<p><strong>ಬೆಂಗಳೂರು:</strong> ನಕಲಿ ರಸಗೊಬ್ಬರ ಸರಬರಾಜು ಮಾಡುವುದರ ಮೂಲಕ ರೈತರನ್ನು ವಂಚಿಸುತ್ತಿದ್ದ ತಮಿಳುನಾಡು ಮೂಲದ ಪ್ರಮುಖ ಆರೋಪಿ ದೇವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕೃಷಿ ಖಾತೆ ರಾಜ್ಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ವಿಧಾನಸಭೆಗೆ ತಿಳಿಸಿದರು.<br /> <br /> ನಕಲಿ ರಸಗೊಬ್ಬರದ ಹಾವಳಿ ಹೆಚ್ಚಾಗಿರುವ ಸಂಬಂಧ ಕೆಲವು ಸದಸ್ಯರು ಇತ್ತೀಚೆಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನಸೆಳೆದಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಸ್ವಯಂ ಹೇಳಿಕೆ ನೀಡಿದ ಸಚಿವರು `ಹಾಸನದ ಕೃಷಿ ಅಧಿಕಾರಿಗಳು ಮತ್ತು ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ ಪ್ರಮುಖ ಆರೋಪಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆದಿದ್ದು, ಕಾರ್ಖಾನೆ ಬಂದ್ ಮಾಡಿಸುವ ಸಂಬಂಧ ತಮಿಳುನಾಡು ಸರ್ಕಾರದ ಜತೆಗೂ ಚರ್ಚಿಸಲಾಗುವುದು' ಎಂದರು.<br /> <br /> <strong>ಎಂಆರ್ಪಿ ದರ</strong>: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಗರಿಷ್ಠ ಚಿಲ್ಲರೆ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರು ಕೂಡ ದೂರು ನೀಡಬಹುದು ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಕಲಿ ರಸಗೊಬ್ಬರ ಸರಬರಾಜು ಮಾಡುವುದರ ಮೂಲಕ ರೈತರನ್ನು ವಂಚಿಸುತ್ತಿದ್ದ ತಮಿಳುನಾಡು ಮೂಲದ ಪ್ರಮುಖ ಆರೋಪಿ ದೇವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕೃಷಿ ಖಾತೆ ರಾಜ್ಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ವಿಧಾನಸಭೆಗೆ ತಿಳಿಸಿದರು.<br /> <br /> ನಕಲಿ ರಸಗೊಬ್ಬರದ ಹಾವಳಿ ಹೆಚ್ಚಾಗಿರುವ ಸಂಬಂಧ ಕೆಲವು ಸದಸ್ಯರು ಇತ್ತೀಚೆಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನಸೆಳೆದಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಸ್ವಯಂ ಹೇಳಿಕೆ ನೀಡಿದ ಸಚಿವರು `ಹಾಸನದ ಕೃಷಿ ಅಧಿಕಾರಿಗಳು ಮತ್ತು ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ ಪ್ರಮುಖ ಆರೋಪಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆದಿದ್ದು, ಕಾರ್ಖಾನೆ ಬಂದ್ ಮಾಡಿಸುವ ಸಂಬಂಧ ತಮಿಳುನಾಡು ಸರ್ಕಾರದ ಜತೆಗೂ ಚರ್ಚಿಸಲಾಗುವುದು' ಎಂದರು.<br /> <br /> <strong>ಎಂಆರ್ಪಿ ದರ</strong>: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಗರಿಷ್ಠ ಚಿಲ್ಲರೆ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರು ಕೂಡ ದೂರು ನೀಡಬಹುದು ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>