<p><strong>ಕಾರವಾರ:</strong> `ಭಯೋತ್ಪಾದನೆ ಸಂಘಟನೆಗಳಿಗೆ ಸೇರಿದ `ಸ್ಲೀಪರ್ ಸೆಲ್~ ರಹಸ್ಯವಾಗಿ ಚಟುವಟಿಕೆ ನಡೆಸುತ್ತಿದೆ ಎನ್ನುವುದು ಗೊತ್ತಿರುವ ಸಂಗತಿ. ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಾಣಿಸದಿದ್ದರೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದು ಕಷ್ಟಕರವಾಗಲಿದೆ~ ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ ರೆಡ್ಡಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪೊಲೀಸ್ ಇಲಾಖೆ ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತಿದೆ.</p>.<p>`ಕೆಲವು ಭಯೋತ್ಪಾದಕ ಸಂಘಟನೆಗಳು ನಕ್ಸಲರೊಡನೆ ಸೇರಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವುದು ಸುಳ್ಳು. ಇಂತಹ ಊಹಾಪೋಹಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>`ನಕ್ಸಲರ ವಿರುದ್ಧ ಕೈಗೊಂಡಿರುವ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದೆ. ನಕ್ಸಲ್ ಪಡೆಗಳಿಂದ ವಶಪಡಿಸಿಕೊಂಡಿರುವ ಮದ್ದುಗುಂಡುಗಳು ಎಲ್ಲಿಂದ ಸರಬರಾಜು ಆಗಿವೆ ಎನ್ನುವುದರ ಕುರಿತ ತನಿಖೆ ನಡೆಯುತ್ತಿದೆ~ ಎಂದು ರೆಡ್ಡಿ ನುಡಿದರು.</p>.<p>`ಅರಣ್ಯದಲ್ಲಿ ಅಷ್ಟೇ ಅಲ್ಲ ಅರಣ್ಯದಿಂದ ಹೊರಗಿದ್ದು ನಕ್ಸಲ್ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಹೋದರೆ ಅದನ್ನು ಬೇರೆಯದೇ ಆದ ರೀತಿಯಲ್ಲಿ ಅರ್ಥೈಸಲಾಗುತ್ತದೆ. ಮಾನವ ಹಕ್ಕು ಉಲ್ಲಂಘನೆ ಆಗಿದೆ ಎನ್ನುವ ಕೂಗು ಕೇಳಿ ಬರುತ್ತದೆ. ಈ ಕಾರಣದಿಂದಾಗಿ ಪೊಲೀಸರು ಸಮತೋಲನ ಕಾಯ್ದುಕೊಂಡು ಹೋಗಬೇಕಾಗಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> `ಭಯೋತ್ಪಾದನೆ ಸಂಘಟನೆಗಳಿಗೆ ಸೇರಿದ `ಸ್ಲೀಪರ್ ಸೆಲ್~ ರಹಸ್ಯವಾಗಿ ಚಟುವಟಿಕೆ ನಡೆಸುತ್ತಿದೆ ಎನ್ನುವುದು ಗೊತ್ತಿರುವ ಸಂಗತಿ. ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಾಣಿಸದಿದ್ದರೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದು ಕಷ್ಟಕರವಾಗಲಿದೆ~ ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ ರೆಡ್ಡಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪೊಲೀಸ್ ಇಲಾಖೆ ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತಿದೆ.</p>.<p>`ಕೆಲವು ಭಯೋತ್ಪಾದಕ ಸಂಘಟನೆಗಳು ನಕ್ಸಲರೊಡನೆ ಸೇರಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವುದು ಸುಳ್ಳು. ಇಂತಹ ಊಹಾಪೋಹಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>`ನಕ್ಸಲರ ವಿರುದ್ಧ ಕೈಗೊಂಡಿರುವ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದೆ. ನಕ್ಸಲ್ ಪಡೆಗಳಿಂದ ವಶಪಡಿಸಿಕೊಂಡಿರುವ ಮದ್ದುಗುಂಡುಗಳು ಎಲ್ಲಿಂದ ಸರಬರಾಜು ಆಗಿವೆ ಎನ್ನುವುದರ ಕುರಿತ ತನಿಖೆ ನಡೆಯುತ್ತಿದೆ~ ಎಂದು ರೆಡ್ಡಿ ನುಡಿದರು.</p>.<p>`ಅರಣ್ಯದಲ್ಲಿ ಅಷ್ಟೇ ಅಲ್ಲ ಅರಣ್ಯದಿಂದ ಹೊರಗಿದ್ದು ನಕ್ಸಲ್ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಹೋದರೆ ಅದನ್ನು ಬೇರೆಯದೇ ಆದ ರೀತಿಯಲ್ಲಿ ಅರ್ಥೈಸಲಾಗುತ್ತದೆ. ಮಾನವ ಹಕ್ಕು ಉಲ್ಲಂಘನೆ ಆಗಿದೆ ಎನ್ನುವ ಕೂಗು ಕೇಳಿ ಬರುತ್ತದೆ. ಈ ಕಾರಣದಿಂದಾಗಿ ಪೊಲೀಸರು ಸಮತೋಲನ ಕಾಯ್ದುಕೊಂಡು ಹೋಗಬೇಕಾಗಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>