<p><strong>ಬೆಂಗಳೂರು (ಐಎಎನ್ಎಸ್): </strong>ರಾಜ್ಯದಲ್ಲಿ ಸಕ್ರಿಯರಾಗಿರುವ ನಕ್ಸಲರನ್ನು ಮಾತುಕತೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆಹ್ವಾನ ನೀಡಿದ್ದಾರೆ.<br /> <br /> ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಸ್ಥಳಿಯ ಪತ್ರಿಕೆಗಳ ಸಂಪಾದಕರು ಹಾಗೂ ಸುದ್ದಿಸಂಸ್ಥೆಗಳ ಬ್ಯೂರೋ ಮುಖ್ಯಸ್ಥರೊಂದಿಗೆ ಮಾತನಾಡುತ್ತಿದ್ದಾಗ ಈ ವಿಷಯ ತಿಳಿಸಿದರು.<br /> <br /> ನಕ್ಸಲರು ತುಳಿದಿರುವ ಹಾದಿ ಕಾನೂನಿಗೆ ವಿರುದ್ಧ. ಹಾಗಾಗಿ ಅವರು ಯಾವುದೇ ವಿಷಯಕ್ಕೆ ಸಂಬಂಧಪಟ್ಟಂತೆ ಮಾತುಕತೆಗೆ ಬರುವುದಾದರೆ ನಾವು ಅದನ್ನು ಸ್ವಾಗತಿಸುತ್ತೇವೆ. ಹಿಂಸಾ ಮಾರ್ಗ ಬಿಟ್ಟು ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ನಕ್ಸಲರು ಯತ್ನಿಸಬೇಕೆಂದು ತಿಳಿಸಿದರು.<br /> <br /> ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಕ್ಸಲ್ ಸಮಸ್ಯೆ ಅಷ್ಟಿಲ್ಲ. ಬರೇ ಮೂರು-ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಆರ್ಥಿಕವಾಗಿ ಹಿಂದುಳಿದಿರುವವರಿಗೆ ಮುಖ್ಯವಾಗಿ ಬುಡಕಟ್ಟು ಜನಾಂಗದವರಿಗೆ ಸರ್ಕಾರ ಸರ್ವರೀತಿಯಲ್ಲೂ ನೆರವು ನೀಡಲು ಸಿದ್ದವಿದೆ. ನಕ್ಸಲರೂ ಕೂಡ ತಮ್ಮ ಆಯುಧಗಳನ್ನು ಒಪ್ಪಿಸಿ ಶರಣಾಗತರಾದರೆ ಅವರಿಗೂ ಸೂಕ್ತ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.<br /> <br /> ಮಾವೋವಾದಿಗಳ ಚಟುವಟಿಕೆ ಚಿಂತೆಯ ವಿಷಯ ಎಂಬುದನ್ನು ಒಪ್ಪಿಕೊಂಡ ಅವರು ಆದರೆ ನಕ್ಸಲ್ ಪೀಡಿತ ಜಿಲ್ಲೆಗಳನ್ನು ಸಂತ್ರಸ್ಥ ಪ್ರದೇಶಗಳೆಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಲು ತಾವು ತಯಾರಿಲ್ಲ. ರಾಜ್ಯ ಸರ್ಕಾರದ ನಕ್ಸಲ್ ನಿಗ್ರಹ ಪಡೆ ಸಮಸ್ಯೆ ಬಗೆಹರಿಸಲು ಸಶಕ್ತವಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಐಎಎನ್ಎಸ್): </strong>ರಾಜ್ಯದಲ್ಲಿ ಸಕ್ರಿಯರಾಗಿರುವ ನಕ್ಸಲರನ್ನು ಮಾತುಕತೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆಹ್ವಾನ ನೀಡಿದ್ದಾರೆ.<br /> <br /> ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಸ್ಥಳಿಯ ಪತ್ರಿಕೆಗಳ ಸಂಪಾದಕರು ಹಾಗೂ ಸುದ್ದಿಸಂಸ್ಥೆಗಳ ಬ್ಯೂರೋ ಮುಖ್ಯಸ್ಥರೊಂದಿಗೆ ಮಾತನಾಡುತ್ತಿದ್ದಾಗ ಈ ವಿಷಯ ತಿಳಿಸಿದರು.<br /> <br /> ನಕ್ಸಲರು ತುಳಿದಿರುವ ಹಾದಿ ಕಾನೂನಿಗೆ ವಿರುದ್ಧ. ಹಾಗಾಗಿ ಅವರು ಯಾವುದೇ ವಿಷಯಕ್ಕೆ ಸಂಬಂಧಪಟ್ಟಂತೆ ಮಾತುಕತೆಗೆ ಬರುವುದಾದರೆ ನಾವು ಅದನ್ನು ಸ್ವಾಗತಿಸುತ್ತೇವೆ. ಹಿಂಸಾ ಮಾರ್ಗ ಬಿಟ್ಟು ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ನಕ್ಸಲರು ಯತ್ನಿಸಬೇಕೆಂದು ತಿಳಿಸಿದರು.<br /> <br /> ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಕ್ಸಲ್ ಸಮಸ್ಯೆ ಅಷ್ಟಿಲ್ಲ. ಬರೇ ಮೂರು-ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಆರ್ಥಿಕವಾಗಿ ಹಿಂದುಳಿದಿರುವವರಿಗೆ ಮುಖ್ಯವಾಗಿ ಬುಡಕಟ್ಟು ಜನಾಂಗದವರಿಗೆ ಸರ್ಕಾರ ಸರ್ವರೀತಿಯಲ್ಲೂ ನೆರವು ನೀಡಲು ಸಿದ್ದವಿದೆ. ನಕ್ಸಲರೂ ಕೂಡ ತಮ್ಮ ಆಯುಧಗಳನ್ನು ಒಪ್ಪಿಸಿ ಶರಣಾಗತರಾದರೆ ಅವರಿಗೂ ಸೂಕ್ತ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.<br /> <br /> ಮಾವೋವಾದಿಗಳ ಚಟುವಟಿಕೆ ಚಿಂತೆಯ ವಿಷಯ ಎಂಬುದನ್ನು ಒಪ್ಪಿಕೊಂಡ ಅವರು ಆದರೆ ನಕ್ಸಲ್ ಪೀಡಿತ ಜಿಲ್ಲೆಗಳನ್ನು ಸಂತ್ರಸ್ಥ ಪ್ರದೇಶಗಳೆಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಲು ತಾವು ತಯಾರಿಲ್ಲ. ರಾಜ್ಯ ಸರ್ಕಾರದ ನಕ್ಸಲ್ ನಿಗ್ರಹ ಪಡೆ ಸಮಸ್ಯೆ ಬಗೆಹರಿಸಲು ಸಶಕ್ತವಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>