<p><strong>ಭುವನೇಶ್ವರ (ಪಿಟಿಐ):</strong> ಮಾಲ್ಕನ್ಗಿರಿ ಜಿಲ್ಲಾಧಿಕಾರಿ ಆರ್.ವಿ.ಕೃಷ್ಣ ಅವರನ್ನು ಒತ್ತೆಯಿಂದ ಬಿಡುಗಡೆ ಮಾಡಿಸಿಕೊಳ್ಳುವಾಗ ಸಂಧಾನಕಾರರ ಮೂಲಕ ಮಾವೊವಾದಿಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಒಡಿಶಾ ಸರ್ಕಾರ ತಿಳಿಸಿದೆ.<br /> <br /> ಸಂಧಾನಕಾರರಾಗಿ ಕಾರ್ಯನಿರ್ವಹಿಸಿದ್ದ ಪ್ರೊ. ಹರಗೋಪಾಲ್, ಪ್ರೊ. ಆರ್.ಸೋಮೇಶ್ವರ್ ರಾವ್ ಮತ್ತು ದಂಡಪಾಣಿ ಮೊಹಂತಿ ಅವರು ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಅವರನ್ನು ಭೇಟಿ ಮಾಡಿ ಸಂದರ್ಭದಲ್ಲಿ ಈ ಭರವಸೆ ನೀಡಲಾಗಿದೆ. ಐದು ದಿನಗಳ ಕಾಲ ನಡೆದ ಸಂಧಾನ ಮಾತುಕತೆಯಲ್ಲಿ ಐದು ವಿಚಾರಗಳ ಬಗ್ಗೆ ಎರಡೂ ಕಡೆಯೂ ಒಪ್ಪಿಕೊಳ್ಳಲಾಗಿದೆ ಹಾಗೂ ಸರ್ಕಾರ ನೀಡಿರುವ ಭರವಸೆಗಳನ್ನು ತಪ್ಪದೆ ಈಡೇರಿಸಲಾಗುತ್ತದೆ ಎಂದು ಪಟ್ನಾಯಿಕ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಅವರನ್ನು ಒತ್ತೆಯಾಗಿಟ್ಟುಕೊಂಡು ಮುಂದಿಟ್ಟ ಹೆಚ್ಚುವರಿ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ.ಆದಿವಾಸಿಗಳ ವಿರುದ್ಧ ಹೂಡಲಾಗಿರುವ ಮೊಕದ್ದಮೆಗಳನ್ನು ಮೂರು ತಿಂಗಳಲ್ಲಿ ವಾಪಸ್ ಪಡೆಯಲಾಗುವುದು ಮತ್ತು ಪ್ರಮುಖ ಮಾವೊವಾದಿ ಮುಖಂಡರ ವಿರುದ್ಧದ ಪ್ರಕರಣ ಕೈಬಿಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ (ಪಿಟಿಐ):</strong> ಮಾಲ್ಕನ್ಗಿರಿ ಜಿಲ್ಲಾಧಿಕಾರಿ ಆರ್.ವಿ.ಕೃಷ್ಣ ಅವರನ್ನು ಒತ್ತೆಯಿಂದ ಬಿಡುಗಡೆ ಮಾಡಿಸಿಕೊಳ್ಳುವಾಗ ಸಂಧಾನಕಾರರ ಮೂಲಕ ಮಾವೊವಾದಿಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಒಡಿಶಾ ಸರ್ಕಾರ ತಿಳಿಸಿದೆ.<br /> <br /> ಸಂಧಾನಕಾರರಾಗಿ ಕಾರ್ಯನಿರ್ವಹಿಸಿದ್ದ ಪ್ರೊ. ಹರಗೋಪಾಲ್, ಪ್ರೊ. ಆರ್.ಸೋಮೇಶ್ವರ್ ರಾವ್ ಮತ್ತು ದಂಡಪಾಣಿ ಮೊಹಂತಿ ಅವರು ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಅವರನ್ನು ಭೇಟಿ ಮಾಡಿ ಸಂದರ್ಭದಲ್ಲಿ ಈ ಭರವಸೆ ನೀಡಲಾಗಿದೆ. ಐದು ದಿನಗಳ ಕಾಲ ನಡೆದ ಸಂಧಾನ ಮಾತುಕತೆಯಲ್ಲಿ ಐದು ವಿಚಾರಗಳ ಬಗ್ಗೆ ಎರಡೂ ಕಡೆಯೂ ಒಪ್ಪಿಕೊಳ್ಳಲಾಗಿದೆ ಹಾಗೂ ಸರ್ಕಾರ ನೀಡಿರುವ ಭರವಸೆಗಳನ್ನು ತಪ್ಪದೆ ಈಡೇರಿಸಲಾಗುತ್ತದೆ ಎಂದು ಪಟ್ನಾಯಿಕ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಅವರನ್ನು ಒತ್ತೆಯಾಗಿಟ್ಟುಕೊಂಡು ಮುಂದಿಟ್ಟ ಹೆಚ್ಚುವರಿ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ.ಆದಿವಾಸಿಗಳ ವಿರುದ್ಧ ಹೂಡಲಾಗಿರುವ ಮೊಕದ್ದಮೆಗಳನ್ನು ಮೂರು ತಿಂಗಳಲ್ಲಿ ವಾಪಸ್ ಪಡೆಯಲಾಗುವುದು ಮತ್ತು ಪ್ರಮುಖ ಮಾವೊವಾದಿ ಮುಖಂಡರ ವಿರುದ್ಧದ ಪ್ರಕರಣ ಕೈಬಿಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>