<p><strong>ಬೆಂಗಳೂರು: </strong>ನಕಲಿ ಅಂಕಪಟ್ಟಿಗಳನ್ನು ನೀಡಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿರುವ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡವರ ಮೂಲ ದಾಖಲೆಗಳ ಪರಿಶೀಲನೆಗೆ ಸೂಚಿಸಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.<br /> <br /> ಬಿಜೆಪಿಯ ವಿ.ಸುನಿಲ್ ಕುಮಾರ್ ಗಮನ ಸೆಳೆಯುವ ಸೂಚನೆಗೆ ಬುಧವಾರ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಗ್ರಾಮ ಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿರುವ ಮೂಲ ದಾಖಲೆಗಳ ನೈಜತೆ ಪರಿಶೀಲಿಸಿ, ಲೋಪಗಳು ಕಂಡುಬಂದರೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.<br /> <br /> ಉಡುಪಿ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿದ್ದ 24 ಮಂದಿ ಪೈಕಿ 19 ಮಂದಿ ಸಲ್ಲಿಸಿದ್ದ ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದಾಗ, 8 ಮಂದಿ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಸಾಬೀತಾಗಿದೆ. ಅವರನ್ನು ಸೇವೆಯಿಂದ ವಜಾ ಮಾಡಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.<br /> <br /> ನಕಲಿ ಅಂಕಪಟ್ಟಿ ನೀಡಿದವರ ವಿವರ (ಉಡುಪಿ ಜಿಲ್ಲೆ): ಎಂ.ವೆಂಕಟೇಶ್, ಎಚ್.ಪಿ.ಬಸವರಾಜು, ಪಿ.ರಾಘವೇಂದ್ರ, ಕೆ.ಕುಮಾರ್, ಕೆ.ಎನ್.ಲಕ್ಷ್ಮಿನಾರಾಯಣ, ಜಯಲಕ್ಷ್ಮಿ, ಎನ್.ಕೆ.ಲೋಹಿತಾಶ್ವ, ಜಿ.ನಾಗರಾಜ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಕಲಿ ಅಂಕಪಟ್ಟಿಗಳನ್ನು ನೀಡಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿರುವ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡವರ ಮೂಲ ದಾಖಲೆಗಳ ಪರಿಶೀಲನೆಗೆ ಸೂಚಿಸಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.<br /> <br /> ಬಿಜೆಪಿಯ ವಿ.ಸುನಿಲ್ ಕುಮಾರ್ ಗಮನ ಸೆಳೆಯುವ ಸೂಚನೆಗೆ ಬುಧವಾರ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಗ್ರಾಮ ಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿರುವ ಮೂಲ ದಾಖಲೆಗಳ ನೈಜತೆ ಪರಿಶೀಲಿಸಿ, ಲೋಪಗಳು ಕಂಡುಬಂದರೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.<br /> <br /> ಉಡುಪಿ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿದ್ದ 24 ಮಂದಿ ಪೈಕಿ 19 ಮಂದಿ ಸಲ್ಲಿಸಿದ್ದ ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದಾಗ, 8 ಮಂದಿ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಸಾಬೀತಾಗಿದೆ. ಅವರನ್ನು ಸೇವೆಯಿಂದ ವಜಾ ಮಾಡಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.<br /> <br /> ನಕಲಿ ಅಂಕಪಟ್ಟಿ ನೀಡಿದವರ ವಿವರ (ಉಡುಪಿ ಜಿಲ್ಲೆ): ಎಂ.ವೆಂಕಟೇಶ್, ಎಚ್.ಪಿ.ಬಸವರಾಜು, ಪಿ.ರಾಘವೇಂದ್ರ, ಕೆ.ಕುಮಾರ್, ಕೆ.ಎನ್.ಲಕ್ಷ್ಮಿನಾರಾಯಣ, ಜಯಲಕ್ಷ್ಮಿ, ಎನ್.ಕೆ.ಲೋಹಿತಾಶ್ವ, ಜಿ.ನಾಗರಾಜ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>