<p><strong>ನಾಗಪುರ(ಪಿಟಿಐ): </strong>`ಅಣ್ಣಾ ತಂಡದವರು ನಕ್ಸಲ್ರಂತೆ ವರ್ತಿಸುತ್ತಿದ್ದಾರೆ~ ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಆಪಾದಿಸಿದ್ದಾರೆ.ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಬಗ್ಗೆ ಪ್ರಸ್ತಾಪಿಸುತ್ತಿರುವ ಅಣ್ಣಾ ತಂಡ ಸಮಸ್ಯೆ ಪರಿಹಾರದ ಬಗ್ಗೆ ಹೆಚ್ಚು ಒತ್ತು ಕೊಡದೆ, ವ್ಯವಸ್ಥೆಯ ಹಳಿ ತಪ್ಪಿಸುವ ಬಗ್ಗೆ ಒಲವು ತೋರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.<br /> <br /> `ಮ್ಯಾಗ್ಸೆಸೆ ಪ್ರಶಸ್ತಿ ಗಳಿಸಿರುವವರು ಮಾತ್ರ ರಾಷ್ಟ್ರದ ಜನತೆಗೆ ಪಾಠ ಕಲಿಸುವ ಬುದ್ಧಿವಂತರಲ್ಲ~ ಎಂದೂ ಸ್ವಾಮಿ ಅಪರೋಕ್ಷವಾಗಿ ಅಣ್ಣಾ ತಂಡದ ಕಿರಣ್ ಬೇಡಿಯವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.<br /> <br /> <strong>ಇಂದು ಸಮಾಲೋಚನೆ (ಪುಣೆ ವರದಿ): </strong>ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಮಸೂದೆ ಕುರಿತ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುವ ಮುನ್ನ ಶುಕ್ರವಾರ ತಮ್ಮ ತಂಡದ ಸದಸ್ಯರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಅಣ್ಣಾ ಹಜಾರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ(ಪಿಟಿಐ): </strong>`ಅಣ್ಣಾ ತಂಡದವರು ನಕ್ಸಲ್ರಂತೆ ವರ್ತಿಸುತ್ತಿದ್ದಾರೆ~ ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಆಪಾದಿಸಿದ್ದಾರೆ.ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಬಗ್ಗೆ ಪ್ರಸ್ತಾಪಿಸುತ್ತಿರುವ ಅಣ್ಣಾ ತಂಡ ಸಮಸ್ಯೆ ಪರಿಹಾರದ ಬಗ್ಗೆ ಹೆಚ್ಚು ಒತ್ತು ಕೊಡದೆ, ವ್ಯವಸ್ಥೆಯ ಹಳಿ ತಪ್ಪಿಸುವ ಬಗ್ಗೆ ಒಲವು ತೋರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.<br /> <br /> `ಮ್ಯಾಗ್ಸೆಸೆ ಪ್ರಶಸ್ತಿ ಗಳಿಸಿರುವವರು ಮಾತ್ರ ರಾಷ್ಟ್ರದ ಜನತೆಗೆ ಪಾಠ ಕಲಿಸುವ ಬುದ್ಧಿವಂತರಲ್ಲ~ ಎಂದೂ ಸ್ವಾಮಿ ಅಪರೋಕ್ಷವಾಗಿ ಅಣ್ಣಾ ತಂಡದ ಕಿರಣ್ ಬೇಡಿಯವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.<br /> <br /> <strong>ಇಂದು ಸಮಾಲೋಚನೆ (ಪುಣೆ ವರದಿ): </strong>ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಮಸೂದೆ ಕುರಿತ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುವ ಮುನ್ನ ಶುಕ್ರವಾರ ತಮ್ಮ ತಂಡದ ಸದಸ್ಯರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಅಣ್ಣಾ ಹಜಾರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>