<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಕ್ರಾಸ್ ಬಳಿ ಹದಗೆಟ್ಟಿರುವ ಸರ್ವೀಸ್ ರಸ್ತೆಗಳನ್ನು ದುರಸ್ತಿಪಡಿಸಬೇಕು ಮತ್ತು ಸಂಚಾರಕ್ಕೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಒತ್ತಾಯಿಸಿದರು.<br /> <br /> ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಧನ ಒದಗಿಸುವ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡ ನಂತರ ನಂದಿ ಕ್ರಾಸ್ ಸಮೀಪದ ಸರ್ವೀಸ್ ರಸ್ತೆಗಳ ಸ್ಥಿತಿಗತಿಗಳ ಪರಿಶೀಲನೆಗೆ ಮುಂದಾದ ಪ್ರಾಧಿಕಾರದ ಯೋಜನಾಧಿಕಾರಿ ಗುಪ್ತಾ ಅವರಿಗೆ ರೈತರು ಆಗ್ರಹಿಸಿದರು.<br /> <br /> `ಮಳೆಯಿಂದ ಸರ್ವೀಸ್ ರಸ್ತೆಗಳು ಹಾಳಾಗಿ ಹಲವು ತಿಂಗಳಾಗಿದ್ದು, ಈವರೆಗೆ ದುರಸ್ತಿ ಮಾಡಿಲ್ಲ. ಭಾರಿ ಮಳೆಯಾದರೆ, ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಅಸಮರ್ಪಕವಾಗಿ ಕಾಮಗಾರಿ ಮಾಡಲಾಗಿರುವುದರಿಂದ ಇಷ್ಟೆಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಸರ್ವೀಸ್ ರಸ್ತೆಗಳ ದುರಸ್ತಿಗೆ ಪ್ರಾಧಿಕಾರದ ವತಿಯಿಂದ ಶೀಘ್ರವೇ ಕ್ರಮ ಕೈಗೊಳ್ಳಬೇಕು~ ಎಂದು ರೈತರು ಒತ್ತಾಯಿಸಿದರು. ಉಪವಿಭಾಗಾಧಿಕಾರಿ ಸತೀಶ್ಕುಮಾರ್, ರೈತ ಮುಖಂಡರಾದ ಯಲುವಹಳ್ಳಿ ಸೊಣ್ಣೇಗೌಡ, ಬಿ.ಎನ್. ಮುನಿಕೃಷ್ಣಪ್ಪ ಮತ್ತಿತರರು ಜತೆಯಲ್ಲಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಕ್ರಾಸ್ ಬಳಿ ಹದಗೆಟ್ಟಿರುವ ಸರ್ವೀಸ್ ರಸ್ತೆಗಳನ್ನು ದುರಸ್ತಿಪಡಿಸಬೇಕು ಮತ್ತು ಸಂಚಾರಕ್ಕೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಒತ್ತಾಯಿಸಿದರು.<br /> <br /> ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಧನ ಒದಗಿಸುವ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡ ನಂತರ ನಂದಿ ಕ್ರಾಸ್ ಸಮೀಪದ ಸರ್ವೀಸ್ ರಸ್ತೆಗಳ ಸ್ಥಿತಿಗತಿಗಳ ಪರಿಶೀಲನೆಗೆ ಮುಂದಾದ ಪ್ರಾಧಿಕಾರದ ಯೋಜನಾಧಿಕಾರಿ ಗುಪ್ತಾ ಅವರಿಗೆ ರೈತರು ಆಗ್ರಹಿಸಿದರು.<br /> <br /> `ಮಳೆಯಿಂದ ಸರ್ವೀಸ್ ರಸ್ತೆಗಳು ಹಾಳಾಗಿ ಹಲವು ತಿಂಗಳಾಗಿದ್ದು, ಈವರೆಗೆ ದುರಸ್ತಿ ಮಾಡಿಲ್ಲ. ಭಾರಿ ಮಳೆಯಾದರೆ, ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಅಸಮರ್ಪಕವಾಗಿ ಕಾಮಗಾರಿ ಮಾಡಲಾಗಿರುವುದರಿಂದ ಇಷ್ಟೆಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಸರ್ವೀಸ್ ರಸ್ತೆಗಳ ದುರಸ್ತಿಗೆ ಪ್ರಾಧಿಕಾರದ ವತಿಯಿಂದ ಶೀಘ್ರವೇ ಕ್ರಮ ಕೈಗೊಳ್ಳಬೇಕು~ ಎಂದು ರೈತರು ಒತ್ತಾಯಿಸಿದರು. ಉಪವಿಭಾಗಾಧಿಕಾರಿ ಸತೀಶ್ಕುಮಾರ್, ರೈತ ಮುಖಂಡರಾದ ಯಲುವಹಳ್ಳಿ ಸೊಣ್ಣೇಗೌಡ, ಬಿ.ಎನ್. ಮುನಿಕೃಷ್ಣಪ್ಪ ಮತ್ತಿತರರು ಜತೆಯಲ್ಲಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>