗಿಸಬಾರದು ಎಂಬ ಕಾನೂನೇ ಇದೆ. ಈ ಕಾನೂನು ಓದಲು ಇನ್ನೂ ನಿಮಗೆ ವೇಳೆ ಸಿಕ್ಕಿಲ್ಲವೇ~ ಎಂದು ಪೀಠ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. <br /> <br /> ಧ್ವನಿವರ್ಧಕಗಳ ವಿರುದ್ಧ `ಜಯನಗರ ನಾಗರಿಕ ಸಮಿತಿ~ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ. ವಿಚಾರಣೆ ಮುಂದೂಡಲಾಗಿದೆ.<br /> <br /> <strong>ಸಿಬಿಐ ತನಿಖೆಗೆ ಅಸ್ತು: </strong>ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿಗೆ ವಂಚನೆ ಮಾಡಿರುವ ಆರೋಪ ಹೊತ್ತ ಮಾಜಿ ಸಚಿವ ಡಿ. ಸುಧಾಕರ್ ಅವರ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.<br /> <br /> ತನಿಖೆ ರದ್ದತಿಗೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಆನಂದ ವಜಾ ಮಾಡಿದ್ದಾರೆ. 2003ರಿಂದ 2006ರ ಅವಧಿಯಲ್ಲಿ ಬ್ಯಾಂಕಿಗೆ ವಂಚನೆ ಮಾಡಿರುವ ಆರೋಪ ಇವರ ಮೇಲಿದೆ. <br /> ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಲು ಆಗದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>