<p><strong>ಬೆಂಗಳೂರು: `</strong>ರಾಜ್ಯದಲ್ಲಿ ಮೂರು ಲಕ್ಷಕ್ಕೂ ಅಧಿಕ ಮಂದಿ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದು, ಇಂತಹ ಪ್ರವೃತ್ತಿ ತಡೆಗೆ ನಕಲಿ ಜಾತಿ ಪ್ರಮಾಣಪತ್ರ ನೀಡುವ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡುವ ಕಾನೂನು ಜಾರಿಗೆ ತರಲಾಗುತ್ತಿದೆ~ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣ ಸ್ವಾಮಿ ತಿಳಿಸಿದರು. <br /> <br /> ರಾಜ್ಯ ಎಸ್ಸಿ/ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಎ.ಡಿ.ಎ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಕರ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, `ನಕಲಿ ಪ್ರಮಾಣಪತ್ರ ಪಡೆದವರ ಅಂಕಿ ಅಂಶ ಪಡೆಯಲಾಗುತ್ತಿದೆ. ಕಾನೂನಿಗೂ ತಿದ್ದುಪಡಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರಗಳು ಇಂತಹ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ~ ಎಂದು ಹೇಳಿದರು. <br /> <br /> ರಾಜ್ಯ ಎಸ್ಸಿ/ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಟಿ. ವೆಂಕಟೇಶಯ್ಯ ಮಾತನಾಡಿ, `ಅನುದಾನಿತ ಶಾಲೆಗಳಲ್ಲಿ ಎಸ್ಸಿ/ಎಸ್ಟಿ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ಶಾಲೆಯಿಂದ ಹೊರ ಹಾಕಲಾಗುತ್ತಿದೆ. ನ್ಯಾಯ ಕೇಳಲು ಹೋದಾಗ ಡಿಡಿಪಿಐಗಳು ರೌಡಿಗಳಂತೆ ವರ್ತಿಸುತ್ತಾರೆ~ ಎಂದು ದೂರಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಶಾಸಕ ವೀರಭದ್ರಪ್ಪ ಹಾಲಹರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ರಾಜ್ಯದಲ್ಲಿ ಮೂರು ಲಕ್ಷಕ್ಕೂ ಅಧಿಕ ಮಂದಿ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದು, ಇಂತಹ ಪ್ರವೃತ್ತಿ ತಡೆಗೆ ನಕಲಿ ಜಾತಿ ಪ್ರಮಾಣಪತ್ರ ನೀಡುವ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡುವ ಕಾನೂನು ಜಾರಿಗೆ ತರಲಾಗುತ್ತಿದೆ~ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣ ಸ್ವಾಮಿ ತಿಳಿಸಿದರು. <br /> <br /> ರಾಜ್ಯ ಎಸ್ಸಿ/ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಎ.ಡಿ.ಎ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಕರ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, `ನಕಲಿ ಪ್ರಮಾಣಪತ್ರ ಪಡೆದವರ ಅಂಕಿ ಅಂಶ ಪಡೆಯಲಾಗುತ್ತಿದೆ. ಕಾನೂನಿಗೂ ತಿದ್ದುಪಡಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರಗಳು ಇಂತಹ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ~ ಎಂದು ಹೇಳಿದರು. <br /> <br /> ರಾಜ್ಯ ಎಸ್ಸಿ/ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಟಿ. ವೆಂಕಟೇಶಯ್ಯ ಮಾತನಾಡಿ, `ಅನುದಾನಿತ ಶಾಲೆಗಳಲ್ಲಿ ಎಸ್ಸಿ/ಎಸ್ಟಿ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ಶಾಲೆಯಿಂದ ಹೊರ ಹಾಕಲಾಗುತ್ತಿದೆ. ನ್ಯಾಯ ಕೇಳಲು ಹೋದಾಗ ಡಿಡಿಪಿಐಗಳು ರೌಡಿಗಳಂತೆ ವರ್ತಿಸುತ್ತಾರೆ~ ಎಂದು ದೂರಿದರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಶಾಸಕ ವೀರಭದ್ರಪ್ಪ ಹಾಲಹರವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>